ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿ ಉಸ್ತುವಾರಿ ಬದಲು? ಮುರಳೀಧರ ರಾವ್ ಗೆ ಕೊಕ್?

ಕರ್ನಾಟಕದ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಅವರಿಂದ ರಾಮ್ ಮಾಧವ್ ಅವರಿಗೆ ವರ್ಗಾವಣೆಯಾಗುವ ಸಾಧ್ಯತೆ. ಆರೆಸ್ಸೆಸ್ ಹಿರಿಯ ನಾಯಕ ರಾಮ್ ಮಾಧವ್ ರಾವ್ ಅವರಿಗೀಗ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಉಸ್ತುವಾರಿ.

|
Google Oneindia Kannada News

ಬೆಂಗಳೂರು, ಆಗಸ್ಟ್ 11: ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿ ವಹಿಸಿಕೊಂಡಿದ್ದ ಮುರಳೀಧರ ರಾವ್ ಅವರನ್ನು ಬದಲಾಯಿಸಿ ಆ ಜಾಗಕ್ಕೆ ಆರೆಸ್ಸೆಸ್ ನ ಹಿರಿಯ ಮುಖಂಡ ರಾಮ್ ಮಾಧವ್ ಅವರನ್ನು ತಂದು ಕೂರಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಕರ್ನಾಟಕ ಬಿಜೆಪಿಗೆ ಡೈನಾಮಿಕ್ ಲೀಡರ್ ತುರ್ತಾಗಿ ಬೇಕಾಗಿದ್ದಾರೆ: ಅರ್ಜಿ ಹಾಕಿ!ಕರ್ನಾಟಕ ಬಿಜೆಪಿಗೆ ಡೈನಾಮಿಕ್ ಲೀಡರ್ ತುರ್ತಾಗಿ ಬೇಕಾಗಿದ್ದಾರೆ: ಅರ್ಜಿ ಹಾಕಿ!

ರಾಮ್ ಮಾಧವ್ ಅವರು ಸದ್ಯಕ್ಕೆ ಜಮ್ಮು- ಕಾಶ್ಮೀರದಲ್ಲಿ ಬಿಜೆಪಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದು ಕರ್ನಾಟಕದಲ್ಲಿ ಬಿಜೆಪಿ ಉಸ್ತುವಾರಿಗೆ ಅವರೇ ಸೂಕ್ತವೆಂದು ಖುದ್ದು ಆರೆಸ್ಸೆಸ್ ಕೂಡ ಬಿಜೆಪಿಗೆ ಶಿಫಾರಸು ಮಾಡಿದೆ ಎನ್ನಲಾಗಿದೆ.

ಚುನಾವಣೆಯ ಹೊಸ್ತಿಲಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಅನಿಸಿಕೆ ಎಲ್ಲರಲ್ಲಿ ಇರುವುದರಿಂದ ತುರ್ತಾಗಿ ಇಲ್ಲಿರುವ ಭಿನ್ನಮತಗಳು ಉಪಶಮನ ಆಗಬೇಕಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಉಸ್ತುವಾರಿಯನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಕರ್ನಾಟಕ ಚುನಾವಣೆಗೆ ಬಿಜೆಪಿ ಬತ್ತಳಿಕೆಯಿಂದ ವಾಟ್ಸ್ ಅಪ್ ಅಸ್ತ್ರಕರ್ನಾಟಕ ಚುನಾವಣೆಗೆ ಬಿಜೆಪಿ ಬತ್ತಳಿಕೆಯಿಂದ ವಾಟ್ಸ್ ಅಪ್ ಅಸ್ತ್ರ

ಹೀಗೆ, ದಿಢೀರ್ ಎಂದು ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಿದ್ಧವಾಗಿದ್ದಾರೂ ಏಕೆ, ಇದು ದಕ್ಷಿಣ ಭಾರತದಲ್ಲಿ 'ಕಮಲ' ಅರಳಿಸುವ ತಂತ್ರಗಾರಿಕೆಯೇ? ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಬದಲಾವಣೆಗೆ ರಾಜ್ಯ ನಾಯಕರೇ ಆಗ್ರಹಿಸಿದರಾ?

ಬದಲಾವಣೆಗೆ ರಾಜ್ಯ ನಾಯಕರೇ ಆಗ್ರಹಿಸಿದರಾ?

ನಿಜಹೇಳಬೇಕೆಂದರೆ, ಮುರಳೀಧರ ರಾವ್ ಅವರನ್ನು ಬದಲಾಯಿಸುವಂತೆ ರಾಜ್ಯ ಬಿಜೆಪಿ ನಾಯಕರ ಒಂದು ಬಣ, ಹೈಕಮಾಂಡ್ ಗೆ ಮನವಿ ಸಲ್ಲಿಸಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ.

ಇಡೀ ದಕ್ಷಿಣ ಭಾರತದ ಉಸ್ತುವಾರಿ ರಾಮ್ ಹೆಗಲಿಗೆ?

ಇಡೀ ದಕ್ಷಿಣ ಭಾರತದ ಉಸ್ತುವಾರಿ ರಾಮ್ ಹೆಗಲಿಗೆ?

ಹಾಗೊಂದು ವೇಳೆ, ರಾಮ್ ಮಾಧವ್ ಅವರು ಕರ್ನಾಟಕದ ಉಸ್ತುವಾರಿ ವಹಿಸಿಕೊಳ್ಳುವುದೇ ಆದರೆ, ಅವರಿಗೆ ನೆರೆಯ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಜವಾಬ್ದಾರಿ ಅವರ ಹೆಗಲಿಗೇ ಬೀಳಲಿದೆ.

ದಕ್ಷಿಣದಲ್ಲೂ ಮ್ಯಾಜಿಕ್ ಮಾಡಲು ನಿರ್ಧಾರ?

ದಕ್ಷಿಣದಲ್ಲೂ ಮ್ಯಾಜಿಕ್ ಮಾಡಲು ನಿರ್ಧಾರ?

ಈಗ ಭಾರತದ ಉತ್ತರ ಭಾಗದ ಬಹುತೇಕ ರಾಜ್ಯಗಳನ್ನು ಬಿಜೆಪಿಯು ತನ್ನ ವಶಕ್ಕೆ ತೆಗೆದುಕೊಂಡಿದ್ದು, ದಕ್ಷಿಣ ಭಾರತದಲ್ಲೂ ಅದೇ ಹವಾ ಎಬ್ಬಿಸುವ ಕಾತುರದಲ್ಲಿದೆ ಬಿಜೆಪಿ.

ಸಮರ್ಥ ಉಸ್ತುವಾರಿ ಕೂಗಿಗೆ ಸ್ಪಂದನೆ?

ಸಮರ್ಥ ಉಸ್ತುವಾರಿ ಕೂಗಿಗೆ ಸ್ಪಂದನೆ?

ಇದಲ್ಲದೆ, ಈ ಹಿಂದೆ, ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಗ್ಗೆ ಕಳಕಳಿ ಹೊಂದಿದ್ದ ವೆಂಕಯ್ಯ ನಾಯ್ಡು ಅವರೀಗ ಉಪ ರಾಷ್ಟ್ರಪತಿ ಹುದ್ದೆಗೆ ಏರಿರುವುದರಿಂದ ದಕ್ಷಿಣ ಭಾರತಕ್ಕೊಬ್ಬ ಸಮರ್ಥ ಉಸ್ತುವಾರಿ ನಾಯಕ ಬೇಕು ಎಂಬ ಕೂಗು ಈಗ ಬಿಜೆಪಿ ವಲಯದಲ್ಲಿ ಕೇಳಿಬಂದಿದೆ ಎನ್ನಲಾಗಿದೆ.

English summary
The BJP In-Charge in Karnataka Mr. Muralidhara Rao may be replaced with Mr. Ram Madhav, who is now the in-charge of Jammu and Kashmir. This is A faction in the Karnataka BJP requested the leadership to replace the general secretary P. Muralidhar Rao with Mr Madhav, says the sources
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X