ಏನೋ ಹೇಳೋದು, ಆಮೇಲೆ ಹೇಳಿಕೆ ತಿರುಚಲಾಗಿದೆ ಎನ್ನುವುದು: ಯಾಕೀ ನಾಟಕ?
ಪಕ್ಷಾತೀತವಾಗಿ ಈ ಒಂದು ಚಾಳಿ ರಾಜಕಾರಣಿಗಳಲ್ಲಿ ಹೆಚ್ಚಾಗುತ್ತಿದೆ. ಮೈಕ್ ಮುಂದೆ ಮಾತಾನಾಡಿದ್ದನ್ನೇ ಎಷ್ಟೋ ಬಾರಿ ಒಪ್ಪಿಕೊಳ್ಳಲು ಸಿದ್ದರಿರುವುದಿಲ್ಲ. ಯಾವಾಗ ತಮ್ಮತಮ್ಮ ಹೇಳಿಕೆ ಆಕ್ರೋಶಕ್ಕೆ ಕಾರಣವಾಗುತ್ತೋ, ಆಗ ಮಾಧ್ಯಮದವರು ನನ್ನ ಹೇಳಿಕೆಯನ್ನು ತಿರುಚಿದ್ದಾರೆಂದು ಮಿಡೀಯಾಗಳ ಮೇಲೆ ಗೂಬೆ ಕೂರಿಸುವುದು.
ಇಂತಹ ರಾಜಕಾರಣಕ್ಕೆ ತಾಜಾ ಉದಾಹರಣೆ ಬಿಜೆಪಿಯ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್. ಮಾಧ್ಯಮಗಳ ಮತ್ತು ತುಂಬಿದ ಸಭೆಯಲ್ಲಿ ಜನರ ಮುಂದೆ ಮಾತನಾಡಿದ ವಿಚಾರ, ವರಿಷ್ಠರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಂತೆಯೇ ತಮ್ಮ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದಾರೆ.
ಯಡಿಯೂರಪ್ಪನವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ತಮ್ಮವರ ವಿರುದ್ದವೇ ಟೀಕಾ ಪ್ರಹಾರವನ್ನು ಮಾಡುತ್ತಿರುವ ಯತ್ನಾಳ್, ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ, ಮಾತಿನ ಬಾಣವನ್ನು ತೀವ್ರಗೊಳಿಸಿದ್ದರು.
ಕಳೆದ ಕೆಲವು ವರ್ಷಗಳಿಂದ ಪ್ರಮುಖವಾಗಿ ಯಡಿಯೂರಪ್ಪ, ವಿಜಯೇಂದ್ರ, ಮುರುಗೇಶ್ ನಿರಾಣಿ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಯತ್ನಾಳ್ ಅವರನ್ನು ನಿಯಂತ್ರಿಸುವ ಕೆಲಸವನ್ನು ರಾಜ್ಯಾಧ್ಯಕ್ಷರಾಗಲಿ, ಶಿಸ್ತು ಸಮಿತಿಯಾಗಲಿ, ಉಸ್ತುವಾರಿ ಮಾಡಿರಲಿಲ್ಲ. ಈಗ ಪಕ್ಷ ಎಚ್ಚೆತ್ತುಕೊಂಡಿದೆ, ಯತ್ನಾಳ್ ಕೂಡಾ ಉಲ್ಟಾ ಹೊಡೆದಿದ್ದಾರೆ.

ಎಚ್ಚೆತ್ತುಕೊಂಡ ನಳಿನ್ ಕುಮಾರ್ ಕಟೀಲ್, ಶಿಸ್ತು ಸಮಿತಿ ಮೂಲಕ ನೋಟಿಸ್
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಹೇಳಿಕೆಯನ್ನು ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ್ದರು. ದುಡ್ದಿದ್ದರೆ ಮುಖ್ಯಮಂತ್ರಿ ಹುದ್ದೆ ಬಿಕರಿಯಾಗುತ್ತದೆ ಎನ್ನುವ ಹೇಳಿಕೆಯನ್ನು ನೀಡಿದ್ದರು. ಮೊದಲೇ ನಲವತ್ತು ಪರ್ಸೆಂಟ್, ಪಿಎಸ್ಐ ನೇಮಕ ವಿಚಾರದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ಎದುರಿಸುತ್ತಿರುವ ಸಂದರ್ಭದಲ್ಲಿ ಯತ್ನಾಳ್ ಹೇಳಿಕೆ ಪಕ್ಷಕ್ಕೆ ಮುಜುಗರವನ್ನು ತಂದೊಡ್ಡಿತ್ತು. ಇದರಿಂದ ಎಚ್ಚೆತ್ತುಕೊಂಡ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಿಸ್ತು ಸಮಿತಿ ಮೂಲಕ ನೋಟಿಸ್ ಅನ್ನು ನೀಡಿದ್ದಾರೆ. ನೋಟಿಸ್ ಬರುತ್ತಿದ್ದಂತೆಯೇ ಯತ್ನಾಳ್ ಉಲ್ಟಾ ಹೊಡೆದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರು ಇದನ್ನು ಪ್ರಶ್ನಿಸಬಹುದಿತ್ತು
"ಅವರೇನೂ ಪಕ್ಷದ ಬಗ್ಗೆ ಮಾತನಾಡಲಿಲ್ಲವಲ್ಲ ಎಂದು ರಾಜ್ಯಾಧ್ಯಕ್ಷರು ಹೇಳಿದ್ದಾರಲ್ವಾ, ಇದರ ಅರ್ಥವೇನು. ಇದಕ್ಕಿಂತ ಇನ್ನೇನು ಬೆಂಬಲ ಸಿಗಬೇಕು" ಎಂದು ಹೇಳಿದ್ದ ಯತ್ನಾಳ್, ಈಗ ಸಿಎಂ ಹುದ್ದೆಗೆ 2,500 ಕೊಡಬೇಕೆಂಬ ಹೇಳಿಕೆಯಿಂದ ಉಲ್ಟಾ ಹೊಡೆದಿದ್ದಾರೆ. "ದಲ್ಲಾಳಿಗಳು ಹಣ ಪಡೆದು ಟಿಕೆಟ್ ನೀಡುತ್ತಿರುವ ವಿಚಾರವನ್ನು ಸದನದಲ್ಲೇ ಪ್ರಸ್ತಾವಿಸಿದ್ದೇನೆ. ಆಗಲೇ, ಕೆಪಿಸಿಸಿ ಅಧ್ಯಕ್ಷರು ಇದನ್ನು ಪ್ರಶ್ನಿಸಬಹುದಿತ್ತು"ಎಂದು ಯತ್ನಾಳ್ ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್, ಮಾಧ್ಯಮದವರ ಮೇಲೆ ಗೂಬೆ ಕೂರಿಸಿದ್ದಾರೆ
"ನಾನು ಕೇದಾರನಾಥದ ಮಹಾರಾಜ ಮಾತನಾಡುವುದು. ನನಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ಎಲ್ಲರೂ ಗೊತ್ತು, ಮೋದಿ, ಸೋನಿಯಾ ಗಾಂಧಿ, ದೇವೇಗೌಡ್ರು ಗೊತ್ತೆಂದು ಪರಿಚಯ ಮಾಡಿಸಿಕೊಳ್ಳುತ್ತಾನೆ. ಇಂತಿಷ್ಟು ಹಣ ತಂದು ಕೊಟ್ಟರೆ, ಕೇಂದ್ರದಲ್ಲಿ ಶಿಫಾರಸ್ಸನ್ನು ಮಾಡುತ್ತೇನೆ ಎಂದು ಆಮಿಷವೊಡ್ಡುತ್ತಾನೆ. ಇಂತವರನ್ನೆಲ್ಲಾ ನಂಬಲು ಹೋಗಬೇಡಿ ಎನ್ನುವ ನನ್ನ ಹಿತವಚನವನ್ನೇ ಮಾಧ್ಯಮದವರು ತಿರುಚಿ ಬಿತ್ತರಿಸಿದ್ದಾರೆ"ಎಂದು ಬಸನಗೌಡ ಪಾಟೀಲ್ ಯತ್ನಾಳ್, ಮಾಧ್ಯಮದವರ ಮೇಲೆ ಗೂಬೆ ಕೂರಿಸಿದ್ದಾರೆ.

ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ರೂ. ಕೊಡಿ ಎಂದಿದ್ದರು
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, "ದೆಹಲಿಯಿಂದ ಒಂದಷ್ಟು ಮಂದಿ ನನ್ನ ಬಳಿ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ರೂ. ಕೊಡಿ ಎಂದಿದ್ದರು. ಎರಡೂವರೆ ಸಾವಿರ ಕೋಟಿ ಹೆಂಗ್ ಇಡೋದು. ಕೋಣೆಯಲ್ಲಿ ಇಡೊದಾ, ಗೋದಾಮಿನಲ್ಲಿ ಇಡೋದಾ, ರಾಜಕಾರಣದಲ್ಲಿ ಮೋಸ ಮಾಡುತ್ತಾರೆ"ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications