ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ
ಬೆಂಗಳೂರು, ಮಾರ್ಚ್ 11: ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಆಕಾಂಕ್ಷಿಗಳಾಗಿರುವ ರಾಜೀವ್ ಚಂದ್ರಶೇಖರ್ ಹಾಗೂ ವಿಜಯ ಸಂಕೇಶ್ವರ ಇಬ್ಬರಿಗೂ ಪಕ್ಷವು ಶಾಕ್ ನೀಡಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ರಾಜೀವ್ ಚಂದ್ರಶೇಖರ್ ಹಾಗೂ ವಿಜಯ ಸಂಕೇಶ್ವರ್ ಇಬ್ಬರಲ್ಲಿ ಒಬ್ಬರಿಗೆ ರಾಜ್ಯಸಭಾ ಟಿಕೆಟ್ ನೀಡಲು ಬಿಜೆಪಿಯಲ್ಲಿ ಚರ್ಚೆ ನಡೆದಿತ್ತು, ಹಲವು ಶಾಸಕರು ವಿಜಯ್ ಸಂಕೇಶ್ವರ್ ಅವರಿಗೇ ಟಿಕೆಟ್ ನೀಡುವಂತೆ ಯಡಿಯೂರಪ್ಪ ಅವರಿಗೆ ಮನವಿಯನ್ನೂ ಮಾಡಿದ್ದರು. ಸ್ಥಳೀಯರನ್ನು ರಾಜ್ಯಸಭೆಗೆ ಆರಿಸದಿದ್ದರೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗುವ ಬಗ್ಗೆ ಆತಂಕವನ್ನೂ ವ್ಯಕ್ತಪಡಿಸಲಾಗಿತ್ತು.
ಆದರೆ ಪಕ್ಷದ ವರಿಷ್ಠರು ಇಬ್ಬರಿಗೂ ಟಿಕೆಟ್ ನಿರಾಕರಿಸಿ ಪಕ್ಷದ ಹಲವು ವರ್ಷಗಳ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.

ಶಿವಮೊಗ್ಗದ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಅವರಿಗೆ ರಾಜ್ಯಸಭಾ ಚುನಾವಣೆ ಟಿಕೆಟ್ ನೀಡಲು ಪಕ್ಷ ಚಿಂತಿಸಿದ್ದು, ಇಂದು ಸಂಜೆ ವೇಳೆಗೆ ಟಿಕೆಟ್ ಘೋಷಣೆ ಆಗಲಿದೆ ಎಂಬ ಸುದ್ದಿ ಪಕ್ಷದಲ್ಲಿ ಹರಿದಾಡುತ್ತಿದೆ.
ರುದ್ರೇಗೌಡ ಅವರು ಯಡಿಯೂರಪ್ಪ ಅವರಿಗೆ ಬಹಳ ಆಪ್ತರಾಗಿದ್ದು, ಹಲವು ವರ್ಷಗಳಿಂದ ಪಕ್ಷದ ಸಂಘಟನೆಗಾಗಿ ಕೆಳಮಟ್ಟದಿಂದ ದುಡಿದವರಾಗಿದ್ದಾರೆ. ರುದ್ರೇಗೌಡ ಅವರು ಈಶ್ವರಪ್ಪ ಅವರ ವಿರೋಧಿಗಳಾಗಿದ್ದು, ಇತ್ತೀಚೆಗೆ ಈಶ್ವರಪ್ಪಗೆ ಟಿಕೆಟ್ ನಿರಾಕರಿಸುವಂತೆ ಬಹಿರಂಗವಾಗಿ ಮನವಿ ಮಾಡಿದ್ದರು, ಅಲ್ಲದೇ ಈಶ್ವರಪ್ಪ ಸ್ಪರ್ಧಿಸಿದರೆ ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದು ಸುದ್ದಿಯಾಗಿತ್ತು.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ರುದ್ರೇಗೌಡ ಹಾಗೂ ಕೆ.ಎಸ್.ಈಶ್ವರಪ್ಪ ಅವರ ನಡುವೆ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ಗಾಗಿ ಬಿರುಸಿನ ತಿಕ್ಕಾಟ ನಡೆದಿದ್ದು, ಅವರಿಬ್ಬರ ನಡುವಿನ ತಿಕ್ಕಾಟ ತಪ್ಪಿಸಲೆಂದು ರುದ್ರೇಗೌಡ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಿ ಸುಮ್ಮನಾಗಿಸುವ ಯತ್ನ ಇದು ಎನ್ನಲಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications