'ಸಂಸತ್ತಿನಲ್ಲಿ ಕರ್ನಾಟಕ ನೀರಾವರಿ, ನದಿಗಳ ಜೋಡಣೆ ಯೋಜನೆಗಳ ಅನುಮತಿ ನೀಡಿ'
ದೆಹಲಿ, ಮಾರ್ಚ್ 20: ಕರ್ನಾಟಕದ ರಾಜ್ಯದಲ್ಲಿ ಕೆಲವು ನದಿಗಳ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಲಕ್ಷಾಂತರ ಜನರಿಗೆ ನೀರೊದಗಿಸುವ ಯೋಜನೆಗಳು, ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದು ರಾಜ್ಯ ಬಿಜೆಪಿ ಸಂಸದರು ಪ್ರಸ್ತಾಪಿಸಿದ್ದಾರೆ. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು, ಕರ್ನಾಟಕಕ್ಕೆ ಅವಕಾಶ ಮಾಡಿಕೊಡಲು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಸಂಸತ್ತಿನಲ್ಲಿ ಜಲಶಕ್ತಿ ಇಲಾಖೆಯ ಬೇಡಿಕೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸುಪ್ರೀಂ ಕೋರ್ಟ್ ಗೆ ಅಂತರಾಜ್ಯ ಜಲ ವಿವಾದದ ಕಾನೂನಿನ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ಕರ್ನಾಟಕದ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ನ್ಯಾಯ ಮಂಡಳಿ ಆದೇಶವಾಗಿ 15 ವರ್ಷ ಕಳೆದಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣಾ ರಾಜ್ಯಗಳ ನಡುವಿನ ನೀರಿನ ಹಂಚಿಕೆ ಗೊಂದಲದಿಂದ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಸುಪ್ರೀಂ ಕೋರ್ಟ್ ಗೆ ಅಂತಾರಾಜ್ಯ ಜಲ ವಿವಾದದ ಕಾನೂನಿನ ಬಗ್ಗೆ ಸ್ಪಷ್ಟವಾಗಿ ತಿಳಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಜಾರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿದರು.
ಈ ಯೋಜನೆಯಲ್ಲಿ ಕರ್ನಾಟಕ ಮಧ್ಯಂತರ ರಾಜ್ಯವಾಗಿದೆ. ಮಹಾರಾಷ್ಟ್ರದವರು ನೀರು ಕೊಡುವುದಿಲ್ಲ. ಆಂಧ್ರ ಪ್ರದೇಶ ಹಾಗೂ ತೆಲಂಗಾಣಾದವರು ನೀರು ಬೇಕೆನ್ನುತ್ತಾರೆ. ನಮ್ಮ ಪರಿಸ್ಥಿತಿ ಹೇಳತೀರದು. 2010 ರಲ್ಲಿ ಕೃಷ್ಣಾ ನ್ಯಾಯಮಂಡಳಿ ಆದೇಶ ನೀಡಲಾಗಿದೆ. ಈಗ 2025 ಕ್ಕೆ ಬಂದಿದ್ದೇವೆ. ಈಗಲ್ಲೂ ನೋಟಿಫಿಕೇಶನ್ ಆಗಿಲ್ಲ.

ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಹೆಚ್ಚಳ ಮಾಡುವುದು ನಮ್ಮ ಪ್ರಸ್ತಾವನೆ ಅಲ್ಲ, ಅದು ನಮ್ಮ ಹಕ್ಕು. ಅದು ನ್ಯಾಯಮಂಡಳಿ ತೀರ್ಮಾನವಾಗಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾಗುವುದಿಲ್ಲ. ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳದಿಂದ ತೆಲಂಗಾಣಾ, ಆಂಧ್ರ ಪ್ರದೇಶಕ್ಕೂ ಅನುಕೂಲವಾಗಲಿದೆ. ಆಂಧ್ರ ಹಾಗೂ ತೆಲಂಗಾಣ ನಡುವೆ ನೀರು ಹಂಚಿಕೆಯ ಸಮಸ್ಯೆ ಉದ್ಭವವಾಗಿದೆ. ಅದನ್ನು ಅವರು ಬಗೆ ಹರಿಸಿಕೊಳ್ಳಬೇಕು ಎಂದು ಅವರು ವಿವರಿಸಿದರು.
ಉ.ಕ ಜೀವನಾಡಿ ಮಹದಾಯಿ ಅನುಮತಿ ಬೇಕು
ಮೇಕೆದಾಟು ನಮ್ಮ ಹಕ್ಕು. ಸುಮಾರು ಆರು ವರ್ಷದಿಂದ ಯಾವುದೇ ತೀರ್ಮಾನ ಆಗಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಮುಂದಾಳತ್ವ ತೆಗೆದುಕೊಂಡು ಸಮಸ್ಯೆ ಬಗೆ ಹರಿಸಲು ಸಿಡಬ್ಲ್ಯುಸಿಗೆ ಮತ್ತು ಸಿಡಬ್ಲ್ಯು ಎಂಎ ಗೆ ನಿರ್ದೇಶನ ನೀಡಬೇಕು. ಅದೇ ರೀತಿ ಮಹಾದಾಯಿ ನ್ಯಾಯಂಮಡಳಿ ಆದೇಶ ಆಗಿದೆ. ಆದರೆ, ಪರಿಸರ ಇಲಾಖೆಯ ಅನುಮತಿ ನೀಡುತ್ತಿಲ್ಲ. ಇದರಿಂದ ಕರ್ನಾಟಕ ರಾಜ್ಯ ಸಮಸ್ಯೆ ಎದುರಿಸುವಂತಾಗಿದೆ.
ಗೋದಾವರಿ, ಮಹಾನದಿ ಕೃಷ್ಣಾ ಕಾವೇರಿ ಜೋಡಣೆಯ ಯೋಜನೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಈ ವಿಚಾರದಲ್ಲಿ ಎನ್ ಡಬ್ಲುಡಿಎಗೆ ಸೂಕ್ತ ನಿರ್ದೇಶನ ನೀಡಿ ಕರ್ನಾಟಕದ ನೀರಿನ ಹಕ್ಕನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications