ಜೆಡಿಎಸ್ ಮೈತ್ರಿಗೆ ಎಸ್ಟಿ ಸೋಮಶೇಖರ್ ವಿರೋಧ: ಬಿಜೆಪಿ ತೊರೆಯುವ ಸುಳಿವು ನೀಡಿದ ಯಶವಂತಪುರ ಶಾಸಕ
ಬೆಂಗಳೂರು, ಅಕ್ಟೋಬರ್ 05: ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಯನ್ನು ಯಶವಂತಪುರ ಶಾಸಕ ಎಸ್ಟಿ ಸೋಮಶೇಖರ್ ವಿರೋಧಿಸಿದ್ದಾರೆ. ಎರಡೂ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ, ಮೈತ್ರಿಯ ಅಧಿಕೃತ ಘೋಷಣೆಯ ನಂತರ ಬಿಜೆಪಿಯಲ್ಲಿ ಉಳಿದುಕೊಳ್ಳುವ ಬಗ್ಗೆ ನಿರ್ಧರಿಸುವುದಾಗಿ ಅವರು ತಿಳಿಸಿದ್ದಾರೆ.
ಕೆಲ ದಿನಗಳಿಂದ ಬಿಜೆಪಿ ತೊರೆಯುವ ಸುಳಿವು ನೀಡುತ್ತಿದ್ದರುವ ಸೋಮಶೇಖರ್, ಜೆಡಿಎಸ್ ಜೊತೆಗಿನ ಮೈತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಹಲವು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾರೂ ಸಾರ್ವಜನಿಕವಾಗಿ ಮಾತನಾಡುತ್ತಿಲ್ಲ. ಆದರೆ ಆಂತರಿಕವಾಗಿ ತಮ್ಮ ನಿರಾಶೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ನಾನು ಆರು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ಜೆಡಿಎಸ್ ಪ್ರಮುಖ ಪ್ರತಿಪಕ್ಷವಾಗಿದೆ. 20 ವರ್ಷಗಳಿಂದ ಅವರ ವಿರುದ್ಧ ಹೋರಾಟ ನಡೆಸಿದ್ದು, ಅವರೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಕಷ್ಟ' ಎಂದು ಹೇಳಿದ್ದಾರೆ.
ವೈಯಕ್ತಿಕವಾಗಿ ನಾನು ಮೈತ್ರಿಯನ್ನು ವಿರೋಧಿಸುತ್ತೇನೆ. ಪಕ್ಷದ ನಾಯಕರು ನನ್ನ ಅಭಿಪ್ರಾಯವನ್ನು ಕೇಳಿದಾಗ ಅದರ ಬಗ್ಗೆ ಮಾತನಾಡುತ್ತೇನೆ ಎಂದು ಸೋಮಶೇಖರ್ ತಿಳಿಸಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸೋಮಶೇಖರ್ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
'ನಮ್ಮ ಕಾರ್ಯಕರ್ತರು ಮೈತ್ರಿಗೆ ವಿರುದ್ಧವಾಗಿದ್ದಾರೆ. ಎಲ್ಲೇ ಹೋದರೂ ಮೈತ್ರಿ ಬಗ್ಗೆ ನೆಗೆಟಿವ್ ಫೀಡ್ ಬ್ಯಾಕ್ ಬರುತ್ತಿದೆ. ಅವರು ಅಧಿಕೃತವಾಗಿ ಮೈತ್ರಿಯನ್ನು ಘೋಷಿಸಿದಾಗ, ನಾನು ನನ್ನ ಬೆಂಬಲಿಗರನ್ನು ಸಂಪರ್ಕಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ. ಬೆಂಬಲಿಗರಿಲ್ಲದೆ ನಾವು ಶಾಸಕರಾಗಲು ಸಾಧ್ಯವಿಲ್ಲ' ಎಂದು ಸೋಮಶೇಖರ್ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ತಮ್ಮ ಆದೇಶದವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಸೂಚಿಸಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ.
'ನಾನು ಒಂದು ತಿಂಗಳಿಂದ ಮೌನವಾಗಿದ್ದೇನೆ. ತರಾತುರಿಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಬಿಎಸ್ ಯಡಿಯೂರಪ್ಪನವರು ಹೇಳಿದ್ದಾರೆ. ಅವರು ಸೂಚಿಸಿದ್ದಕ್ಕಾಗಿ ನಾನು ಮಾತನಾಡಿಲ್ಲ. ಯಡಿಯೂರಪ್ಪ ಅವರೊಂದಿಗೆ ಸಮಾಲೋಚಿಸಿದ ನಂತರ ನಾನು ನಿರ್ಧಾರ ತೆಗೆದುಕೊಳ್ಳುತ್ತೇನೆ' ಎಂದು ಯಶವಂತಪುರ ಶಾಸಕರು ಹೇಳಿದ್ದಾರೆ.
ಇತ್ತೀಚೆಗಷ್ಟೇ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿರುವ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸಹ ಸುದ್ದಿಗಾರರೊಂದಿಗೆ ಮಾತನಾಡುವಾಗ ಸೋಮಶೇಖರ್ ಜೊತೆಗಿದ್ದರು.
ಸೋಮಶೇಖರ್ ಮತ್ತು ಹೆಬ್ಬಾರ್ ಅವರು 2019 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಬಿಜೆಪಿ ಅಧಿಕಾರ ಕಳೆದುಕೊಂಡ ನಂತರ, ಅವರು ಪಕ್ಷವನ್ನು ತೊರೆಯುವ ಸುಳಿವು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಮೈತ್ರಿ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇದು ಜೆಡಿಎಸ್ನ ಕೆಲ ಮುಖಂಡರು ಹಾಗೂ ಬಿಜೆಪಿಯ ಕೆಲ ನಾಯಕರಲ್ಲಿ ಅಸಮಾಧಾನ ಹುಟ್ಟುಹಾಕಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications