Karnataka Bandh: ಕಾಂಗ್ರೆಸ್ನ 2 ಗಂಟೆಗಳ ಬಂದ್ ಕರೆ, ಪಿಯು ವಿದ್ಯಾರ್ಥಿಗಳಲ್ಲಿ ಆತಂಕ
ಕಾಂಗ್ರೆಸ್ನ 2 ಗಂಟೆಗಳ ಬಂದ್ ಕರೆ ಕರ್ನಾಟಕದಲ್ಲಿ ಪರೀಕ್ಷೆಯ ದಿನದಂದು ಪಿಯು ವಿದ್ಯಾರ್ಥಿಗಳಲ್ಲಿ ಆತಂಕವನ್ನು ಉಂಟುಮಾಡಿದೆ.
ಬೆಂಗಳೂರು ಮಾರ್ಚ್ 8: ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ಕರ್ನಾಟಕದಲ್ಲಿ ಎರಡು ಗಂಟೆಗಳ ಕಾಲ ಬಂದ್ಗೆ ಕರೆ ನೀಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೊಳಗಾಗಿದ್ದಾರೆ. II ಪ್ರಿ-ಯೂನಿವರ್ಸಿಟಿ (PU) ಪರೀಕ್ಷೆಗಳು ಗುರುವಾರ ಕನ್ನಡ ಮತ್ತು ಅರೇಬಿಕ್ ಪತ್ರಿಕೆಗಳೊಂದಿಗೆ ಪ್ರಾರಂಭವಾಗಲಿವೆ.
ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಬೆಳಿಗ್ಗೆ 9 ರಿಂದ 11 ರವರೆಗೆ ಬಂದ್ಗೆ ಕರೆ ನೀಡಲಾಗಿದೆ. ಇದು ವಿದ್ಯಾರ್ಥಿಗಳ ಪ್ರಯಾಣದ ಸಮಯದಲ್ಲಿ ನಡೆಯಲಿದೆ. ಜೊತೆಗೆ ಅವರ ಪರೀಕ್ಷೆಯ ಸಮಯದವರೆಗೂ ನಡೆಯುತ್ತದೆ.

ಬಿಜೆಪಿಯ ಶಾಸಕರ ಪುತ್ರನ ಮನೆಯಲ್ಲಿ 8 ಕೋಟಿ ರೂ.ಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾನುವಾರ ಬಂದ್ ಘೋಷಿಸಿದರು.
ಜೊತೆಗೆ ಗುರುವಾರ ಕರ್ನಾಟಕದಲ್ಲಿ ಎರಡು ಗಂಟೆಗಳ ಕಾಲ ಬಂದ್ಗೆ ಕರೆ ನೀಡಿದರು. ಶಾಲೆಗಳು, ಕಾಲೇಜುಗಳು ಮತ್ತು ಕಚೇರಿಗಳು ಕಾರ್ಯನಿರ್ವಹಿಸುವ ಈ ಸಮಯದಲ್ಲಿ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಪಕ್ಷವು ಕೇಳಿದೆ.

ಯಾವುದೇ ಅಹಿತಕರ ಘಟನೆಗಳು, ಅಡೆತಡೆಗಳು ಸಂಭವಿಸುವುದಿಲ್ಲ ಎಂದು ಪಕ್ಷಗಳು ಭರವಸೆ ನೀಡಿದ್ದರೂ, ಪರೀಕ್ಷೆಯತ್ತ ಗಮನ ಹರಿಸಬೇಕಾದ ಮಕ್ಕಳು ಮತ್ತು ಪೋಷಕರಲ್ಲಿ ಏಕೆ ಆತಂಕ, ಭಯವನ್ನು ಸೃಷ್ಟಿಸಬೇಕು? ಬಂದ್ ಅನ್ನು ಮುಂದೂಡುವಂತೆ ನಾವು ಪಕ್ಷಗಳಿಗೆ ವಿನಂತಿಸುತ್ತೇವೆ ಎಂದು ಸದಸ್ಯ ಗುರುರಾಜ್ ಎಸ್. ಪೋಷಕರ ಧ್ವನಿಯಾಗಿ ಮಾತನಾಡಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಗೊಳಿಸುವ ಭರದಲ್ಲಿ ರಾಜಕಾರಣಿಗಳು ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿದ್ದಾರೆ. ನಮ್ಮ ರಾಜಕಾರಣಿಗಳು ಆಡುತ್ತಿರುವ ರಾಜಕೀಯಕ್ಕೆ ವಿದ್ಯಾರ್ಥಿಗಳು ಬೆಲೆ ತೆರಬೇಕಾಗುತ್ತದೆ. ಇದು ತುಂಬಾ ಅನಗತ್ಯವಾಗಿದೆ ಎಂದು ವಿದ್ಯಾರ್ಥಿಯ ತಂದೆ ಶಕೀಲ್ ಮೊಹಮ್ಮದ್ ಹೇಳಿದರು.

ನಾಳೆ ಕಾಂಗ್ರೆಸ್ನ 2 ಗಂಟೆಗಳ ಬಂದ್ ಕರೆ
ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಸರ್ಕಾರದ ಅಧಿಕಾರಿ ಮಾಡಾಳ್ ಪ್ರಶಾಂತ್ ಪ್ರಕರಣ ವಿಪಕ್ಷ ಕಾಂಗ್ರೆಸ್ ಗೆ ಟಾನಿಕ್ ಸಿಕ್ಕಂತಾಗಿದೆ. "ಬಿಜೆಪಿ ಸರ್ಕಾರ ಭಾರೀ ಭ್ರಷ್ಟಾಚಾರ, ಅಕ್ರಮ ವ್ಯವಹಾರಗಳಲ್ಲಿ ತೊಡಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷ ನಾಳೆ ಅಂದರೆ ಮಾರ್ಚ್ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಬಿಜೆಪಿ ಸರ್ಕಾರದ ಸಾಧನೆಗಳೆಂದರೆ, ಪ್ರತಿಯೊಂದು ಗುತ್ತಿಗೆಯಲ್ಲೂ 40% ಕಮಿಷನ್, ಶಾಲಾ ಅನುದಾನದಲ್ಲಿ 40% ಕಮಿಷನ್, ಧಾರ್ಮಿಕ ಮಠಗಳ ಅನುದಾನದಲ್ಲಿ 30% ಕಮಿಷನ್, ಮೈಸೂರು ಸ್ಯಾಂಡಲ್ ಸೋಪ್ ಅಕ್ರಮದಲ್ಲಿ ಲಂಚ, ವರ್ಗಾವಣೆ ಮತ್ತು ಪೋಸ್ಟಿಂಗ್ ಗೆ ಲಂಚ ಹೀಗಿಯೇ ಸಾಗುತ್ತಿದೆ.
"ಪಿಎಸ್ಐ, ಸಹಾಯಕ ಪ್ರಾಧ್ಯಾಪಕ, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್, ಜಿಲ್ಲಾ ಸಹಕಾರಿ ಬ್ಯಾಂಕ್, ಪೌರಕಾರ್ಮಿಕ ಕೆಲಸ, ಕೆಎಂಎಫ್ ಹುದ್ದೆ, ಸಹಾಯಕ ರಿಜಿಸ್ಟ್ರಾರ್ ಹುದ್ದೆ ನೇಮಕಾತಿ ಅಕ್ರಮಗಳು ಬಿಜೆಪಿ ಸರಕಾರದ ಸಾಧನೆಗಳಾಗಿವೆ" ಬಿಜೆಪಿ ಹಾಗೂ ಬೊಮ್ಮಾಯಿ ಅವರ ಭ್ರಷ್ಟಾಚಾರಕ್ಕೆ ಇತ್ತೀಚಿನ ಕೆಎಸ್ಡಿ ಎಲ್ ಅಕ್ರಮ ಸಾಕ್ಷಿಯಾಗಿದೆ ಎಂದು ಆರೋಪಿಸಿ ಬಂದ್ಗೆ ಕರೆ ನೀಡಿದ್ದಾರೆ.












Click it and Unblock the Notifications