ಐಫೋನ್ ಉಡುಗೊರೆ ವಿವಾದ: ಬಿಜೆಪಿಗರಿಂದ ಸರ್ಕಾರಕ್ಕೆ ನೀತಿಪಾಠ
ಬೆಂಗಳೂರು, ಜುಲೈ 18: ಸಚಿವ ಡಿ.ಕೆ.ಶಿವಕುಮಾರ್ ಅವರು ಉಡುಗೊರೆಯಾಗಿ ನೀಡಿದ್ದ ಐಫೋನ್ಗಳನ್ನು ಸ್ವೀಕರಿಸಲು ಬಿಜೆಪಿ ಸಂಸದರು ನಿರಾಕರಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಎಲ್ಲಾ ಸಂಸದರಿಗೆ ಬೆಲೆ ಬಾಳುವ ಆಪಲ್ ಐಫೋನ್ ಮತ್ತು ಮೋಚಿ ಬ್ಯಾಂಡ್ನ ಲೆದರ್ ಬ್ಯಾಗನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅದನ್ನು ಬಿಜೆಪಿ ಸಂಸದರು ಹಿಂದಿರುಗಿಸುತ್ತಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯ ಸಂಸದರು ಉಡುಗೊರೆಯನ್ನು ಸ್ವೀಕರಿಸುವುದಿಲ್ಲ. ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಸಬೇಕು. ಇದರಿಂದ ಕಳೆದ ಸರ್ಕಾರದ ಆಡಳಿತ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತ ದಾಖಲೆಗಳ ಜೊತೆ ಗಿಫ್ಟ್
ಸಂಸತ್ ಅಧಿವೇಶನದ ನಡೆಯುತ್ತಿರುವ ಕಾವೇರಿ ವಿವಾದ ಕುರಿತು ರಾಜ್ಯ ಸಂಸದರ ಜೊತೆ ಮುಖ್ಯಮಂತ್ರಿ ಸಭೆ ಆಯೋಜಿಸಿದ್ದರು. ಹಾಗಾಗಿ ಕಾವೇರಿ ವಿವಾದ ಕುರಿತ ದಾಖಲೆಗಳ ಜೊತೆ ಐಫೋನ್ ಮತ್ತು ಮೋಚಿ ಬ್ಯಾಂಡ್ನ ಲೆದರ್ ಬ್ಯಾಗನ್ನು ರಾಜ್ಯದ ಎಲ್ಲ ಸಂಸದರಿಗೆ ಕಳುಹಿಸಲಾಗಿತ್ತು.
|
ರಾಜೀವ್ ಚಂದ್ರಶೇಖರ್ ಮೊದಲು
ದುಬಾರಿ ಗಿಫ್ಟ್ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್. ಅವರು ನಿನ್ನೆಯೇ ಟ್ವಿಟ್ಟರ್ ಮೂಲಕ ಈ ವಿಷಯವನ್ನು ಹೊರಗೆಡವಿದ್ದರು. ತಮಗೆ ನೀಡಿರುವ ಐಫೋನ್ ಅನ್ನು ವಾಪಾಸ್ ನೀಡಿದ್ದಾಗಿ ಹೇಳಿದ್ದರು. ಅಲ್ಲದೆ ಸರ್ಕಾರಿ ಹಣವನ್ನು ಪೌರ ಕಾರ್ಮಿಕರಿಗೆ ಸಂಬಳ ನೀಡಲು ಬಳಸುವಂತೆ ಸಲಹೆ ನೀಡಿದ್ದರು.
|
'ಸರ್ಕಾರದ ಹಣ ಉಡುಗೊರೆಗೆ ಬಳಸುವುದು ಪಾಪ'
ಕೇಂದ್ರ ಸಚಿವ ಅನಂತ್ಕುಮಾರ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮ್ಮ ಕಚೇರಿಗೆ ಕಾವೇರಿ ವಿವಾದದ ದಾಖಲೆಗಳ ಜೊತೆ ಕಳುಹಿಸಲಾಗಿದ್ದ ಐಫೋನ್ ಮತ್ತು ಬ್ಯಾಗನ್ನು ಸೋಮವಾರವೇ ವಾಪಸ್ ಕಳುಹಿಸದ್ದಾಗಿ ಹೇಳಿದ್ದಾರೆ. ಸರ್ಕಾರ ತನ್ನ ಹಣವನ್ನು ಉಡುಗೊರೆಗಳ ಬದಲಿಗೆ, ರೈತರಿಗೆ , ಪೌರ ಕಾರ್ಮಿಕರ ಸಂಬಳಕ್ಕೆ ಬಳಸಲಿ ಎಂದಿದ್ದಾರೆ.

ಕುಮಾರಸ್ವಾಮಿಗೆ ವಿಷಯ ತಿಳಿದಿಲ್ಲ
ದುಬಾರಿ ಉಡುಗೊರೆ ಬಗ್ಗೆ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿದಾಗ ಈ ಬಗ್ಗೆ ತಮಗೆ ಮಾಹಿತಿ ಇಲ್ಲವೆಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಎಲ್ಲ ಸಂಸದರ ಕಚೇರಿಗಳಿಗೆ ಮುಖ್ಯಮಂತ್ರಿಗಳ ಕಚೇರಿಯಿಂದಲೇ ಉಡುಗೊರೆಗಳು ಹೋಗಿದ್ದವು.

ಉಡುಗೊರೆ ಕಳುಹಿಸಿದ್ದು ಡಿಕೆಶಿ
ಉಡುಗೊರೆಗಳನ್ನು ಕಳುಹಿಸಿದ್ದ ತಾವೇ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಅಲ್ಲದೆ ತಮ್ಮ ಈ ಕಾರ್ಯವನ್ನು ಅವರು ಸಮರ್ಥಿಸಿಕೊಂಡು, 'ಉಡುಗೊರೆ ಕಳಿಸಿದ್ದು ನಾನೆ, ಅದಕ್ಕೇನು ನನ್ನನ್ನು ಗಲ್ಲಿಗೆ ಏರಿಸಿತ್ತೀರಾ' ಎಂದು ಮಾಧ್ಯಮಗಳಿಗೆ ಕೋಪದಿಂದ ಪ್ರಶ್ನೆ ಮಾಡಿದರು.
-
ಅಧಿಕಾರ ಬದಲಾವಣೆ; ನನ್ನ-ಸಿಎಂ ಬಿಟ್ಟು ಬೇರೆಯವರ ಮಾತು ಮುಖ್ಯವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ -
ಉಪಚುನಾವಣಾ ಅಖಾಡ ಸಜ್ಜು: ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಮತದಾನ; ಇಂದು ಮನೆ ಮನೆ ಮತಯಾಚನೆ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications