ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ-ಸಿಬಿಐಗೆ ದೂರು ಕೊಟ್ಟ ಶಾಸಕ
ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಡಿಕೆಶಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಶಾಸಕರೊಬ್ಬರು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐಗೆ ದೂರು ಕೂಡ ಸಲ್ಲಿಸಿದ್ದಾರೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಶೇ 15ರಷ್ಟು ಕಮಿಷನ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಡಿಕೆಶಿ ಬೆಂಗಳೂರಿನ ಕಾಮಗಾರಿಗಳ ಗುತ್ತಿಗೆ ನೀಡಲು ಟೆಂಡರ್ ಕರೆದಿಲ್ಲ, ಹಾಗೆಯೇ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಇಡಿ ಹಾಗೂ ಸಿಬಿಐಗೆ ದೂರು ನೀಡಿದ್ದಾರೆ. ಅಲ್ಲದೆ ಈ ಗುತ್ತಿಗೆಗಳನ್ನು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರ ಸಂಬಂಧಿಕರಿಗೆ ನೀಡಲಾಗುತ್ತಿದೆ ಎಂದೂ ಶಾಸಕ ಮುನಿರತ್ನ ಆರೋಪಿಸಿದ್ದಾರೆ.

ಇತ್ತೀಚೆಗೆ ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಂಜುನಾಥ್ ಗೌಡ ಅವರೇ ಡಿ.ಕೆ.ಶಿವಕುಮಾರ್ ಅವರ ಪರವಾಗಿ ಈ ಗುತ್ತಿಗೆದಾರರಿಂದ ಶೇ 15ರಷ್ಟು ಕಮಿಷನ್ ಹಣ ಕೂಡ ಪಡೆದಿದ್ದಾರೆ ಎಂದು ಮುನಿರತ್ನ ಆರೋಪ ಮಾಡಿದ್ದಾರೆ. ಈ ಅಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೂಡ ನೇರವಾಗಿ ಭಾಗಿಯಾಗಿದ್ದಾರೆ. ಕರ್ನಾಟಕದಲ್ಲಿರುವ ಗುತ್ತಿಗೆದಾರರನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಕೆಲವು ಕಾಮಗಾರಿಗಳಿಗೆ ತಮ್ಮದೇ ಬೇನಾಮಿ ಕಂಪನಿಗಳ ಮೂಲಕ ಟೆಂಡರ್ನಲ್ಲಿ ಗುತ್ತಿಗೆ ಪಡೆಯಲಾಗಿದೆ ಎಂದೂ ಆರೋಪಿಸಿದ್ದಾರೆ.
ಯಶವಂತಪುರ ವಿಧಾನಸಭಾ ಕ್ಷೇತ್ರದ ಸುಮಾರು 232 ಕೋಟಿ ಮೊತ್ತದ ಕಾಮಗಾರಿಗಳ ಗುತ್ತಿಗೆಯನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸ್ಟಾರ್ ಚಂದ್ರು ಅವರ ಸ್ಟಾರ್ ಬಿಲ್ಡರ್ಸ್ಗೆ ನೀಡಲಾಗಿದೆ. ಈ ಎಲ್ಲ ಅಕ್ರಮಗಳ ವಿರುದ್ಧ ಕೇಸ್ ದಾಖಲಿಸಿಕೊಂಡು, ತನಿಖೆ ನಡೆಸಬೇಕು ಎಂದು ಶಾಸಕ ಮುನಿರತ್ನ ದೂರಿನಲ್ಲಿ ತಿಳಿಸಿದ್ದಾರೆ.

ಆಂಧ್ರ ಪ್ರದೇಶದ ಕಂಪನಿಯೊಂದಕ್ಕೆ ಬರೋಬ್ಬರಿ 1,768 ಕೋಟಿ ರೂಪಾಯಿ ಪ್ಯಾಕೇಜ್ನ ಕಾರ್ಯಾದೇಶ ನೀಡಲು ಮುಂದಾಗಿದ್ದಾರೆ. ಇದಕ್ಕಾಗಿ 15 ಪರ್ಸೆಂಟ್ ಕಮಿಷನ್ ಹಣವನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಮೂಲಕ ಗುತ್ತಿಗೆದಾರರು ಅಡ್ವಾನ್ಸ್ ನೀಡಿದ್ದಾರೆ. ಒಟ್ಟಾರೆ ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನೇರ ಪಾತ್ರವಿದೆ ಎಂದು ಮುನಿರತ್ನ ದೂರಿದ್ದಾರೆ.
ಕೇವಲ ಐದೇ ವಾರ್ಡ್ ಹೊಂದಿರುವ ಯಶವಂತಪುರಕ್ಕೆ ನೂರಾರು ಕೋಟಿ ಹಣ ಹಂಚಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ 232 ಕೋಟಿ ರೂಪಾಯಿ ಹಂಚಿಕೆಯಾಗಿದೆ. ಕಾಂಗ್ರೆಸ್ ಮುಖಂಡ ಸ್ಟಾರ್ ಚಂದ್ರು ಮಾಲೀಕತ್ವದ ಸ್ಟಾರ್ ಬಿಲ್ಡರ್ಸ್ ಕಂಪನಿಗೆ ಭಾರಿ ಮೊತ್ತದ ಟೆಂಡರ್ ನೀಡಲು ತಯಾರಿ ನಡೆದಿದೆ. ಕೂಡಲೇ ಈ ಅಕ್ರಮಗಳನ್ನು ತಡೆಯಿರಿ ಎಂದು ಕೋರಿದ್ದಾರೆ ಎಂದೂ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಕಾಮಗಾರಿಗಳಿಗೆ ಬೇರೆ ರಾಜ್ಯದ ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗುತ್ತಿದೆ. ಸ್ಥಳೀಯ ಗುತ್ತಿಗೆದಾರರನ್ನು ಸಂಪೂರ್ಣವಾಗಿ ಕಡೆಗಣಿಸಲಾಗುತ್ತಿದ್ದು, ಇದರಿಂದ ನಮ್ಮ ರಾಜ್ಯದ ಗುತ್ತಿಗೆದಾರರು ಅವಕಾಶ ವಂಚಿತರಾಗುತ್ತಿದ್ದಾರೆ ಎಂದೂ ಬೇಸರ ವ್ಯಕ್ತಪಡಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications