ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಕಾಂಗ್ರೆಸ್ಗೆ?
ಬೆಂಗಳೂರು, ಜುಲೈ 11: ಮಾಜಿ ಸಚಿವ, ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರಾ ಎಂಬ ಅನುಮಾನ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಇದಕ್ಕೆ ಕಾರಣವೆಂದರೆ ನಿನ್ನೆ ಸಚಿವ ಡಿಕೆ.ಶಿವಕುಮಾರ್ ಸಮ್ಮಿಶ್ರ ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗಾಗಿ ಆಯೋಜಿಸಿದ್ದ ಔತಣಕೂಡದಲ್ಲಿ ಗೂಳಿಹಟ್ಟಿ ಶೇಖರ್ ಅವರು ಸಹ ಉಪಸ್ಥಿತರಿದ್ದರು.
ನಗರದ ಖಾಸಗಿ ಹೊಟೆಲ್ನಲ್ಲಿ ಆಯೋಜಿತವಾಗಿದ್ದ ಈ ಔತಣಕೂಟಕ್ಕೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರೊಂದಿಗೆ ರಾತ್ರಿ 8 ಗಂಟೆಗೆ ಆಗಮಿಸಿದ ಗೂಳಿಹಟ್ಟಿ ಶೇಖರ್ 11 ಗಂಟೆ ವರೆಗೆ ಔತಣಕೂಡದಲ್ಲಿ ಇದ್ದರು ಎನ್ನಲಾಗಿದೆ.

ಔತಣಕೂಟದಲ್ಲಿ ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು. ಮುಖಂಡರ ಜೊತೆಗೆ ಗೂಳಿಹಟ್ಟಿ ಶೇಖರ್ ಅವರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಪಕ್ಷೇತರವಾಗಿ ಗೆದ್ದಿದ್ದ ಅವರು ಬಿಜೆಪಿ ಸರ್ಕಾರ ರಚಿಸಲು ಬೆಂಬಲ ನಿಡಿದ್ದರು ಆ ನಂತರ ಯಡಿಯೂರಪ್ಪ ಅವರ ವಿರುದ್ಧ ಬಂಡಾಯವೆದ್ದು ಬೆಂಬಲ ವಾಪಸ್ ಪಡೆದಿದ್ದರು, ಆನಂತರ ಜೆಡಿಎಸ್ ಸೇರಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದರು. ಇದೇ ವರ್ಷದ ಫೆಬ್ರವರಿಯಲ್ಲಿ ಬಿಜೆಪಿ ಸೇರಿ ಈ ಬಾರಿ ಚುನಾವಣೆಯಲ್ಲಿ ಗೆದ್ದು ಬಂದಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರುವ ಮುನ್ಸೂಚನೆಗಳು ಗೋಚರಿಸುತ್ತಿವೆ.
ಗೂಳಿಹಟ್ಟಿ ಶೇಖರ್ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಹೊಸದುರ್ಗದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರ ಗೆಲುವು ಕ್ಷೇತ್ರದಲ್ಲಿ ಮೊದಲ ಬಿಜೆಪಿಯ ಗೆಲುವಾಗಿತ್ತು. ಸದನದಲ್ಲಿ ಒಮ್ಮೆ ತಮ್ಮ ಶರ್ಟ್ ಹರಿದುಕೊಂಡು ಗೂಳಿಹಟ್ಟಿ ಸುದ್ದಿಯಾಗಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications