ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರಲ್ಲಿಯೇ ಒಡಕು: ಇದರಿಂದ ಯಾರಿಗೆ ಲಾಭ?
ಬೆಂಗಳೂರು, ಡಿಸೆಂಬರ್ 27: ಲಿಂಗಾಯತರಲ್ಲಿಯೇ ಬಲಿಷ್ಠ ಸಮುದಾಯವಾದ ಪಂಚಮಸಾಲಿ ಮೀಸಲಾತಿ ವಿಚಾರವೀಗ ರಾಜ್ಯ ಬಿಜೆಪಿಯನ್ನು ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿಸಿದೆ. ಚುನಾವಣೆಗೆ ಇನ್ನೇನು ನಾಲ್ಕೈದು ತಿಂಗಳು ಬಾಕಿ ಇರುವಾಗ ಮೀಸಲಾತಿಗೆ ಒತ್ತಾಯಿಸಿ ಹೋರಾಟವನ್ನು ತೀವ್ರಗೊಳಿಸಲಾಗಿದೆ. ಕೂಡಲಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಕಷ್ಟ ತಂದೊಡ್ಡಿದೆ.
ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ಸಾರ್ವಜನಿಕವಾಗಿಯೇ ಬೈದಾಡಿಕೊಂಡಿದ್ದಾರೆ. ಪಂಚಮಸಾಲಿಗಳ ಪ್ರಬಲ ನಾಯಕರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಚಿವ ಮುರುಗೇಶ ನಿರಾಣಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.
ಪಂಚಮಸಾಲಿ ಮೀಸಲಾತಿ ವಿರುದ್ಧ ನಿರಾಣಿ ಇದ್ದಾರೆ ಎಂಬುದು ಯಾತ್ನಾಳ್ ಅವರ ವಾದ. ಇದೇ ವಾದವನ್ನು ಜಯ ಮೃತ್ಯುಂಜಯ ಸ್ವಾಮೀಜಿ ಸಹ ಮುಂದಿಟ್ಟಿದ್ದಾರೆ. ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ನಿರಾಣಿ ಅವರು ಸ್ವಾಮೀಜಿ ಹಾಗೂ ಯತ್ನಾಳ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 'ಸ್ವಾಮೀಜಿ ತಮ್ಮ ವಾದವನ್ನು ಸಾಬೀತುಪಡಿಸಲಿ. ಇಲ್ಲವಾದರೆ, ನೇರವಾಗಿ ರಾಜಕೀಯಕ್ಕೆ ಬರಲಿ' ಎಂದು ನಿರಾಣಿ ಹೇಳಿದ್ದಾರೆ.

ಇದು ಬಿಜೆಪಿಗೆ ಸಂಕಷ್ಟ ತಂದೊಡ್ಡಿದೆ. ಕಾರಣ, ಲಿಂಗಾಯತರಲ್ಲಿಯೇ ಬಹುಸಂಖ್ಯಾತರನ್ನು ಹೊಂದಿರುವುದು ಪಂಚಮಸಾಲಿ ಸಮುದಾಯ. ಈ ಸಮುದಾಯ ಸುಮಾರು 90 ಲಕ್ಷಕ್ಕೂ ಅಧಿಕ ಜನರನ್ನು ಒಳಗೊಂಡಿದೆ. ಹೀಗಾಗಿ, ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದ ಮತಗಳಿಗೆ ಮಹತ್ವವಿದೆ. ಉತ್ತರ ಕರ್ನಾಟಕದ ಅನೇಕ ಬಿಜೆಪಿ ಶಾಸಕರಿಗೂ ಪಂಚಮಸಾಲಿ ಮತಗಳು ನಿರ್ಣಾಯಕವೆಂದೇ ಹೇಳಬಹುದು. ಈ ಕಾರಣಕ್ಕಾಗಿ ಪಂಚಮಸಾಲಿ ಸಮುದಾಯ ಬಿಜೆಪಿಗೆ ಹೆಚ್ಚು ಬೇಕಾಗಿದೆ.
ಸಚಿವ ಸ್ಥಾನಕ್ಕೆ ಆಗ್ರಹ, ಮೀಸಲಾತಿಗೆ ಪಟ್ಟು
ಇತ್ತ ಪ್ರಬಲ ಶಾಸಕರು ಸಚಿವ ಸ್ಥಾನಕ್ಕೆ ಆಗ್ರಹಿಸಿದ್ದಾರೆ. ಅತ್ತ ಮೀಸಲಾತಿಗೆ ಪಟ್ಟು ಹೆಚ್ಚಾಗುತ್ತಿದೆ. ಇದೇ ಕಾರಣಕ್ಕೆ ಸಿಎಂ ಬೊಮ್ಮಾಯಿ ಅವರು ಬಿಜೆಪಿಯ ಹೈಕಮಾಂಡ್ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದಾರೆ. ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಚಿವ ಸ್ಥಾನದ ಆಕಾಂಕ್ಷಿಗಳು. ಇವರ ಮೇಲೆ ಗಂಭೀರ ಆರೋಪ ಕೇಳಿಬಂದಿವೆ. ಇಂತಹ ಸಮಯದಲ್ಲಿ ಇವರಿಗೆ ಸಚಿವ ಸ್ಥಾನ ನೀಡಿದರೆ, ಬಿಜೆಪಿಗೆ ಲಾಭವೇನು? ಅಥವಾ ನಷ್ಟವೇನು? ಎಂಬುದನ್ನು ಬೊಮ್ಮಾಯಿ ಅಳೆದೂ ತೂಗಿ ನಿರ್ಣಯ ಮಾಡಬೇಕಿದೆ.

ಮೀಸಲಾತಿ ವಿಚಾರದಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಇದೆ. ಒಂದು ವೇಳೆ, ಪಂಚಮಸಾಲಿಗಳಿಗೆ ಮೀಸಲಾತಿ ನೀಡಿದರೆ, ಪ್ರಬಲ ಒಕ್ಕಲಿಗ ಸಮುದಾಯದ ಮೀಸಲಾತಿ ಬೇಡಿಕೆ ತೀವ್ರಗೊಳ್ಳುವುದಂತೂ ಸ್ಪಷ್ಟವಾಗಿದೆ. ಎರಡು ಪ್ರಬಲ ಸಮುದಾಯಗಳ ಬೇಡಿಕೆ ವಿಚಾರವಾಗಿ ಸಿಎಂ ಬೊಮ್ಮಾಯಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕಾಯ್ದು ನೋಡಬೇಕಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications