"ಜಿ. ಪರಮೇಶ್ವರ್ ಅವರೇ ನಿಮಗೆ ಇಲಾಖೆಯ ಮೇಲೆ ಹಿಡಿತವಿಲ್ಲವೇ"
ರಾಜ್ಯ ಸರ್ಕಾರವು ಹಿಂದೂ ವಿರೋಧ ನೀತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ಪದೇ ಪದೇ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಸುನೀಲ ಕುಮಾರ್ ಅವರು ದೂರಿದ್ದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಅದರಲ್ಲೂ ಗೃಹ ಸಚಿವರ ವಿರುದ್ಧ ಸರಣಿ ಟ್ವೀಟ್ ಮಾಡಿ ಯಕ್ಷಗಾನಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿದ್ದಾರೆ. ಘಟನೆಯ ಹಿನ್ನೆಲೆಯ ಏನು, ಸರಣಿ ಟ್ವೀಟ್ ಮಾಡಿ ಸುನೀಲ್ ಅವರು ಕೆಂಡಾಮಂಡಲರಾಗಿದ್ದೇಕೆ ಅನ್ನುವ ಡೀಟೆಲ್ಸ್ ನೋಡೋಣ...

ಬಿಜೆಪಿ ಶಾಸಕ ಸುನೀಲ ಅವರು ರಾಜ್ಯ ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಕೆಲಸಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಜಿ ಪರಮೇಶ್ವರ್ ಅವರೇ ಯಕ್ಷಗಾನದಿಂದ ಕಾನೂನು ಸುವ್ಯವಸ್ಥೆ ಹದೆಗೆಡುತ್ತದೆಯೇ. ಇಲ್ಲವೇ ಯಕ್ಷಗಾನದಿಂದ ಯಾರ ಮನಸಿಗಾದರೂ ನೋವಾಗುತ್ತದೆಯೇ. ನೀವೊಬ್ಬರು ಸಭ್ಯ ಹಾಗೂ ಸುಸಂಸ್ಕೃತ ವ್ಯಕ್ತಿ ಎಂದು ನಾವೆಲ್ಲ ಭಾವಿಸಿದ್ದೇ ಈಗ ಸುಳ್ಳಾಗಿದೆ ಎಂದು ಸುನೀಲ್ ಅವರು ಹೇಳಿದ್ದಾರೆ.
ಮುಂದುವರಿದು ನಿಮ್ಮ ಅವಧಿಯಲ್ಲಿ ಪೊಲೀಸ್ ಇಲಾಖೆ ಎಂಬುದು ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ಪದೇ ಪದೇ ಬಳಕೆಯಾಗುತ್ತಿದೆ ಎಂಬುದು ಆತ್ಯಂತ ಬೇಸರದ ಸಂಗತಿಯಾಗಿದೆ. ವಾಕ್ ಸ್ವಾತಂತ್ರ್ಯ, ಸಂವಿಧಾನ ಇತ್ಯಾದಿ ವಿಚಾರಗಳು ನಿಮಗೆ ಭಾಷಣದ ಸರಕಾಗಿ ಬಿಟ್ಟಿದೆ.
ಇಲ್ಲವಾದರೆ ಕಾರ್ಕಳ ತಾಲ್ಲೂಕಿನ ಶಿರ್ಲಾಲು ಗ್ರಾಮದ ಮುಂಡ್ಲಿಯಲ್ಲಿ ನಿನ್ನೆ ನಡೆಯುತ್ತಿದ್ದ ಯಕ್ಷಗಾನ ಪ್ರದರ್ಶನವನ್ನು ಸ್ಥಳೀಯ ಕಾಂಗ್ರೆಸ್ ಮುಖಂಡನ ದೂರಿನ ಮೇರೆಗೆ ಸ್ಥಗಿತಗೊಳಿಸಲು ಹೊರಟಿದ್ದು ಎಷ್ಟು ಸರಿ. ಯಕ್ಷಗಾನ ಕರಾವಳಿ ಜಿಲ್ಲೆಗಳ ಪ್ರಾರಂಪರಿಕ ಕಲೆಯಾಗಿದ್ದು ರಾತ್ರಿ ಪೂರ್ತಿ ಪ್ರದರ್ಶನಗೊಳ್ಳುತ್ತದೆ ಎಂದು ತಿವಿದಿದ್ದಾರೆ.
ಮುಂದುವರಿದು ಕಾಂಗ್ರೆಸ್ ನಾಯಕ ದೂರು ಕೊಟ್ಟ ಎಂಬ ಕಾರಣಕ್ಕೆ ಎಸ್ಪಿಯೇ ಯಕ್ಷಗಾನ ನಿಲ್ಲಿಸಲು ಪೊಲೀಸರನ್ನು ಕಳುಹಿಸಿದ್ದು ಎಷ್ಟು ಸರಿ. ಸಾಲದಕ್ಕೆ ಮರುದಿನ ಯಕ್ಷಗಾನ ಆಯೋಜಕರ ಮೇಲೆ ಮೊಕದ್ದಮೆ ದಾಖಲಿಸುವ ಮೂಲಕ ನಿಮ್ಮ ಪೊಲೀಸರು ಎಫ್ಐಆರ್ ಸರ್ಕಾರ ನಡೆಸಲು ಹೊರಟಿದ್ದಾರಾ ಎಂದು ಅವರು ಕೇಳಿದ್ದಾರೆ. ಇಂದು ಯಕ್ಷಗಾನ.
ನಾಳೆ ಕಂಬಳ, ಭೂತಕೋಲ ಇತ್ಯಾದಿ ಧಾರ್ಮಿಕ ಆಚರಣೆಗಳನ್ನು ಕಾಂಗ್ರೆಸ್ ನಾಯಕರು ದೂರು ಕೊಟ್ಟರೆಂದು ನಿಲ್ಲಿಸುತ್ತೀರಾ. ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ಕನಸು ಕಾಣುತ್ತಿರುವ ನಿಮಗೆ ನಾಡಿನ ಸಾಂಸ್ಕೃತಿಕ ಆಯಾಮದ ಬಗ್ಗೆ ಕಲ್ಪನೆ ಇಲ್ಲವೋ ಅಥವಾ ಇಲಾಖೆಯ ಮೇಲೆ ಹಿಡಿತವಿಲ್ಲವೋ ಎಂದು ಕಾರವಾಗಿ ಪ್ರಶ್ನೆ ಮಾಡಿದ್ದಾರೆ.
ಹಿನ್ನೆಲೆ ಏನು: ಬಿಜೆಪಿ ಶಾಸಕ ಸುನೀಲ ಕುಮಾರ್ ಅವರು ಈ ರೀತಿ ಆಕ್ರೋಶ ವ್ಯಕ್ತಪಡಿಸುವುದಕ್ಕೆ ಯಕ್ಷಗಾನ ಕಾರ್ಯಕ್ರಮವನ್ನು ನಿಲ್ಲಿಸುವುದರೊಂದಿಗೆ ಪ್ರಾರಂಭವಾಗಿದೆ. ಅಲ್ಲದೆ ಸ್ಥಳೀಯ ಕಾಂಗ್ರೆಸ್ ನಾಯಕರ ಹಸ್ತಕ್ಷೇಪದಿಂದಲೇ ಈ ರೀತಿ ಮಾಡಲಾಗಿದೆ ಎಂದು ಶಾಸಕ ಸುನೀಲ ಕುಮಾರ್ ಅವರು ಆರೋಪ ಮಾಡಿದ್ದಾರೆ. ಸರಣಿ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications