Basangouda Patil Yatnal: ಪಕ್ಷದಿಂದ ಉಚ್ಚಾಟನೆ ಸುದೀರ್ಘ ಪತ್ರ ಬರೆದ ಬಸನಗೌಡ ಪಾಟೀಲ್ ಯತ್ನಾಳ್
Basangouda Patil Yatnal: ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುದೀರ್ಘ ಪತ್ರ ಬರೆದಿದ್ದಾರೆ. ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.
ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.
ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ 'ಅಡ್ಜಸ್ಟ್ಮೆಂಟ್ ರಾಜಕಾರಣದಿಂದ' ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.
ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು. ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು. ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ ಎಂದಿದ್ದಾರೆ.
ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ 'ಪೂಜ್ಯ' ರಿಂದಲ್ಲ.
ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷರಾದ ಶ್ರೀ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.
ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ 'ಅಪಥ್ಯ' ವಾಗಿದೆ.
ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ. Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications