ಬಿಎಸ್ವೈ ನಂತರ ಬಿಜೆಪಿ ಕಣ್ಣು ಶ್ರೀರಾಮುಲು ಮೇಲೆ!
ಬೆಂಗಳೂರು, ಡಿ. 7 : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕರ್ನಾಟಕ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿರುವ ಬಿಜೆಪಿ ನಾಯಕರು ಸದ್ಯ, ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಅವರತ್ತ ಗಮನ ಹರಿಸಿದ್ದಾರೆ.
ಯಡಿಯೂರಪ್ಪ ಅವರೊಂದಿಗೆ ಶ್ರೀರಾಮುಲು ಅವರನ್ನೂ ಪಕ್ಷಕ್ಕೆ ಸೇರಿಸಿಕೊಂಡು ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆಗಳನ್ನು ಚುರುಕುಗೊಳಿಸಲು ಪಕ್ಷ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಶ್ರೀರಾಮುಲು ಅವರೊಂದಿಗೆ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿದಂತೆ ಕೆಲವು ಮುಖಂಡರು ಈಗಾಗಲೇ ಸಮಾಲೋಚನೆ ನಡೆಸಿದ್ದಾರೆ. (ಬಿಜೆಪಿಗೆ ಮರಳಲು ಸಜ್ಜಾದ ಶ್ರೀರಾಮುಲು)

ಬಿ.ಎಸ್.ಯಡಿಯೂರಪ್ಪ ಅವರ ಪಕ್ಷ ಸೇರ್ಪಡೆ ಕುರಿತ ಪ್ರಕ್ರಿಯೆಗಳು ನಡೆಯಲು ಎರಡರಿಂದ ಮೂರು ವಾರಗಳ ಕಾಲಾವಕಾಶ ಬೇಕಾಗಿದೆ. ಈ ಸಮಯದಲ್ಲಿ ಶ್ರೀರಾಮುಲು ಅವರ ಜೊತೆ ಮಾತುಕತೆ ನಡೆಸಿ, ಅವರನ್ನೂ ಪಕ್ಷಕ್ಕೆ ಸೇರಿಸಿಕೊಳ್ಳಲು ಬೇಕಾದ ಪೂರ್ವ ಸಿದ್ಧತೆಗಳನ್ನು ನಡೆಸಿ ಇಬ್ಬರನ್ನೂ ಏಕಕಾಲದಲ್ಲಿ ಪಕ್ಷಕ್ಕೆ ಬರಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ. (ಬಿಜೆಪಿಗೆ ಮರಳಲು ಯಡಿಯೂರಪ್ಪಗೆ ಆಹ್ವಾನ)
ರಾಷ್ಟ್ರೀಯ ನಾಯಕರ ಒಪ್ಪಿಗೆ ಇಲ್ಲ : ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಒಂದು ಗುಂಪು ಶ್ರೀರಾಮುಲು ಅವರ ಜೊತೆ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ಮಾತುಕತೆ ನಡೆಸಿ, ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದೆ. ಆದರೆ, ಶ್ರೀರಾಮುಲು ಸೇರ್ಪಡೆಗೆ ರಾಷ್ಟ್ರೀಯ ನಾಯಕರು ಇನ್ನೂ ಒಪ್ಪಿಗೆ ನೀಡಿಲ್ಲ. (ಬಿಎಸ್ಆರ್, ಬಿಜೆಪಿ ವಿಲೀನಕ್ಕೆ ವೇದಿಕೆ ಸಜ್ಜು)
ಗುರುವಾರ ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಸಮ್ಮತಿ ಸೂಚಿಸಿರುವ ರಾಷ್ಟ್ರೀಯ ನಾಯಕರು ಶ್ರೀರಾಮುಲು ಬಗ್ಗೆ ಇನ್ನೂ ಮೌನ ವಹಿಸಿದ್ದಾರೆ. ಅದರಲ್ಲೂ ಶ್ರೀರಾಮುಲು ಸೇರ್ಪಡೆಗೆ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ತಮ್ಮ ಒಪ್ಪಿಗೆಯನ್ನು ನೀಡಬೇಕಾಗಿದೆ. ರಾಷ್ಟ್ರೀಯ ನಾಯಕರ ಒಪ್ಪಿಗೆ ದೊರೆತರೆ ಶ್ರೀರಾಮುಲು ಸಹ ಬಿಜೆಪಿಗೆ ಮರಳಲಿದ್ದಾರೆ. (ದುರ್ಗಕ್ಕೆ ಬರುವ ವೇಳೆಗೆ ಯಡಿಯೂರಪ್ಪ ಬದಲಾದರು!)
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications