ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭ, ಕೆಲ ಕ್ಷಣಗಳಲ್ಲಿ ನೂತನ ಸಿಎಂ ಆಯ್ಕೆ!
ಬೆಂಗಳೂರು, ಜು. 27: ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಕೆಲ ಹೊತ್ತಿನಲ್ಲಿಯೇ ರಾಜ್ಯ ಬಿಜೆಪಿಗೆ ನೂತನ ನಾಯಕನನ್ನು ಬಿಜೆಪಿ ಹೈಕಮಾಂಡ್ ಸೂಚಿಸಲಿದೆ. ಈಗಾಗಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ವೀಕ್ಷಕರಾಗಿ ಆಗಮಿಸಿರುವ ಕೇಂದ್ರ ಸಚಿವರಾದ ಧರ್ಮೆಂದ್ರ ಪ್ರಧಾನ ಹಾಗೂ ಜಿ. ಕಿಶನ್ ರೆಡ್ಡಿ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದಾರೆ.
ಹಂಗಾಮಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದು ಎಲ್ಲ ಕುತೂಹಲಗಳಿಗೆ ತಾತ್ಕಾಲಿಕವಾಗಿ ತೆರೆ ಎಳೆದಿದ್ದಾರೆ. ಹಂಗಾಮಿ ಸಿಎಂ ಯಡಿಯೂರಪ್ಪ ಅವರು ಸಭೆಯಲ್ಲಿ ಭಾಗವಹಿಸದೇ ಇದ್ದಲ್ಲಿ ಬೇರೆಯದ್ದೆ ಸಂದೇಶ ಹೋಗುತ್ತದೆ ಎನ್ನಲಾಗಿತ್ತು. ಹೀಗಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವಂತೆ ಹೈಕಮಾಂಡ್ ಕೂಡ ಯಡಿಯೂರಪ್ಪ ಅವರನ್ನು ಕೇಳಿಕೊಂಡಿತ್ತು.
ಇನ್ನು ಬೇರೆ ಪಕ್ಷಗಳಿಂದ ಬಂದು ಶಾಸಕರಾದವರೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದಾರೆ. ಎಲ್ಲರೂ ಬಹುತೇಕ ಒಟ್ಟಾಗಿಯೆ ಸಭೆಯಲ್ಲಿ ಭಾಗವಹಿಸಲು ಆಗಮಿಸಿರುವುದು ಅವರ ಮುಂದಿನ ಸ್ಪಷ್ಟ ನಡೆಯನ್ನು ಸೂಚಿಸಿದಂತಾಗಿದೆ. ಈಗಾಗಲೇ ವಲಸೆ ಶಾಸಕರೆಲ್ಲರಿಗೂ ಸಚಿವ ಸ್ಥಾನ ಕೊಡುವ ಭರವಸೆ ಹೈಕಮಾಂಡ್ನಿಂದಲೇ ಸಿಕ್ಕಿದೆ ಎನ್ನಲಾಗಿದೆ.

Recommended Video
ಜೊತೆಗೆ ನಾಯಕತ್ವ ಬದಲಾವಣೆಗೆ ಆಗ್ರಹಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಭೆಯಲ್ಲಿ ಭಾಗವಹಿಸಿದ್ದಾರೆ. ಒಟ್ಟಾರೆ ಅತಿ ಮಹತ್ವದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರು ಬಿಜೆಪಿಯ ಮುಂದಿನ ನಾಯಕರಾಗಿ ಆಯ್ಕೆಯಾಗುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications