ಜನಾರ್ದನ ರೆಡ್ಡಿ-ಶ್ರೀರಾಮುಲು ನಡುವೆ ತಂದಿಟ್ಟಿದ್ದು ಯಾರು? ಬಿಜೆಪಿಯಲ್ಲಿ ಹೊಸ ಚರ್ಚೆ
ಇತ್ತೀಚೆಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಂಸದ ಬಿ.ಶ್ರೀರಾಮುಲು ಅವರು ಪಕ್ಷ ತೊರೆಯುವ ಮಾತನ್ನಾಡಿದ್ದರು. ತಮ್ಮ ಕಾರ್ಯವೈಖರಿ ಬಗ್ಗೆ ಉಸ್ತುವಾರಿಗಳು ಬೇಸರ ಹೊರಹಾಕಿದ್ದರಿಂದ ರಾಮುಲು ಅವರು ಸಭೆಯಲ್ಲೇ ರೆಬೆಲ್ ಆಗಿದ್ದರು. ಇದಕ್ಕೆಲ್ಲ ಕಾರಣ ಶ್ರೀರಾಮುಲು ದೋಸ್ತಿ ಜನಾರ್ದನ ರೆಡ್ಡಿ ಎಂಬ ಹೇಳಿಕೆಯು ಬಿಜೆಪಿಯಲ್ಲಿ ಸಂಚಲನ ಮೂಡಿಸಿತ್ತು. ಆದರೆ, ಅಸಲಿಗೆ ಶ್ರೀರಾಮುಲು ರೆಬೆಲ್ ಆಗಲು ಮತ್ತೊಬ್ಬರ ಕೈವಾಡವೂ ಇದೆ ಎಂಬ ಚರ್ಚೆಗಳು ನಡೆಯುತ್ತಿವೆ.
ಬಿ.ವೈ.ವಿಜಯೇಂದ್ರ ಅವರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವು ಸದ್ಯ ಅಲುಗಾಡುವ ಪರಿಸ್ಥಿತಿ ತಲುಪಿದೆ. ಸ್ಪಪಕ್ಷದಿಂದಲೇ ಭಾರಿ ವಿರೋಧ ಎದುರಿಸುತ್ತಿರುವ ವಿಜಯೇಂದ್ರ ಅವರ ಬಗ್ಗೆ ಮತ್ತೊಂದು ಗಂಭೀರ ಆರೋಪವೊಂದು ಕೇಳಿಬಂದಿದೆ. ಸ್ವಪಕ್ಷ ನಾಯಕರೊಬ್ಬರು ವಿಜಯೇಂದ್ರ ಅವರ ವಿಚಾರವಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

ಶ್ರೀರಾಮುಲು ಅವರ ವಿಚಾರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರ್ವಾಲ್ ಅವರಿಗೆ ತಪ್ಪು ಮಾಹಿತಿಯನ್ನು ನೀಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯೇಂದ್ರ ಅವರೇ ಕಳೆದ ಸಂಡೂರು ಬೈಎಲೆಕ್ಷನ್ ವಿಚಾರವಾಗಿ ಶ್ರೀರಾಮುಲು ಬಗ್ಗೆ ರಾಧಾಮೋಹನ್ ಅಗರವಾಲ್ ಅವರಿಗೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಈ ಕಾರಣಕ್ಕೇ ಶ್ರೀರಾಮುಲು ಅವರ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ತರಾಟೆ ತೆಗೆದುಕೊಳ್ಳಲಾಗಿತ್ತು ಎಂದಿದ್ದಾರೆ.
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದುಕೊಂಡು ಈ ಕೆಲಸ ಮಾಡಬಾರದು. ಸ್ಥಳೀಯ ಚುನಾವಣೆಗಳಲ್ಲಿ ಪಕ್ಷ ವಿರೋಧಿಗಳಿಗೆ ವಿಜಯೇಂದ್ರ ಸಾಥ್ ಕೊಡುತ್ತಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ಅವರು ಬೆಂಗಳೂರಿನಲ್ಲೇ ಮಾಡಿದ್ದು, ದಾವಣಗೆರೆ ಜಿಲ್ಲಾಧ್ಯಕ್ಷರ ಆಯ್ಕೆ ಬಗ್ಗೆ ಅವರ ಮನೆಯಲ್ಲೇ ಸಭೆ ಮಾಡಿದ್ದಾರೆ. ಹೈಕಮಾಂಡ್ ವಿಜಯೇಂದ್ರ ಅವರ ಈ ನಡೆಯನ್ನೆಲ್ಲ ಗಮನಿಸಿ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋರ್ಕಮಿಟಿ ಸಭೆಯಲ್ಲಿ ಸಂಸದ ಶ್ರೀರಾಮುಲು ಅವರು ನಾನು ಪಕ್ಷ ಬಿಡುತ್ತೇನೆಂದು ಹೇಳಿದ್ದರು. ಇತ್ತೀಚೆಗೆ ನಡೆದ ಸಂಡೂರು ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಸೋಲಿನಿಂದಾಗಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ರಾಮುಲು ಅವರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದರು. ಸಂಡೂರು ಚುನಾವಣೆಯ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರಿಗೆ ಅಭ್ಯರ್ಥಿಯಾಗಿದ್ದ ಬಂಗಾರು ಹನುಮಂತು ದೂರು ನೀಡಿದ್ದರು ಎನ್ನಲಾಗಿತ್ತು.

ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ನಾಯಕರು ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ಅವರ ವಿರುದ್ಧ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ, ಶ್ರೀರಾಮುಲು ಅವರು ನೇರವಾಗಿ ಎಲ್ಲರ ಮುಂದೆಯೇ ಪಕ್ಷ ಬಿಡುತ್ತೇನೆ ಎನ್ನುವ ಮೂಲಕ ಸಂಚಲನ ಮೂಡಿಸಿದ್ದರು. ನಾನು ಕಷ್ಟಪಟ್ಟು ಕೆಲಸ ಮಾಡಿದ್ದು, ನನ್ನ ಮೇಲೆ ಸುಮ್ಮನೆ ದೂರು ಕೊಟ್ಟಿದ್ದಾರೆ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆಯೇ ಇಲ್ಲ ಎಂದು ಶ್ರೀರಾಮುಲು ಅವರು ಹೇಳಿದ್ದರು. ಬಳಿಕ ಇದಕ್ಕೆಲ್ಲ ಕಾರಣ ತಮ್ಮ ದೋಸ್ತ್ ಜನಾರ್ದನ ರೆಡ್ಡಿ ಎಂದೂ ರಾಮುಲು ಗುಡುಗಿದ್ದರು. ಆದರೆ, ರಾಮುಲು ವಿರುದ್ಧ ವಿಜಯೇಂದ್ರ ಅವರೇ ತಪ್ಪು ಮಾಹಿತಿ ಕೊಟ್ಟಿದ್ದಾರೆ ಎನ್ನುವ ಆರೋಪ ಚರ್ಚೆಗೆ ಬಂದಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications