ಸಿದ್ದರಾಮಯ್ಯಗೆ ತಾಕತ್ತಿದ್ದರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ: ಚುನಾವಣೆ ಹೊತ್ತಲ್ಲಿ ಮತ್ತೆ ಎದ್ದು ಬಂದ ಅನಂತಕುಮಾರ್ ಹೆಗಡೆ
ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ.
ಉತ್ತರ ಕನ್ನಡ ಸಂಸದ ಅನಂತ್ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು 'ಹಿಂದೂ ರಾಷ್ಟ್ರ' ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಗ್ಡೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಸಿದ್ದರಾಮಯ್ಯನವರ ಸರ್ಕಾರ ಮೊಹಮ್ಮದ್ ಬಿನ್ ತುಘಲಕ್ ಸರ್ಕಾರ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಹುಚ್ಚಾಟದ ರಾಜಕಾರಣ
ಶಿರಸಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮತವಿಲ್ಲದೆ ಕಾಂಗ್ರೆಸ್ ಉಳಿಯುವುದಿಲ್ಲ. ಕಾಂಗ್ರೆಸ್ ಎಂದಿಗೂ ಬಹುಮತದ ರಾಜಕಾರಣಕ್ಕೆ ಒಲವು ತೋರಿಲ್ಲ. ಅದು ಸದಾ ಹುಚ್ಚಾಟದ ರಾಜಕಾರಣ ಮಾಡುತ್ತಿದೆ ಎಂದರು.
ಟಿಪ್ಪು ಸುಲ್ತಾನ್ ಈ ರಾಜ್ಯವನ್ನು ಸಾಂಸ್ಕೃತಿಕವಾಗಿ ಮತ್ತು ಸಾಮಾಜಿಕವಾಗಿ ಹಾಳು ಮಾಡಿದ್ದು, ಜನ ಆತನನ್ನು ತಿರಸ್ಕರಿಸಿದ್ದಾರೆ. ಟಿಪ್ಪು ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಮಾಡಿದರೆ, ಮುಂದೆ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾಂಗ್ರೆಸ್ ನಾಯಕರು ಯೋಚಿಸಬೇಕು ಎಂದು ಹೇಳಿದರು.
ಯಾರು ಬೇಕಾದರೂ ಯಾವ ಡ್ರೆಸ್ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯನವರ ಹೇಳಿಕೆ ಭವಿಷ್ಯದಲ್ಲಿ ಅಪಾಯಕಾರಿ ಬೆಳವಣಿಗೆಗಳಿಗೆ ಕಾರಣವಾಗಲಿದೆ. ಅವರಿಗೆ ಹಿಜಾಬ್ ಧರಿಸಲು ಅವಕಾಶ ನೀಡಿದರೆ, ನಮ್ಮ ಜನರು ಕೇಸರಿ ಶಾಲುಗಳನ್ನು ಧರಿಸುತ್ತಾರೆ. ಸರ್ಕಾರವು ಒಂದು ನಿರ್ದಿಷ್ಟ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು, ಆದರೆ ಸಿಎಂ ಅದನ್ನು ಮೀರುತ್ತಿದ್ದಾರೆ, ಸಿದ್ದರಾಮಯ್ಯನವರಿಗೆ ಛಲವಿದ್ದರೆ ಈ ದೇಶ ಹಿಂದೂ ರಾಷ್ಟ್ರವಾಗುವುದನ್ನು ತಡೆಯಲು ಪ್ರಯತ್ನಿಸಲಿ ಎಂದು ಹೇಳಿದರು.
ಸರ್ಕಾರ ಹೆಚ್ಚು ದಿನ ಇರಲ್ಲ
ಸಿದ್ದರಾಮಯ್ಯನವರ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ. ಕರ್ನಾಟಕದಲ್ಲಿ ಹಿಂದೂ ವಿರೋಧಿ ಸರ್ಕಾರ ಇರಲು ಸಾಧ್ಯವಿಲ್ಲ. ಮುಸಲ್ಮಾನರ ಹಿತಾಸಕ್ತಿ ಮುಂದಿಟ್ಟುಕೊಂಡು ಕಾಂಗ್ರೆಸ್ ಉಳಿಯಬೇಕು ಮತ್ತು ಮತ ಪಡೆಯಬೇಕು ಎಂದಾದರೆ ಇಂತಹ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ, ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಖಂಡಿಸಿದ ಅವರು, ಆರ್ಥಿಕ ಭದ್ರತೆಯ ಕಲ್ಪನೆ ಇಲ್ಲದ ಕೆಲವರು ಇಂತಹ ಸಮಸ್ಯೆಗಳನ್ನು ಸೃಷ್ಟಿಸಿದ್ದಾರೆ. ಜನರಿಗೆ ಇವು ಬೇಕಾಗಿಲ್ಲ, ಅಭಿವೃದ್ಧಿ ಮಾಡಲು ಈಗ ಹಣ ಇಲ್ಲ, ಇದು ತುಘಲಕ್ ಸರ್ಕಾರ ಎಂದು ಹೇಳಿದರು.
ರಾಮಮಂದಿರ ಉದ್ಘಾಟನೆ ಹಿಂದೂ ಸಮಾಜಕ್ಕೆ ಸಂದ ಜಯ. ಇದು ಹಿಂದೂ ಸಮಾಜದ ಏಕತೆಯ ಮೊದಲ ಹೆಜ್ಜೆಯಾಗಿದೆ ಎಂದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications