ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾಂಗ್ರೆಸ್ಗೆ?
ಬೆಂಗಳೂರು, ಜುಲೈ 11: ಮಾಜಿ ಸಚಿವ, ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರಾ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಇದಕ್ಕೆ ಕಾರಣವೆಂದರೆ ನಿನ್ನೆ ಸಚಿವ ಡಿಕೆ.ಶಿವಕುಮಾರ್ ಸಮ್ಮಿಶ್ರ ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗಾಗಿ ಆಯೋಜಿಸಿದ್ದ ಔತಣಕೂಡದಲ್ಲಿ ಗೂಳಿಹಟ್ಟಿ ಶೇಖರ್ ಅವರು ಸಹ ಉಪಸ್ಥಿತರಿದ್ದರು.
ನಗರದ ಖಾಸಗಿ ಹೊಟೆಲ್ನಲ್ಲಿ ಆಯೋಜಿತವಾಗಿದ್ದ ಈ ಔತಣಕೂಟಕ್ಕೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರೊಂದಿಗೆ ರಾತ್ರಿ 8 ಗಂಟೆಗೆ ಆಗಮಿಸಿದ ಗೂಳಿಹಟ್ಟಿ ಶೇಖರ್ 11 ಗಂಟೆ ವರೆಗೆ ಔತಣಕೂಡದಲ್ಲಿ ಇದ್ದರು ಎನ್ನಲಾಗಿದೆ.

ಔತಣಕೂಟದಲ್ಲಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು. ಮುಖಂಡರ ಜೊತೆಗೆ ಗೂಳಿಹಟ್ಟಿ ಶೇಖರ್ ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪಕ್ಷೇತರವಾಗಿ ಗೆದ್ದಿದ್ದ ಅವರು ಬಿಜೆಪಿ ಸರ್ಕಾರ ರಚಿಸಲು ಬೆಂಬಲ ನಿಡಿದ್ದರು ಆ ನಂತರ ಯಡಿಯೂರಪ್ಪ ಅವರ ವಿರುದ್ಧ ಬಂಡಾಯವೆದ್ದು ಬೆಂಬಲ ವಾಪಸ್ ಪಡೆದಿದ್ದರು, ಆನಂತರ ಜೆಡಿಎಸ್ ಸೇರಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದರು. ಇದೇ ವರ್ಷದ ಫೆಬ್ರವರಿಯಲ್ಲಿ ಬಿಜೆಪಿ ಸೇರಿ ಈ ಬಾರಿ ಚುನಾವಣೆಯಲ್ಲಿ ಗೆದ್ದು ಬಂದಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರುವ ಮುನ್ಸೂಚನೆಗಳು ಗೋಚರಿಸುತ್ತಿವೆ.
ಗೂಳಿಹಟ್ಟಿ ಶೇಖರ್ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸದುರ್ಗದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರ ಗೆಲುವು ಕ್ಷೇತ್ರದಲ್ಲಿ ಮೊದಲ ಬಿಜೆಪಿಯ ಗೆಲುವಾಗಿತ್ತು. ಸದನದಲ್ಲಿ ಒಮ್ಮೆ ತಮ್ಮ ಶರ್ಟ್ ಹರಿದುಕೊಂಡು ಗೂಳಿಹಟ್ಟಿ ಸುದ್ದಿಯಾಗಿದ್ದರು.
-
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications