ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ಶಾಸಕ ಆನಂದ್ ಸಿಂಗ್
ಬೆಂಗಳೂರು, ಏ. 20 : ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ಜೊತೆ ಪಕ್ಷದ ನಾಯಕರು ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು ರಾಜೀನಾಮೆಯನ್ನು ವಾಪಸ್ ಪಡೆಯಲು ಅವರು ಒಪ್ಪಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆನಂದ್ ಸಿಂಗ್ ಕಳೆದ ಸೋಮವಾರ ರಾಜೀನಾಮೆ ನೀಡಿದ್ದರು.
ಸೋಮವಾರ ವಿಧಾನಸೌಧದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಆನಂದ್ ಸಿಂಗ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು ಅವರೊಂದಿಗೆ ಮಾತುಕತೆ ನಡೆಸಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ. [ಶಾಸಕ ಆನಂದ್ ಸಿಂಗ್ ರಾಜೀನಾಮೆ]

ಪಕ್ಷದ ನಾಯಕರ ಮಾತಿಗೆ ಆನಂದ್ ಸಿಂಗ್ ಒಪ್ಪಿಗೆ ಸೂಚಿಸಿದ್ದು, ಇಂದು ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ವಾಪಸ್ ಪಡೆಯುವುದಾಗಿ ಭರವಸೆ ನೀಡಿದ್ದಾರೆ. [ಸಿಂಗ್ ರಾಜೀನಾಮೆ : ಯಾರು, ಏನು ಹೇಳಿದರು?]
ಸೋಮವಾರ ರಾಜೀನಾಮೆ ನೀಡಿದ್ದರು : ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಏ.9ರಂದು ಬಂಧಿಸಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಆನಂದ್ ಸಿಂಗ್ ಏ.13ರಂದು ಜೈಲಿನಿಂದಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಜೈಲಿನ ಎಡಿಜಿಪಿ ಅವರ ಮೂಲಕ ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸಲ್ಲಿಸಿದ್ದರು. ಆದರೆ, ಶಾಸಕರು ಖುದ್ದಾಗಿ ಬಂದು ಪತ್ರ ಸಲ್ಲಿಸುವ ತನಕ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸ್ಪೀಕರ್ ಸ್ಪಷ್ಟಪಡಿಸಿದ್ದರು.
ಏ.17ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ಆನಂದ್ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಹೊರಬಂದ ಅವರು ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡಿದ್ದರು.
-
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ












Click it and Unblock the Notifications