ಬೆಳಗಾವಿ ಅಧಿವೇಶನ: ಜಮೀರ್ ಖಾನ್ರನ್ನು ವಜಾಗೊಳಿಸಲು ವಿಪಕ್ಷಗಳ ಆಗ್ರಹ
ತೆಲಂಗಾಣದ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿದ್ದ ಹೇಳಿಕೆ ವಿವಾದವಾಗಿದ್ದು, ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಬಿಜೆಪಿ ಸೋಮವಾರ ವಿಧಾನಸಭೆಯೊಳಗೆ ಅಹೋರಾತ್ರಿ ಪ್ರತಿಭಟನೆ ನಡೆಸಿತು.
ಸೋಮವಾರ ಬಿಜೆಪಿ ಶಾಸಕರು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಘೋಷಣೆ ಕೂಗಿದ್ದಲ್ಲದೆ ವಜಾಗೊಳಿಸುವಂತೆ ಒತ್ತಾಯಿಸಿದರು. ತೆಲಂಗಾಣದಲ್ಲಿ ಭಾಷಣ ಮಾಡಿದ ಖಾನ್, ಕರ್ನಾಟಕ ವಿಧಾನಸಭೆಯಲ್ಲಿ ಮೊದಲ ಬಾರಿಗೆ ಶಾಸಕರು ಮುಸ್ಲಿಂ ಸ್ಪೀಕರ್ಗೆ ಕೈ ಜೋಡಿಸಿ ಗೌರವ ತೋರಿಸಬೇಕು ಎಂದು ಹೇಳಿದ್ದರು, ಸದನದಲ್ಲಿ ಸದ್ಯ ಈ ವಿಚಾರ ಭಾರಿ ವಾದ ವಿವಾದಕ್ಕೆ ಕಾರಣವಾಗಿದೆ.

ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಲು ಜಮೀರ್ ಖಾನ್ ಅವರು ಎದ್ದುನಿಂತ ತಕ್ಷಣ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಇತರ ಬಿಜೆಪಿ ಶಾಸಕರು ಪ್ರತಿಭಟನೆಯನ್ನು ಪ್ರಾರಂಭಿಸಿದರು. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಲ್ಲದೆ, ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದರು.
ಸ್ಪೀಕರ್ ಸ್ಥಾನಕ್ಕೆ ಅವಮಾನ
ಜಮೀರ್ ಖಾನ್ ಸ್ಪೀಕರ್ ಕುರ್ಚಿಗೆ ಅಪಖ್ಯಾತಿ ತಂದಿದ್ದಾರೆ ಎಂದು ಅಶೋಕ್ ಹೇಳಿದರು, ಮತ್ತೊಬ್ಬ ಶಾಸಕ ಡಾ ಸಿ. ಎನ್ ಅಶ್ವಥ್ ನಾರಾಯಣ ಅವರು ಸಚಿವ ಸ್ಥಾನಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿದ್ದು ಅವರು "ಶಾಸಕರಾಗಲು ಅರ್ಹರಲ್ಲ" ಎಂದು ಹೇಳಿದರು.
ಸ್ಪೀಕರ್ ಯುಟಿ ಖಾದರ್ ಅವರು ಈ ವಿಷಯದ ಬಗ್ಗೆ ನೋಟಿಸ್ ನೀಡುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದರು. ಈ ವಿಚಾರವಾಗಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರು ಸದನವನ್ನು ಮುಂದೂಡಿ ಉಭಯ ಪಕ್ಷಗಳ ನಾಯಕರ ಜತೆ ಮಾತುಕತೆ ನಡೆಸಿ ಸದನ ಸುಗಮವಾಗಿ ನಡೆಯುವಂತೆ ಮಾಡಿದರು.
ಕಲಾಪ ಪುನರಾರಂಭಗೊಂಡಾಗ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಜಮೀರ್ ಖಾನ್ ಅವರನ್ನು ಸಮರ್ಥಿಸಿಕೊಂಡರು. "ಅವರು ಯಾರನ್ನೂ ಅವಮಾನಿಸಲು ಯಾವುದೇ ಭಾಷೆಯನ್ನು ಬಳಸಿಲ್ಲ" ಎಂದರು.
"ಕಾಂಗ್ರೆಸ್ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳೆಂದು ಪರಿಗಣಿಸುತ್ತದೆ. ಹಿಂದೂಗಳನ್ನು ಅವಮಾನಿಸಿದಾಗ ಕಾಂಗ್ರೆಸ್ ನಾಯಕರಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಅಶೋಕ್ ಕೆಂಡಾಮಂಡಲವಾದರು.
ಮಧ್ಯಾಹ್ನ ಊಟದ ವಿರಾಮದ ಬಳಿಕ ಸದನ ಪ್ರಾರಂಭವಾದಾಗಲೂ ಪ್ರತಿಭಟನೆ ಮುಂದುವರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, "ತಾವು ಯಾವುದೇ ಅಸಂವಿಧಾನಿಕ ಪದಗಳನ್ನು ಬಳಸಿಲ್ಲ. ಈ ವಿಷಯವು ಪ್ರಮುಖ ವಿಷಯವಾಗಿದ್ದರೆ, ಕಳೆದ ವಾರ ಅಧಿವೇಶನ ನಡೆದಾಗ ಬಿಜೆಪಿ ಶಾಸಕರು ಅದನ್ನು ಏಕೆ ಪ್ರಸ್ತಾಪಿಸಲಿಲ್ಲ?" ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ಶಾಸಕರು ಸದನದ ನೆಲದ ಮೇಲೆಯೇ ಇದ್ದರು, ಈ ಸಂದರ್ಭದಲ್ಲಿ ಐದು ಮಸೂದೆಗಳನ್ನು ವಿಧಾನಸಭೆ ಅಂಗೀಕರಿಸಿತು ಮತ್ತು ಇತರ ವಿಷಯಗಳ ಬಗ್ಗೆ ಶಾಸಕರು ಸಂಜೆ 7 ರವರೆಗೂ ಚರ್ಚಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications