ಕಾಂಗ್ರೆಸ್ ದಲಿತ ನಾಯಕರಿಗೆ ಆರ್.ಅಶೋಕ್ ಗಂಭೀರ ಪ್ರಶ್ನೆ
ವಿಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ದಲಿತ ನಾಯಕರಿಗೆ ಗಂಭೀರ ಪ್ರಶ್ನೆಯೊಂದನ್ನು ಕೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ದಲಿತರು, ಶೋಷಿತರೇ ಟಾರ್ಗೆಟ್ ಆಗಿದ್ದಾರೆ. ಆದರೂ ಕಾಂಗ್ರೆಸ್ನ ದಲಿತ ನಾಯಕರು ಮೌನಕ್ಕೆ ಶರಣಾಗಿರುವುದು ಏಕೆ? ಎಂದು ಅಶೋಕ್ ಕೇಳಿದ್ದಾರೆ. ದಲಿತ ವಿರೋಧಿ ಕಾಂಗ್ರೆಸ್ ವರಸೆ ಹೀಗಿದೆ. ದಲಿತರ ಮತ ಬೇಕು, ಆದರೆ ದಲಿತರ ಅಭಿವೃದ್ಧಿ ಬೇಡ ಎಂದು ಟೀಕಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದೆ. ಪರಿಶಿಷ್ಟ ಸಮುದಾಯಗಳ ಎಸ್ಸಿಎಸ್ಪಿ, ಟಿಎಸ್ಪಿ ಹಣ ದುರುಪಯೋಗವಾಗಿದೆ. ಪರಿಶಿಷ್ಟರ ನಿಗಮ ಮಂಡಳಿಗಳ ಅನುದಾನಕ್ಕೆ ಕತ್ತರಿ ಹಾಕಲಾಗಿದೆ. ದಲಿತ ವಿರೋಧಿ ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಕುರ್ಚಿ, ದಲಿತರ ಜಮೀನು, ದಲಿತರ ಅನುದಾನ ಕಬಳಿಸಿ, ದಲಿತರಿಗೆ ಕೊಟ್ಟಿದ್ದು ಬಹುದೊಡ್ಡ ಚೊಂಬು ಎಂದು ವಾಗ್ದಾಳಿ ನಡೆಸಿದ್ದಾರೆ.

ದಲಿತ ಸಮುದಾಯದ ನಾಯಕರನ್ನು ತುಳಿಯುತ್ತಲೇ ಮೇಲೆ ಬಂದಿರುವ ಸಿಎಂ ಸಿದ್ದರಾಮಯ್ಯ ಅವರ ದಲಿತ ವಿರೋಧಿ ನೀತಿಗಳು ಅಲ್ಲಿಗೇ ನಿಂತಿಲ್ಲ. ಎರಡನೇ ಬಾರಿ ಅಧಿಕಾರಕ್ಕೆ ಬಂದಾಗಿನಿಂದ ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ದುರುಪಯೋಗ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಈ ವರ್ಷದ ಬಜೆಟ್ನಲ್ಲೂ ದ್ರೋಹ ಮಾಡಲು ಹೊರಟಿದೆ ಎಂದು ದೂರಿದ್ದಾರೆ.
2023-24ರಲ್ಲಿ 11,144 ಕೋಟಿ ರೂಪಾಯಿ, 2024-25ರಲ್ಲಿ 14,282 ಕೋಟಿ ರೂಪಾಯಿ ಪರಿಶಿಷ್ಟರ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದ ಕಾಂಗ್ರೆಸ್ ಸರ್ಕಾರ ಈ ಬಾರಿ 25,000 ಕೋಟಿ ರೂಪಾಯಿ ಎಸ್ಸಿಎಸ್ಪಿ, ಟಿಎಸ್ಪಿ ಹಣವನ್ನು ಗ್ಯಾರೆಂಟಿಗಳ ಹೆಸರಿನಲ್ಲಿ ಗುಳುಂ ಮಾಡುವ ಮೂಲಕ ಪರಿಶಿಷ್ಟ ಸಮುದಾಯಗಳಿಗೆ ಮತ್ತೂಮ್ಮೆ ದ್ರೋಹ ಬಗೆಯಲು ಹೊಂಚು ಹಾಕುತ್ತಿದೆ ಎಂದಿದ್ದಾರೆ.

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಅನುದಾನ ನೀಡುವ ಸಂಬಂಧವೂ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. 342 ಕೋಟಿ ರೂಪಾಯಿ ಅನುದಾನ ನೀಡಲು ಯೋಗ್ಯತೆ ಇಲ್ಲದೆ, ಬಿಜೆಪಿ ಸರ್ಕಾರ ಒಂಬತ್ತು ಜಿಲ್ಲೆಗಳಲ್ಲಿ ಆರಂಭಿಸಿದ್ದ ವಿಶ್ವವಿದ್ಯಾಲಯಗಳನ್ನ ಮುಚ್ಚುತ್ತೇವೆ ಎಂದು ಕಾಂಗ್ರೆಸ್ ಹಠಕ್ಕೆ ಬಿದ್ದಿದೆ. ಮತ್ತೊಂದೆಡೆ ಮುಸ್ಲಿಮರ ಶಿಕ್ಷಣಕ್ಕೆ 1,200 ಕೋಟಿ ರೂಪಾಯಿ ವಿನಿಯೋಗಿಸಲು ಹೊರಟಿದೆ ಎಂದು ಗರಂ ಆಗಿದ್ದಾರೆ.
ತಮ್ಮ ಸರ್ಕಾರದ ಬಳಿ ಒಂಬತ್ತು ವಿಶ್ವವಿದ್ಯಾಲಯಗಳನ್ನು ಉಳಿಸಿಕೊಳ್ಳಲು 342 ಕೋಟಿ ರೂಪಾಯಿ ಹಣ ಇಲ್ಲ. ಆದರೆ ಮುಸ್ಲಿಮರ ಶಿಕ್ಷಣಕ್ಕೆ ಕೊಡಲು 1,200 ಕೋಟಿ ರೂಪಾಯಿ ಇದೆ ಅಲ್ಲವೇ? ಮುಸ್ಲಿಂ ಮಕ್ಕಳ ಶಿಕ್ಷಣಕ್ಕೆ ಅನುದಾನ ಕೊಡಿ, ಬೇಡ ಅನ್ನಲ್ಲ. ಆದರೆ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉಪಯೋಗವಾಗುವ ವಿವಿಗಳನ್ನು ಯಾಕೆ ಮುಚ್ಚುತ್ತೀರಿ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಡವರ ಮಕ್ಕಳ ಉನ್ನತ ಶಿಕ್ಷಣಕ್ಕೆ 342 ಕೋಟಿ ರೂಪಾಯಿ ಖರ್ಚು ಮಾಡಲೂ ಸಾಧ್ಯವಾಗದಷ್ಟು ಪಾಪರ್ ಆಗಿದೆಯೇ ನಿಮ್ಮ ಕಾಂಗ್ರೆಸ್ ಸರ್ಕಾರ? ಬಡವರ ಮಕ್ಕಳ ಶಿಕ್ಷಣಕ್ಕಿಂತ ಓಲೈಕೆ ರಾಜಕಾರಣವೇ ಹೆಚ್ಚಾಗಿರುವ ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications