Munirathna: ಏಡ್ಸ್ ರಕ್ತ ಇಂಜೆಕ್ಟ್, ಇಡೀ ವಂಶವೇ ಸರ್ವನಾಶ: ದೇಶ ಬಿಡಲು ನಿರ್ಧರಿಸಿದ್ದ ಆರ್.ಅಶೋಕ್!
ಬೆಂಗಳೂರು, ನವೆಂಬರ್ 11: ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿದ್ದ ಏಡ್ಸ್ ರೋಗಿಯ ರಕ್ತವನ್ನು ಒಕ್ಕಲಿಗ ನಾಯಕನಿಗೆ ಇಂಜೆಕ್ಟ್ ಮಾಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ದಾಖಲಾದ ಬಳಿಕ ರಕ್ತ ಕೊಟ್ಟ ಏಡ್ಸ್ ರೋಗಿ, ಇಂಜೆಕ್ಟ್ ಮಾಡಲು ಮುಂದಾಗಿದ್ದವರ ವಿಚಾರಣೆ ನಡೆದಿದೆ. ಇದೆಲ್ಲ ನೋಡಿ ಸಾಕಾಗಿರುವ ನಾನು ಭಾರತ ಬಿಟ್ಟು ಹೋಗಿಬಿಡುತ್ತೇನೆ ಎಂದು ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಭೀತಿಯಿಂದಲೇ ಹೇಳಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಹೌದು...ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಏಡ್ಸ್ ರೋಗಿಯ ರಕ್ತವನ್ನು ಆರ್.ಅಶೋಕ್ ಅವರಿಗೆ ಇಂಜೆಕ್ಟ್ ಮಾಡಲು ಪ್ಲಾನ್ ಮಾಡಿಕೊಂಡಿದ್ದರು. ಅದಕ್ಕಾಗಿ ಮೂವರನ್ನು ನೇಮಿಸಿದ್ದರು ಎಂಬ ಎಲ್ಲ ವಿಚಾರಗಳು ವರದಿ ಆಗಿದ್ದವು. ಸದ್ಯ ಮುನಿರತ್ನ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಏಡ್ಸ್ ರೋಗಿಯ ರಕ್ತ ತಮಗೆ ಇಂಜೆಕ್ಟ್ ಮಾಡಲು ಪ್ಲಾನ್ ಮಾಡಲಾಗಿತ್ತು ಎಂಬ ವಿಚಾರ ಕೇಳಿಯೇ ನನಗೆ ಮೂರು ದಿನ ನಿದ್ದೆ ಬಂದಿಲ್ಲ ಎಂದು ಘಟನೆಯ ಕುರಿತು ಆರ್.ಅಶೋಕ್, ಕೇಂದ್ರ ಖಾತೆ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರ ಮುಂದೆ ಹೇಳಿಕೊಳ್ಳುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹೇಳಿಕೆ ಕೊಡಲು ಒಪ್ಪದ ಆರ್.ಅಶೊಕ್
ಇದೆಲ್ಲ ನೋಡಿ, ಅವರ ಪ್ಲಾನ್ ಕೇಳಿ ನನಗೆ ಮೂರು ದಿನ ನಿದ್ದೆ ಬಂದಿಲ್ಲ ಅಣ್ಣ. ರಕ್ತ ಕೊಟ್ಟ ಏಡ್ಸ್ ರೋಗಿ ಆ ಹೆಣ್ಣುಮಗಳು ಪೊಲೀಸರ ಮುಂದೆ ನಿಜಾ ಒಪ್ಪಿಕೊಂಡಿದ್ದಾಳೆ. ಪೊಲೀಸರು ಇಂಜೆಕ್ಟ್ ಮಾಡಲಿದ್ದ (ಪ್ರಕರಣದಲ್ಲಿ ಭಾಗಿಯಾಗಿದ್ದ) ಕೆಲವರನ್ನು ವಿಚಾರಣೆ ಮಾಡಿದ್ದಾರೆ. ಅವರೆಲ್ಲರು ರಕ್ತ ಇಂಜೆಕ್ಟ್ ಕುರಿತ ಎಲ್ಲ ಪ್ಲಾನ್ ಸಂಗತಿ, ನಡೆದಿದ್ದೇನೆ ಎಂದು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ನನಗೂ ಹೇಳಿಕೆ ಕೊಡಲು ಪೊಲೀಸರು ಒತ್ತಾಯಿಸಿದ್ದು, ನಾನು ಅವರಿಗೆ ಬರುವುದಿಲ್ಲ ಎಂದು ಬೈದಿದ್ದೇನೆ. ದಾಖಲೆ ತರುವಂತೆ ಹೇಳಿದ್ದೇನೆ ಎಂದು ಸಚಿವರ ಬಳಿ ಆರ್. ಅಶೋಕ್ ಆತಂಕ ವ್ಯಕ್ತಪಡಿಸಿಕೊಂಡಿದ್ದಾರೆ.
ಇಡೀ ವಂಶವೇ ಸರ್ವನಾಶವಾಗುತ್ತದೆ: ಆರ್.ಅಶೋಕ್ ಭೀತಿ
ಒಂದು ಕೊಲೆ ಮಾಡಿದರೆ ಅದು ಬೇರೆ, ಆದರೆ ಇಂತಹ ರಕ್ತ ಇಂಜೆಕ್ಟ್ ಮಾಡಿದರೆ, ಇಡೀ ವಂಶವೇ ಸರ್ವನಾಶವಾಗುತ್ತದೆ. ಮುಂದೆ ಬದುಕಿನ ಗತಿ ಏನಾಗುತ್ತದೆ. ಇದೆಲ್ಲ ನೆನಸಿಕೊಂಡು ಭಯವಾಗುತ್ತದೆ. ಈ ದೇಶವೇ ಬೇಡ ನಾನು ದೇಶ ಬಿಟ್ಟು ಹೋಗಿ ಬಿಡುತ್ತೇನೆ ಎಂದು ನಿರ್ಧರಿಸುವಂತಾಗಿತ್ತು ಎಂದು ಅವರು ನಡೆದ ಬೆಳವಣಿಗೆ ಕುರಿತು ಭೀತಿ ವ್ಯಕ್ತಪಡಿಸಿದ್ದಾರೆ.
ಆರ್.ಅಶೋಕ್ ಮಾತ್ರವಲ್ಲದೇ ಮುನಿರತ್ನ ಅವರು ರಾಜಕೀಯ ವಿರೋಧಿಗಳಿಗೆ ಏಡ್ಸ್ ರೋಗಿ ರಕ್ತ ಇಂಜೆಕ್ಟ್ ಮಾಡಲು ಪ್ಲಾನ್ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇದರ ವಿರುದ್ಧ ಪೊಲೀಸರ ಸಾಕ್ಷ್ಯ ಸಹ ಸಂಗ್ರಹಿಸಿದ್ದಾರೆ. ಇದೊಂದು ಹೇಯ ಕೃತ್ಯವೆಂದು ಪಕ್ಷೇಬೇಧ ಮರೆತು ನಾಯಕರು ಖಂಡಿಸಿದ್ದಾರೆ. ಇದು ಕೆಲವು ರಾಜಕೀಯ ಹೇಳಿಕೆಗಳಿಗೂ ಕಾರಣವಾಯಿತು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications