ಐಫೋನ್ ಉಡುಗೊರೆ ವಿವಾದ: ಬಿಜೆಪಿಗರಿಂದ ಸರ್ಕಾರಕ್ಕೆ ನೀತಿಪಾಠ
ಬೆಂಗಳೂರು, ಜುಲೈ 18: ಸಚಿವ ಡಿ.ಕೆ.ಶಿವಕುಮಾರ್ ಅವರು ಉಡುಗೊರೆಯಾಗಿ ನೀಡಿದ್ದ ಐಫೋನ್ಗಳನ್ನು ಸ್ವೀಕರಿಸಲು ಬಿಜೆಪಿ ಸಂಸದರು ನಿರಾಕರಿಸಿದ್ದಾರೆ.
ಸಚಿವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಎಲ್ಲಾ ಸಂಸದರಿಗೆ ಬೆಲೆ ಬಾಳುವ ಆಪಲ್ ಐಫೋನ್ ಮತ್ತು ಮೋಚಿ ಬ್ಯಾಂಡ್ನ ಲೆದರ್ ಬ್ಯಾಗನ್ನು ಉಡುಗೊರೆಯಾಗಿ ನೀಡಿದ್ದರು. ಆದರೆ ಅದನ್ನು ಬಿಜೆಪಿ ಸಂಸದರು ಹಿಂದಿರುಗಿಸುತ್ತಿದ್ದಾರೆ.
ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ ಅವರು, ಬಿಜೆಪಿಯ ಸಂಸದರು ಉಡುಗೊರೆಯನ್ನು ಸ್ವೀಕರಿಸುವುದಿಲ್ಲ. ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಿ. ಜನರಿಗೆ ರಾಜ್ಯದ ವಾಸ್ತವ ಸ್ಥಿತಿ ತಿಳಿಸಬೇಕು. ಇದರಿಂದ ಕಳೆದ ಸರ್ಕಾರದ ಆಡಳಿತ ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಕಾವೇರಿ ವಿವಾದ ಕುರಿತ ದಾಖಲೆಗಳ ಜೊತೆ ಗಿಫ್ಟ್
ಸಂಸತ್ ಅಧಿವೇಶನದ ನಡೆಯುತ್ತಿರುವ ಕಾವೇರಿ ವಿವಾದ ಕುರಿತು ರಾಜ್ಯ ಸಂಸದರ ಜೊತೆ ಮುಖ್ಯಮಂತ್ರಿ ಸಭೆ ಆಯೋಜಿಸಿದ್ದರು. ಹಾಗಾಗಿ ಕಾವೇರಿ ವಿವಾದ ಕುರಿತ ದಾಖಲೆಗಳ ಜೊತೆ ಐಫೋನ್ ಮತ್ತು ಮೋಚಿ ಬ್ಯಾಂಡ್ನ ಲೆದರ್ ಬ್ಯಾಗನ್ನು ರಾಜ್ಯದ ಎಲ್ಲ ಸಂಸದರಿಗೆ ಕಳುಹಿಸಲಾಗಿತ್ತು.
|
ರಾಜೀವ್ ಚಂದ್ರಶೇಖರ್ ಮೊದಲು
ದುಬಾರಿ ಗಿಫ್ಟ್ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿದ್ದು, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್. ಅವರು ನಿನ್ನೆಯೇ ಟ್ವಿಟ್ಟರ್ ಮೂಲಕ ಈ ವಿಷಯವನ್ನು ಹೊರಗೆಡವಿದ್ದರು. ತಮಗೆ ನೀಡಿರುವ ಐಫೋನ್ ಅನ್ನು ವಾಪಾಸ್ ನೀಡಿದ್ದಾಗಿ ಹೇಳಿದ್ದರು. ಅಲ್ಲದೆ ಸರ್ಕಾರಿ ಹಣವನ್ನು ಪೌರ ಕಾರ್ಮಿಕರಿಗೆ ಸಂಬಳ ನೀಡಲು ಬಳಸುವಂತೆ ಸಲಹೆ ನೀಡಿದ್ದರು.
|
'ಸರ್ಕಾರದ ಹಣ ಉಡುಗೊರೆಗೆ ಬಳಸುವುದು ಪಾಪ'
ಕೇಂದ್ರ ಸಚಿವ ಅನಂತ್ಕುಮಾರ್ ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮ್ಮ ಕಚೇರಿಗೆ ಕಾವೇರಿ ವಿವಾದದ ದಾಖಲೆಗಳ ಜೊತೆ ಕಳುಹಿಸಲಾಗಿದ್ದ ಐಫೋನ್ ಮತ್ತು ಬ್ಯಾಗನ್ನು ಸೋಮವಾರವೇ ವಾಪಸ್ ಕಳುಹಿಸದ್ದಾಗಿ ಹೇಳಿದ್ದಾರೆ. ಸರ್ಕಾರ ತನ್ನ ಹಣವನ್ನು ಉಡುಗೊರೆಗಳ ಬದಲಿಗೆ, ರೈತರಿಗೆ , ಪೌರ ಕಾರ್ಮಿಕರ ಸಂಬಳಕ್ಕೆ ಬಳಸಲಿ ಎಂದಿದ್ದಾರೆ.

ಕುಮಾರಸ್ವಾಮಿಗೆ ವಿಷಯ ತಿಳಿದಿಲ್ಲ
ದುಬಾರಿ ಉಡುಗೊರೆ ಬಗ್ಗೆ ಕುಮಾರಸ್ವಾಮಿ ಅವರನ್ನು ಪ್ರಶ್ನೆ ಮಾಡಿದಾಗ ಈ ಬಗ್ಗೆ ತಮಗೆ ಮಾಹಿತಿ ಇಲ್ಲವೆಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ ಎಲ್ಲ ಸಂಸದರ ಕಚೇರಿಗಳಿಗೆ ಮುಖ್ಯಮಂತ್ರಿಗಳ ಕಚೇರಿಯಿಂದಲೇ ಉಡುಗೊರೆಗಳು ಹೋಗಿದ್ದವು.

ಉಡುಗೊರೆ ಕಳುಹಿಸಿದ್ದು ಡಿಕೆಶಿ
ಉಡುಗೊರೆಗಳನ್ನು ಕಳುಹಿಸಿದ್ದ ತಾವೇ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಅಲ್ಲದೆ ತಮ್ಮ ಈ ಕಾರ್ಯವನ್ನು ಅವರು ಸಮರ್ಥಿಸಿಕೊಂಡು, 'ಉಡುಗೊರೆ ಕಳಿಸಿದ್ದು ನಾನೆ, ಅದಕ್ಕೇನು ನನ್ನನ್ನು ಗಲ್ಲಿಗೆ ಏರಿಸಿತ್ತೀರಾ' ಎಂದು ಮಾಧ್ಯಮಗಳಿಗೆ ಕೋಪದಿಂದ ಪ್ರಶ್ನೆ ಮಾಡಿದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications