Get Updates
Get notified of breaking news, exclusive insights, and must-see stories!

ಸಚಿವ ಸ್ಥಾನಕ್ಕೆ ರಾಜೀನಾಮೆ; ಸಿ. ಟಿ. ರವಿ ಹೇಳಿದ್ದೇನು?

ಬೆಂಗಳೂರು, ಸೆಪ್ಟೆಂಬರ್ 27: ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸಿ. ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದರು. "ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚನೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ" ಎಂದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ" ಎಂದು ಹೇಳಿದರು.

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ. ಟಿ. ರವಿ (53) ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು. ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದೆ.

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ

"ಎಂದಿಗೂ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಸಚಿವನಾಗುವ ನಿರೀಕ್ಷೆಯನ್ನು ಇಟ್ಟುಕೊಂಡಿರಲಿಲ್ಲ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವಂತೆಯೂ ಕೇಳಿರಲಿಲ್ಲ. ವರಿಷ್ಠರು ನನ್ನ ಮೇಲೆ ನಂಬಿಕೆ ಇರಿಸಿ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವುದು ನನ್ನ ಮುಂದಿನ ಗುರಿಯಾಗಿದೆ" ಎಂದು ಸಿ. ಟಿ. ರವಿ ಹೇಳಿದರು.

ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ

ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ

"ಚುನಾವಣೆಗೆ ಸ್ಪರ್ಧಿಸಬೇಕು ಎಂದು ವರಿಷ್ಠರು ಸೂಚಿಸಿದಾಗ ಮರು ಮಾತನಾಡದೇ ಸ್ಪರ್ಧಿಸಿ, ಗೆದ್ದು ಬಂದಿದ್ದೇನೆ. ಸಚಿವ ಸ್ಥಾನ ಎಂದಿಗೂ ಶಾಶ್ವತವಲ್ಲ. ವರಿಷ್ಠರು ಸೂಚಿಸಿದ ಕೆಲಸವನ್ನು ನಿಷ್ಠೆಯಿಂದ ಮಾಡುತ್ತೇನೆ" ಎಂದು ಸಿ. ಟಿ. ರವಿ ಹೇಳಿದರು.

ಕರ್ನಾಟಕವೇ ನನ್ನ ಕರ್ಮಭೂಮಿ

ಕರ್ನಾಟಕವೇ ನನ್ನ ಕರ್ಮಭೂಮಿ

"ರಾಷ್ಟ್ರ ರಾಜಕಾರಣಕ್ಕೆ ಹೋದರೂ ಕರ್ನಾಟಕವೇ ನನ್ನ ರಾಜಕೀಯ ಕರ್ಮಭೂಮಿ. ದೆಹಲಿಯಲ್ಲಿ ರಾಜಕಾರಣ ಮಾಡದೇ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸುತ್ತೇನೆ" ಎಂದು ಸಚಿವ ಸಿ. ಟಿ. ರವಿ ಹೇಳಿದರು.

Recommended Video

    ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada
    ಯಡಿಯೂರಪ್ಪರಿಂದ ಅಭಿನಂದನೆ

    ಯಡಿಯೂರಪ್ಪರಿಂದ ಅಭಿನಂದನೆ

    ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ. ಟಿ. ರವಿ ಅವರನ್ನು ಅಭಿನಂದಿಸಿ, ಸನ್ಮಾನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    More From
    Prev
    Next
    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+