'ರಾಷ್ಟ್ರಪತ್ನಿ' ಹೇಳಿಕೆ: ಕಾಂಗ್ರೆಸ್ ಪಕ್ಷ ಬುಡಕಟ್ಟು ಸಮುದಾಯದ ವಿರೋಧಿ ಎಂದ ಗೀತಾ ವಿವೇಕಾನಂದ
ಬೆಂಗಳೂರು ಜು.29: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರು ದೇಶದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಹೇಳನ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಗೌರವಿಸದ ಪಕ್ಷ ಎಂಬುದನ್ನು ಸಾಬೀತುಪಡಿಸಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, "ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರತಿಭಟನೆ ವೇಳೆ ರಾಷ್ಟ್ರಪತಿಗಳನ್ನು ರಾಷ್ಟ್ರಪತ್ನಿ ಎಂದು ಸಂಬೋಧಿಸಿದ್ದಾರೆ. ಈ ಹೇಳಿಕೆಯನ್ನು ಖಂಡಿಸುವುದಾಗಿ ಅವರು ತಿಳಿಸಿದ್ದಾರೆ. ಈ ಹೇಳಿಕೆಯು ಕಾಂಗ್ರೆಸ್ ಪಕ್ಷವು ಬುಡಕಟ್ಟು ಸಮುದಾಯದ ವಿರೋಧಿ, ದಲಿತ ಮತ್ತು ಮಹಿಳಾ ವಿರೋಧಿ ಎಂಬುದಕ್ಕೆ ಸ್ಪಷ್ಟ ಉದಾಹರಣೆ," ಎಂದು ಅವರು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದ್ದಾಗ ಕೂಡ ದಲಿತರು ಮತ್ತು ಆದಿವಾಸಿ ಸಮುದಾಯವನ್ನು ಕಡೆಗಣಿಸಿ ಕೇವಲ ಮತಬ್ಯಾಂಕ್ ಆಗಿ ನೋಡುತ್ತಿತ್ತು. ಸಂವಿಧಾನಕ್ಕೆ ಮತ್ತು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿತ್ತು ಎಂದು ಗೀತಾ ವಿವೇಕಾನಂದ ಅವರು ಆಪಾದಿಸಿದ್ದಾರೆ.

ಕಾಂಗ್ರೆಸ್ನಿಂದ ಮೊಸಳೆ ಕಣ್ಣೀರು
ಬಿಜೆಪಿ ಸರ್ಕಾರಗಳು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಮುಖ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದೆ. ಅಲ್ಲದೆ, ರಾಜ್ಯದಲ್ಲೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭೇಟಿ ನೀಡಿದ್ದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿದೆ. ಪರಿಶಿಷ್ಟ ಜಾತಿ, ಪಂಗಡದವರ ಸಮಗ್ರ ಅಭಿವೃದ್ಧಿಗೆ ಯೋಜನೆಗಳನ್ನು ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಆದರೆ ಕಾಂಗ್ರೆಸ್ ಪಕ್ಷದವರು ಮತಬ್ಯಾಂಕ್ ದೃಷ್ಟಿಯಿಂದ ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಬಿಜೆಪಿಗರ ಆಕ್ರೋಶಕ್ಕೆ ಗುರಿಯಾದ ಅಧೀರ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಮತ್ತು ಹಣ ವರ್ಗಾವಣೆ ಸಂಬಂಧಿಸಿದ ಕಾಂಗ್ರೆಸ್ನ ಸೋನಿಯಾಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದ್ದನ್ನು ವಿರೋಧಿಸಿ ಸಂಸತ್ ಅಧಿವೇಶನ ವೇಳೆ ಕಾಂಗ್ರೆಸ್ ನಾಯಕರು ಪ್ರತಿಭಟಿಸಿದರು. ಈ ಸಂದರ್ಭದಲ್ಲಿ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿಗಳನ್ನು 'ರಾಷ್ಟ್ರಪತ್ನಿ' ಎಂಬು ಸಂಬೋಧಿಸುವ ಮೂಲಕ ಬಿಜೆಪಿಗರ ಆಕ್ರೋಶಕ್ಕೆ ಗುರಿಯಾದರು.

ಕ್ಷಮೆಗೆ ಬಿಜೆಪಿ ನಾಯಕಿಯರ ಪಟ್ಟು
ಅಧಿರ್ ಹೇಳಿಕೆ ಖಂಡಿಸಿ ಸಂಸತ್ತಿನಲ್ಲೇ ಬಿಜೆಪಿ ಮಹಿಳಾ ನಾಯಕರಾದ ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಿಪಡಿಸಿದರು. ಮಹಿಳೆಯರಿಗೆ, ಬುಡಕಟ್ಟು ಸಮುದಾಯಕ್ಕೆ ಹಾಗೂ ದೇಶದ ಸಾಂವಿಧಾನಿಕ ಅತ್ಯುನ್ನದ ಹುದ್ದೆಯ ಕಾಂಗ್ರೆಸ್ ಕೊಡುವ ಗೌರವದ ರೀತಿ ಇದು ಎಂದು ಟೀಕಿಸಿದ್ದರು. ಅಲ್ಲದೇ ರಂಜನ್ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದರು.

ಮುರ್ಮು ಬಳಿ ಕ್ಷಮೆ ಕೇಳುವೆ
ಬಿಜೆಪಿ ನಾಯಕರು ಪ್ರತಿಭಟನೆ, ಟೀಕೆ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ಅಧೀರ್ ರಂಜನ್ ಚೌಧರಿ ಅವರು ನಾನು ರಾಷ್ಟ್ರಪತಿ ದ್ರೌಪತಿ ಮುರ್ಮು ಅವರ ಬಳಿ ಕ್ಷಮೆಯಾಚಿಸುತ್ತೇನೆ. ಈಸಂಬಂದ ಅವರನ್ನು ಭೇಟಿ ಮಾಡುತ್ತೇನೆ. ಆದರೆ ವಂಚಕ ಬಿಜೆಪಿ ನಾಯರಕ ಬಳಿ ಕ್ಷಮೆ ಕೇಳುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ಬಂಗಾಳಿ, ನನಗೆ ಹಿಂದಿ ಭಾಷೆ ಸರಿಯಾಗಿ ಗೊತ್ತಿಲ್ಲ. ಪ್ರತಿಭಟನೆ ವೇಳೆ ಹಿಂದಿ ಭಾಷೆಯಲ್ಲಿ ಮಾತನಾಡಬಾರದಿತ್ತು ಎಂದು ಅವರು ತಪ್ಪನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications