ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ಜುಲೈ 26ರ ಸಭೆ ರದ್ದು!
ಬೆಂಗಳೂರು, ಜುಲೈ 20; ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕರೆದಿದ್ದ ಶಾಸಕಾಂಗ ಪಕ್ಷದ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದೆ.
ದೆಹಲಿಗೆ ಭೇಟಿ ನೀಡಿದ್ದ ಯಡಿಯೂರಪ್ಪ ಹೈಕಮಾಂಡ್ ನಾಯಕರ ಸೂಚನೆಯಂತೆ ಜುಲೈ 26ರಂದು ಶಾಸಕಾಂಗ ಪಕ್ಷದ ಸಭೆಯನ್ನು ಕರೆದಿದ್ದರು. ಆದರೆ ಮಂಗಳವಾರ ಸಭೆ ರದ್ದುಗೊಂಡಿರುವ ಮಾಹಿತಿ ಬಂದಿದೆ.
ಶಾಸಕಾಂಗ ಪಕ್ಷದ ಸಭೆಯನ್ನು ರದ್ದುಗೊಳಿಸಿ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟವನ್ನು ಆಯೋಜನೆ ಮಾಡಲಾಗಿದೆ. ಜುಲೈ 25ರ ರಾತ್ರಿ ಭೋಜನಕೂಟ ನಡೆಯಲಿದೆ.

ಬೆಂಗಳೂರು ನಗರದ ಖಾಸಗಿ ಹೋಟೆಲ್ನಲ್ಲಿ ಜುಲೈ 25ರ ಸಂಜೆ 7.30ಕ್ಕೆ ಭೋಜನಕೂಟ ನಡೆಯಲಿದೆ. ಜುಲೈ 26ರಂದು ಯಡಿಯೂರಪ್ಪ ನೇತೃತ್ವದ ಸರ್ಕಾರ 2 ವರ್ಷಗಳನ್ನು ಪೂರೈಸಲಿದೆ.
ಯಡಿಯೂರಪ್ಪ ದಹೆಲಿಯಿಂದ ವಾಪಸ್ ಆದ ಬಳಿಕ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಆದ್ದರಿಂದ ಜುಲೈ 26ರಂದು ಕರೆದಿದ್ದ ಸಭೆ ಕುತೂಹಲಕ್ಕೆ ಕಾರಣವಾಗಿತ್ತು.
ಶಾಸಕಾಂಗ ಪಕ್ಷದ ಸಭೆಯನ್ನು ದಿಢೀರ್ ರದ್ದುಗೊಳಿಸಲಾಗಿದ್ದು, ಕರ್ನಾಟಕ ಬಿಜೆಪಿಯಲ್ಲಿನ ಮುಂದಿನ ಬೆಳವಣಿಗೆ ಬಗ್ಗೆ ಹಲವಾರು ವಿಶ್ಲೇಷಣೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆ ಚರ್ಚೆಗೆ ಸದ್ಯಕ್ಕೆ ಪೂರ್ಣ ವಿರಾಮ ಹಾಕಲಾಗಿದೆಯೇ? ಕಾದು ನೋಡಬೇಕಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications