Dharmasthala: ಧರ್ಮಸ್ಥಳದಲ್ಲಿ ಬೀಡುಬಿಟ್ಟ ರಾಜ್ಯ ಬಿಜೆಪಿ ನಾಯಕರು, ಧರ್ಮಾಧಿಕಾರಿ ಭೇಟಿಯಾಗಿ ಹೇಳಿದ್ದೇನು?
ಧರ್ಮಸ್ಥಳ ಕ್ಷೇತ್ರದ ಕುರಿತು ನಿರಂತರವಾಗಿ ಅಪಪ್ರಚಾರ ನಡೆಯುತ್ತಿದೆ ಎಂದು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀಮಂಜುನಾಥನ ಸನ್ನಿಧಿಗೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಗುಂಪು ಧರ್ಮಸ್ಥಳದಲ್ಲಿ ಬೀಡುಬಿಟ್ಟಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರದರ್ಶಕ ತನಿಖೆಯನ್ನು ನಾವು ಸ್ವಾಗತಿಸಿದ್ದೆವು. ಆದರೆ ತನಿಖೆಯ ಭರದಲ್ಲಿ ಧರ್ಮಸ್ಥಳದ ಕುರಿತು ಅಪಪ್ರಚಾರ, ಅವಹೇಳನಗಳು ಮಿತಿಮೀರಿ ನಡೆಯುತ್ತಿವೆ. ಇದರ ಹಿಂದೆ ಷಡ್ಯಂತ್ರವಿದೆ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಕುರಿತಾದ ಅಪಪ್ರಚಾರಕ್ಕೆ ಕಡಿವಾಣ ಹಾಕದೇ ಇರುವುದು ಕಾಂಗ್ರೆಸ್ ಸರ್ಕಾರದ ಅಪರಾಧ. ಇದಕ್ಕಾಗಿ ಮುಖ್ಯಮಂತ್ರಿಗಳು ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ನಾಡಿನ ಕೋಟ್ಯಂತರ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರದ ವಿರುದ್ಧ ಧರ್ಮಸ್ಥಳದ ಶ್ರೇಷ್ಠತೆಯನ್ನು ಎತ್ತಿ ಹಿಡಿಯಲು ಬಿಜೆಪಿ ಕಟ್ಟಿಬದ್ಧವಾಗಿ ಧರ್ಮಸ್ಥಳದ ಭಕ್ತರ ದನಿಯಾಗಿ ನಿಲ್ಲಲಿದೆ. ತನಿಖೆಯನ್ನು ಯಾರೂ ವಿರೋಧಿಸಿಲ್ಲ, ಸತ್ಯದ ಬಾಗಿಲು ತೆರೆಯಲಿದೆ, ಧರ್ಮಸ್ಥಳದ ಧರ್ಮದ ಬೆಳಕು ಬೆಳಗಲಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಷಡ್ಯಂತ್ರಗಳಿಗೆ ಇನ್ನು ಮುಂದೆ ತಕ್ಕ ಉತ್ತರ ಸಿಗಲಿದೆ. ರಾಜ್ಯ ಸರ್ಕಾರ ಧರ್ಮಸ್ಥಳದ ಹೆಸರಿನಲ್ಲಿ ಆಸಕ್ತ ಹಿತಾಸಕ್ತಿಗಳು ಸೃಷ್ಟಿಸಿರುವ ಗೊಂದಲಕ್ಕೆ ಅಂತಿಮ ತೆರೆ ಎಳೆಯುವ ನಿಟ್ಟಿನಲ್ಲಿ ಈವರೆಗಿನ ಎಸ್ಐಟಿ ತನಿಖೆಯ ವರದಿ ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ತನಿಖೆಗೂ ಮೊದಲೇ ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಕುರಿತು ಅಪಪ್ರಚಾರ ನಡೆಸಿದವರ ಹಿನ್ನೆಲೆಯ ಬಗ್ಗೆಯೂ ತನಿಖೆ ನಡೆಯಬೇಕು. ಈಗಾಗಲೇ ಉಪಮುಖ್ಯಮಂತ್ರಿಗಳು ತನಿಖೆಯ ಹಿಂದೆ ಷಡ್ಯಂತ್ರವಿದೆ ಎಂದಿದ್ದಾರೆ. ಆ ಷಡ್ಯಂತ್ರ ಏನು ಎಂಬುದನ್ನ ಕೂಡ ಬಹಿರಂಗಪಡಿಸಬೇಕು. ಅಪಪ್ರಚಾರದ ಮೂಲಕ ಕೋಟ್ಯಂತರ ಭಕ್ತರ ನಂಬಿಕೆಗೆ ಘಾಸಿಯಾಗುವ ರೀತಿ ವರ್ತನೆ ಮಾಡಿದವರ ಮೇಲೆ ಕ್ರಮ ಯಾಕಿಲ್ಲ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದಿಂದ ಕೋಟ್ಯಂತರ ಭಕ್ತರು, ಧರ್ಮಾಧಿಕಾರಿಗಳು ಸಹ ನೊಂದಿದ್ದಾರೆ. ಕಳಂಕ ಹಚ್ಚುವ ಎಡಪಂಥೀಯರ ಷಡ್ಯಂತ್ರದೊಂದಿಗೆ ಸರ್ಕಾರವೂ ಸೇರಿದೆ ಎಂಬುದು ಭಕ್ತರ ಅನಿಸಿಕೆ. ಕ್ಷೇತ್ರಕ್ಕೆ ಕಳಂಕ ಹಚ್ಚುವವರನ್ನು ನಾವು ಸಹಿಸುವುದಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಹಿಂದೆ ಟಿಪ್ಪು ಗ್ಯಾಂಗ್
ಹಿಂದೂಗಳನ್ನು ಅವಹೇಳನ ಮಾಡುವ ಷಡ್ಯಂತ್ರಗಳು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಹೆಚ್ಚಾಗಿವೆ. ಧರ್ಮಸ್ಥಳದ ವಿಚಾರವಾಗಿ ಸಿದ್ದರಾಮಯ್ಯನವರ ಹಿಂದೆ ಟಿಪ್ಪು ಗ್ಯಾಂಗ್ ಇದೆ. ಒಬ್ಬ ಅನಾಮಿಕ ನೀಡಿದ ದೂರನ್ನು ದೊಡ್ಡದಾಗಿ ಬಿಂಬಿಸಿದ್ದಾರೆ. ನಗರ ನಕ್ಸಲರು, ಅನಾಮಿಕ ಮುಸುಕುಧಾರಿಯಿಂದ ಸರ್ಕಾರವೇ ಈಗ ಮುಸುಕು ಹಾಕಿಸಿಕೊಂಡಿದೆ ಎಂದು ಆರ್.ಅಶೋಕ್ ದೂರಿದ್ದಾರೆ. ಪ್ರತಿ ದಿನ ಸಾವಿರಾರು ದೂರುಗಳು ಬರುತ್ತವೆ. ಈ ಎಲ್ಲದಕ್ಕೂ ಸರ್ಕಾರ ಎಸ್ಐಟಿ ರಚಿಸುತ್ತದೆಯೇ? ಹಿಂದೂ ದೇವಸ್ಥಾನದ ವಿಷಯದಲ್ಲಿ ಈ ರೀತಿ ನಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮಸೀದಿ ವಿಷಯದಲ್ಲಿ ಇದೇ ರೀತಿ ನಡೆದುಕೊಳ್ಳುತ್ತದೆಯೇ? ಎಂದು ಕಿಡಿಕಾರಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications