ಅರವಿಂದ ಲಿಂಬಾವಳಿಗೆ ಪಶ್ಚಿಮ ಬಂಗಾಳ ಚುನಾವಣೆ ಹೊಣೆ
ಬೆಂಗಳೂರು, ಮಾರ್ಚ್ 6: ಪಶ್ಚಿಮ ಬಂಗಾಳದ ವಿಧಾನಸಭೆಯ 294 ಕ್ಷೇತ್ರಗಳಿಗೆ ಮಾರ್ಚ್ 27ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಗೆ ಬಿಜೆಪಿ ಪ್ರಮುಖ ಎದುರಾಳಿ ಎಂದು ಪರಿಗಣಿಸಲಾಗಿದೆ. ಮಮತಾ ಬ್ಯಾನರ್ಜಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ಎಡಪಂಥೀಯರ ನಾಡಿನಲ್ಲಿ ಕೇಸರಿ ಬಾವುಟ ಹಾರಿಸುವುದು ಬಿಜೆಪಿಯ ಗುರಿ. ಅದಕ್ಕಾಗಿ ವ್ಯಾಪಕ ಪ್ರಚಾರ ಕಾರ್ಯಗಳು, ಹೊಸ ತಂತ್ರಗಳನ್ನು ನಡೆಸುತ್ತಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸಲು ಮತ್ತು ಚುನಾವಣಾ ತಂತ್ರಗಳನ್ನು ನಡೆಸಲು ವಿವಿಧ ನಾಯಕರಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ರಾಜ್ಯ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರಿಗೂ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ.
ದಕ್ಷಿಣ 24 ಪರಗಣ ಜಿಲ್ಲೆಯ ಪೂರ್ವ ಭಾಗದ ಐದು ವಿಧಾನಸಭಾ ಕ್ಷೇತ್ರಗಳಲ್ಲಿನ ಜವಾಬ್ದಾರಿಯನ್ನು ಲಿಂಬಾವಳಿ ಅವರಿಗೆ ಕೊಡಲಾಗಿದೆ. ಬರುಯಿಪುರ್ ಪೂರ್ಬಾ, ಕಾನ್ನಿಂಗ್ ಪಶ್ಚಿಮ್, ಕಾನ್ನಿಂಗ್ ಪೂರ್ಬಾ, ಬರುಯಿಪುರ್ ಪಶ್ಚಿಮ್ ಮತ್ತು ಮಾಗ್ರಹಟ್ ಪೂರ್ಬಾ ಕ್ಷೇತ್ರಗಳಲ್ಲಿ ಅರವಿಂದ್ ಲಿಂಬಾವಳಿ ಅವರು ಪಕ್ಷದ ಪರ ಚಟುವಟಿಕೆಗಳನ್ನು ನಡೆಸಲಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣೆ ಜವಾಬ್ದಾರಿ ಕುರಿತಾದ ಸಭೆಗೆ ಹೈಕಮಾಂಡ್ನಿಂದ ಕರೆ ಬಂದಿದ್ದರಿಂದ ಅರವಿಂದ ಲಿಂಬಾವಳಿ ಅವರು ಶುಕ್ರವಾರದ ಕಲಬುರಗಿ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications