Assembly elections 2023; ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸಿಯೇ ಸಿದ್ಧ: ಬಾಬುರಾವ್ ಚಿಂಚನಸೂರ್
ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಬಿಜೆಪಿಯಲ್ಲೇ ಸಾಯುತ್ತೇನೆ. ತಾಯಿ ಪಕ್ಷ ಬಿಜೆಪಿ. ತಾಯಿಗೆ ಎಂದೂ ಮಗ ದ್ರೋಹ ಮಾಡುವುದಿಲ್ಲ ಎಂದು ಬಾಬುರಾವ್ ಚಿಂಚನಸೂರ್ ಹೇಳಿದರು
ಬೆಂಗಳೂರು,ಫೆಬ್ರವರಿ14: ರಾಜ್ಯದ 2023ರ ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸಿಯೇ ಸಿದ್ಧ ಎಂದು ತೊಡೆ ತಟ್ಟಿ ಹೇಳುವುದಾಗಿ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ್ ಅವರು ಸವಾಲು ಹಾಕಿದರು.
ಈ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸುವುದಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತೊಡೆ ತಟ್ಟಿ ಹೇಳಿದ್ದೆ. ಅದನ್ನು ಈಡೇರಿಸಿದ್ದೇನೆ ಎಂದು ತಿಳಿಸಿದರು.
ಇನ್ನೂ ನಮ್ಮ ಶಕ್ತಿ, ಸಾಮರ್ಥ್ಯವನ್ನು ನೀವು ಅರ್ಥವೇ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಇಡೀ ಕಲ್ಯಾಣ ಕರ್ನಾಟಕವೇ ಬಿಜೆಪಿಮಯ ಆಗಲಿದೆ ಎಂದು ನುಡಿದರು. ನಾನು 5 ಸಲ ಗೆದ್ದಿದ್ದು, ನನ್ನದು ತೆರೆದ ಇತಿಹಾಸ. ಕಲ್ಯಾಣ ಕರ್ನಾಟಕದಲ್ಲಿ ನಾನು ಏನು ಎಂಬುದು ತೆರೆದ ಪುಸ್ತಕ. ಅದು ತೆರೆದ ಕನ್ನಡಿಯಂತಿದೆ. 2023ರಲ್ಲಿ ಕಲ್ಯಾಣ ಕರ್ನಾಟಕದಲ್ಲಿ ನಾನು ಮತ್ತು ರವಿಕುಮಾರ್ ಏನೆಂದು ತೋರಿಸುತ್ತೇವೆ. ಪ್ರಭಾವಿ ನಾಯಕರಾದ ನಳಿನ್ಕುಮಾರ್ ಕಟೀಲ್, ಬೊಮ್ಮಾಯಿ, ಮಹಾನ್ ನೇತಾರ ಯಡಿಯೂರಪ್ಪ ಅವರ ಸಹಕಾರದೊಂದಿಗೆ ನಾವು ಈ ಭಾಗದಲ್ಲಿ 41 ಸೀಟುಗಳಲ್ಲಿ ಪ್ರಚಂಡ ಬಹುಮತದೊಂದಿಗೆ ಜಯಶಾಲಿ ಆಗಲಿದ್ದೇವೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದರು.

ನಾನು ಕಾಂಗ್ರೆಸ್ ಸೇರುವುದಾಗಿ ಮಾಧ್ಯಮಗಳಲ್ಲಿ ಬಂದಿದೆ. ಅದು ಮಾಧ್ಯಮಗಳ ಸೃಷ್ಟಿ. ನಮ್ಮಲ್ಲಿ ಏನೂ ಭಿನ್ನಾಭಿಪ್ರಾಯ ಇಲ್ಲ. ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಬಿಜೆಪಿಯಲ್ಲೇ ಸಾಯುತ್ತೇನೆ. ತಾಯಿ ಪಕ್ಷ ಬಿಜೆಪಿ. ತಾಯಿಗೆ ಎಂದೂ ಮಗ ದ್ರೋಹ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೇ ಮುಂದುವರಿಯುತ್ತೇನೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ಮೋದಿಯವರ ನೇತೃತ್ವದಲ್ಲಿ 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅವರು ಹೇಳಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications