ಬೈರತಿ ಸುರೇಶ್ ಒಬ್ಬ ಹೊಲಸು ಮನಸ್ಸಿನ ಸ್ತ್ರೀ ನಿಂದಕ: ಬಿಜೆಪಿ ನಾಯಕರ ಆಕ್ರೋಶ
ಬೆಂಗಳೂರು, ಅಕ್ಟೋಬರ್ 21: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಯಡಿಯೂರಪ್ಪ ಅವರ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಪಾತ್ರವಿದೆ ಎಂಬ ಅನುಮಾನವಿದೆ. ಅವರ ಸಾವಿನ ಬಗ್ಎಯೂ ತನಿಖೆ ಆಗಬೇಕು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕೇವಲ ಮೂಡ ಹಗರಣದ ಕಡತಗಳು ಸಚಿವ ಬೈರತಿ ಸುರೇಶ್ ಅವರು ಹೆಲಿಕಾಪ್ಟರ್ ನಲ್ಲಿ ಹೊತ್ತು ತಂದಿದ್ದಾರೆಂಬ ಸರ್ವರೂ ಮಾತನಾಡುವ ವಿಷಯವನ್ನು ಕೇಂದ್ರ ಸಚಿವರಾದ ಕು. ಶೋಭಾ ಕರಂದ್ಲಾಜೆ ಯವರು ಹೇಳಿದ ಮಾತ್ರಕ್ಕೆ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಶ್ರೀಮತಿಯವರಾದ ದಿ. ಮೈತ್ರಾದೇವಿ ಯವರ ನಿಧನದಲ್ಲಿ ಶೋಭಾ ಕರಂದ್ಲಾಜೆ ಯವರ ಕೈವಾಡ ಇದೆ ಎಂಬ ಅವಹೇಳನ ಮತ್ತು ಮಾನಹಾನಿ ಹೇಳಿಕೆ ನೀಡಿರುವ ಬೈರತಿ ಸುರೇಶ್ ರವರು ಸ್ತ್ರೀ ನಿಂದಕ ಹಾಗೂ ಹೊಲಸು ಅಭಿವೃಚಿಯ ನೀಚ ರಾಜಕಾರಣಿಯಾಗಿದ್ದಾರೆ.

ಒಂದು ಹೇಳಿಕೆ ನೀಡಿದ ಕಾರಣ ಮಹಿಳೆಯರ ಮಾನಹಾನಿ ಮಾಡುವಂಥ ಇಂತಹ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಸುರೇಶ್ ಅವರ ಹೇಳಿಕೆ ಮಾನಹಾನಿಕರವಾಗಿದ್ದು ಇಂತಹ ವ್ಯಕ್ತಿಗಳು ಸಚಿವ ಸ್ಥಾನದಲ್ಲಿ ಮುಂದುವರಿಯಲು ಯೋಗ್ಯರಲ್ಲ ಎಂಬುದನ್ನು ಬೈರತಿ ಸುರೇಶ್ ಅವರು ಸಾಭೀತು ಪಡಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ಸಹ ಎತ್ತಿಹಿಡಿದಿದೆ. ಈ ರೀತಿ ಬೇಜವಾಬ್ದಾರಿ ಹೇಳಿಕೆ ಇಡೀ ಹೆಣ್ಣು ಕುಲಕ್ಕೆ ಅಪಮಾನ ಮಾಡಿದಂತಾಗಿದೆ. ಇಂತಹ ಹೇಳಿಕೆಗಳನ್ನು ಎಲ್ಲಾ ಜನರೂ ಖಂಡಿಸಬೇಕು.
ಒಬ್ಬ ಸಚಿವನಾಗಿ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ತಕ್ಷಣ ಶೋಭಾ ಕರಂದ್ಲಾಜೆ ಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ದಿ.ಮೈತ್ರಾದೇವಿ ನಮ್ಮನ್ನು ಅಗಲಿದಾಗ ರಾಜಕೀಯದಲ್ಲೇ ಇಲ್ಲಿದ ವ್ಯಕ್ತಿ, ರಾಜಕೀಯ ಹೇಳಿಕೆ ನೀಡಿದ ಕಾರಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಧಿಕಾರದ ಮಧ ತಲೆಗತ್ತಿ ಇಂತಹಾ ಅಟ್ಟಹಾಸ ಮೆರೆದಿದ್ದಾರೆ ಎನಿಸುತ್ತಿದೆ. ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮಹಿಳೆಯರು ನಿಮ್ಮ ತಪ್ಪುಗಳನ್ನು ತೋರಿಸುವುದು ಅಪರಾಧವೇ? ಹಾಗೆ ಹೇಳಿಕೆ ಕೊಟ್ಟು ಆಗ್ರಹಿಸಿದರೆ ಅವರ ಗುಣನಡತೆಯ ಕುರಿತು ಮಾತನಾಡುವುದು ಎಷ್ಟು ಸರಿ ಎಂದೂ ಅವರು ಪ್ರಶ್ನಿಸಿದ್ದಾರೆ.
ಬೈರತಿ ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ: ಭಾರತಿ ಶೆಟ್ಟಿ
ರಾಜ್ಯದ ಕಾಂಗ್ರೆಸ್ ಸರಕಾರದ ಸಚಿವ ಬೈರತಿ ಸುರೇಶ್ ಅವರು ಮಹಿಳೆಯರ ಮಾನಹಾನಿ ಮಾಡುವಂಥ ಹೇಳಿಕೆ ನೀಡಿದ್ದನ್ನು ವಿಧಾನಪರಿಷತ್ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸುರೇಶ್ ಅವರ ಹೇಳಿಕೆ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಸಿದ್ಧ ಎಂದು ಅವರು ಎಚ್ಚರಿಸಿದ್ದಾರೆ.
ಸಚಿವ ಸ್ಥಾನದಲ್ಲಿರುವ ಬೈರತಿ ಸುರೇಶ್ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನಾನು ಶಿವಮೊಗ್ಗ ಜಿಲ್ಲೆಯವಳು; ಯಡಿಯೂರಪ್ಪಜೀ, ಮೈತ್ರಾದೇವಿ, ಶೋಭಾ ಕರಂದ್ಲಾಜೆ ಅವರನ್ನು ಹತ್ತಿರದಿಂದ ಬಲ್ಲವಳು. ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.
ಒಬ್ಬ ಸಚಿವನಾಗಿ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸಿ ಎಂದು ಅವರು ಆಗ್ರಹಿಸಿದ್ದಾರೆ.
ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಭ್ಯಾಸವಾಗಿದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವವರ ಗುಣನಡತೆ ಬಗ್ಗೆ ಮಾತನಾಡುವುದು ಅಕ್ಷಮ್ಯ. ಮೈತ್ರಾದೇವಿ ಅವರು ತಾಯಿ ಸಮಾನ. ಅವರು ಸಾವನ್ನಪ್ಪಿ ಹಲವಾರು ವರ್ಷಗಳು ಕಳೆದಿದ್ದು, ಈಗ ಅದರ ಕುರಿತು ಮಾತನಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದ್ದಾರೆ.
ಅವರು ಮೃತಪಡುವ ವೇಳೆ ಬೈರತಿ ಸುರೇಶ್ ಅವರು ಎಲ್ಲಿದ್ದರು? ಯಾವ ಹುದ್ದೆಯಲ್ಲಿದ್ದರು ಎಂದು ಪ್ರಶ್ನಿಸಿದ್ದು, ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮಹಿಳೆಯರು ನಿಮ್ಮ ತಪ್ಪುಗಳನ್ನು ತೋರಿಸುವುದು ಅಪರಾಧವೇ? ಹಾಗೆ ಹೇಳಿಕೆ ಕೊಟ್ಟು ಆಗ್ರಹಿಸಿದರೆ ಅವರ ಗುಣನಡತೆಯ ಕುರಿತು ಮಾತನಾಡುವುದು ಎಷ್ಟು ಸರಿ ಎಂದೂ ಅವರು ಪ್ರಶ್ನಿಸಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications