Get Updates
Get notified of breaking news, exclusive insights, and must-see stories!

Assembly elections 2023; ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸಿಯೇ ಸಿದ್ಧ: ಬಾಬುರಾವ್ ಚಿಂಚನಸೂರ್

ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಬಿಜೆಪಿಯಲ್ಲೇ ಸಾಯುತ್ತೇನೆ. ತಾಯಿ ಪಕ್ಷ ಬಿಜೆಪಿ. ತಾಯಿಗೆ ಎಂದೂ ಮಗ ದ್ರೋಹ ಮಾಡುವುದಿಲ್ಲ ಎಂದು ಬಾಬುರಾವ್ ಚಿಂಚನಸೂರ್ ಹೇಳಿದರು

ಬೆಂಗಳೂರು,ಫೆಬ್ರವರಿ14: ರಾಜ್ಯದ 2023ರ ಅಸೆಂಬ್ಲಿ ಚುನಾವಣೆಯಲ್ಲಿ ಪ್ರಿಯಾಂಕ್ ಖರ್ಗೆಯವರನ್ನು ಸೋಲಿಸಿಯೇ ಸಿದ್ಧ ಎಂದು ತೊಡೆ ತಟ್ಟಿ ಹೇಳುವುದಾಗಿ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಬಾಬುರಾವ್ ಚಿಂಚನಸೂರ್ ಅವರು ಸವಾಲು ಹಾಕಿದರು.

ಈ ಕುರಿತು ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸುವುದಾಗಿ ಕಳೆದ ಲೋಕಸಭಾ ಚುನಾವಣೆಯಲ್ಲಿ ತೊಡೆ ತಟ್ಟಿ ಹೇಳಿದ್ದೆ. ಅದನ್ನು ಈಡೇರಿಸಿದ್ದೇನೆ ಎಂದು ತಿಳಿಸಿದರು.

ಇನ್ನೂ ನಮ್ಮ ಶಕ್ತಿ, ಸಾಮರ್ಥ್ಯವನ್ನು ನೀವು ಅರ್ಥವೇ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಇಡೀ ಕಲ್ಯಾಣ ಕರ್ನಾಟಕವೇ ಬಿಜೆಪಿಮಯ ಆಗಲಿದೆ ಎಂದು ನುಡಿದರು. ನಾನು 5 ಸಲ ಗೆದ್ದಿದ್ದು, ನನ್ನದು ತೆರೆದ ಇತಿಹಾಸ. ಕಲ್ಯಾಣ ಕರ್ನಾಟಕದಲ್ಲಿ ನಾನು ಏನು ಎಂಬುದು ತೆರೆದ ಪುಸ್ತಕ. ಅದು ತೆರೆದ ಕನ್ನಡಿಯಂತಿದೆ. 2023ರಲ್ಲಿ ಕಲ್ಯಾಣ ಕರ್ನಾಟಕದಲ್ಲಿ ನಾನು ಮತ್ತು ರವಿಕುಮಾರ್ ಏನೆಂದು ತೋರಿಸುತ್ತೇವೆ. ಪ್ರಭಾವಿ ನಾಯಕರಾದ ನಳಿನ್‍ಕುಮಾರ್ ಕಟೀಲ್, ಬೊಮ್ಮಾಯಿ, ಮಹಾನ್ ನೇತಾರ ಯಡಿಯೂರಪ್ಪ ಅವರ ಸಹಕಾರದೊಂದಿಗೆ ನಾವು ಈ ಭಾಗದಲ್ಲಿ 41 ಸೀಟುಗಳಲ್ಲಿ ಪ್ರಚಂಡ ಬಹುಮತದೊಂದಿಗೆ ಜಯಶಾಲಿ ಆಗಲಿದ್ದೇವೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದರು.

BJP MLC Baburao Chinchansur Challenges To Defeat Priyank Kharge In Upcoming Election

ನಾನು ಕಾಂಗ್ರೆಸ್ ಸೇರುವುದಾಗಿ ಮಾಧ್ಯಮಗಳಲ್ಲಿ ಬಂದಿದೆ. ಅದು ಮಾಧ್ಯಮಗಳ ಸೃಷ್ಟಿ. ನಮ್ಮಲ್ಲಿ ಏನೂ ಭಿನ್ನಾಭಿಪ್ರಾಯ ಇಲ್ಲ. ನಾನು ಬಿಜೆಪಿಯಲ್ಲೇ ಇದ್ದೇನೆ. ನಾನು ಬಿಜೆಪಿಯಲ್ಲೇ ಸಾಯುತ್ತೇನೆ. ತಾಯಿ ಪಕ್ಷ ಬಿಜೆಪಿ. ತಾಯಿಗೆ ಎಂದೂ ಮಗ ದ್ರೋಹ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೇ ಮುಂದುವರಿಯುತ್ತೇನೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಮೋದಿಯವರ ನೇತೃತ್ವದಲ್ಲಿ 2023ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+