ಕರ್ನಾಟಕ, ಗುಜರಾತ್ ಚುನಾವಣೆ: ಅಮಿತ್ ಶಾಗೆ ಜ್ಯೋತಿಷಿಗಳು ನುಡಿದ ಭವಿಷ್ಯ
ಬಿಡುವಿಲ್ಲದ ಪ್ರವಾಸದ ನಡುವೆಯೂ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಮಿಳುನಾಡಿನ ತಂಜಾವೂರಿನಿಂದ ಬಂದ ಇಬ್ಬರು ಜ್ಯೋತಿಷಿಗಳ ಜೊತೆ ನಗರದ ಹೊರವಲಯದಲ್ಲಿರುವ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಮಾತುಕತೆ ನಡೆಸಿದ್ದಾರೆಂದು
ಮೂರು ದಿನಗಳ ಕರ್ನಾಟಕ ಪ್ರವಾಸದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಜ್ಯೋತಿಷಿಗಳನ್ನು ಭೇಟಿಯಾಗಿ ಕರ್ನಾಟಕ ಮತ್ತು ಗುಜರಾತ್ ಚುನಾವಣೆಯ ಬಗ್ಗೆ ಭವಿಷ್ಯ ಕೇಳಿದ್ದಾರೆಂದು ಟಿವಿ9 ವಾಹಿನಿ ವರದಿ ಮಾಡಿದೆ.
ತಮ್ಮ ಬಿಡುವಿಲ್ಲದ ಪ್ರವಾಸದ ನಡುವೆಯೂ, ಅಮಿತ್ ಶಾ ತಮಿಳುನಾಡಿನ ತಂಜಾವೂರಿನಿಂದ ಬಂದ ಇಬ್ಬರು ಜ್ಯೋತಿಷಿಗಳ ಜೊತೆ ನಗರದ ಹೊರವಲಯದಲ್ಲಿರುವ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಭಾನುವಾರ (ಆ 13) ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದ ಶ್ರೀಗಳನ್ನು ಭೇಟಿಯಾದ ನಂತರ ಅಮಿತ್ ಶಾ, ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ನಲ್ಲಿ ರವಿಶಂಕರ್ ಗುರೂಜಿಗಳನ್ನು ಭೇಟಿಯಾಗಿದ್ದರು.
ಬಿಜೆಪಿ ಪಾಲಿಗೆ ಅತ್ಯಂತ ಪ್ರಮುಖವಾಗಿರುವ ಗುಜರಾತ್ ಮತ್ತು ಕರ್ನಾಟಕದ ಚುನಾವಣೆಯಲ್ಲಿ ಬಿಜೆಪಿಯ ಪರಿಸ್ಥಿತಿ ಏನಾಗಬಹುದು ಎಂದು ತಿಳಿದುಕೊಳ್ಳಲು ಅಮಿತ್ ಶಾ ಬಯಸಿದ್ದರಿಂದ, ಜ್ಯೋತಿಷಿಗಳನ್ನು ರವಿಶಂಕರ್ ಅವರ ಆಶ್ರಮಕ್ಕೆ ಕರೆಸಿಕೊಳ್ಳಲಾಗಿತ್ತು.
ಗುಜರಾತ್ ಚುನಾವಣೆ ವರ್ಷಾಂತ್ಯದಲ್ಲಿ ಮತ್ತು ಕರ್ನಾಟಕದ ಚುನಾವಣೆ ಬರುವ ವರ್ಷ ಮೇ ತಿಂಗಳಲ್ಲಿ ಅಥವಾ ಅದಕ್ಕಿಂತ ಮುಂಚೆ ನಡೆಯುವ ಸಾಧ್ಯತೆಯಿದೆ. ಈ ಎರಡು ರಾಜ್ಯಗಳ ಚುನಾವಣೆಯ ಬಗ್ಗೆ ಜ್ಯೋತಿಷಿಗಳು ನುಡಿದ ಭವಿಷ್ಯವೇನು, ಮುಂದೆ ಓದಿ..

ತಮಿಳುನಾಡಿನ ತಂಜಾವೂರಿನಿಂದ ಬಂದಿದ್ದ ಜ್ಯೋತಿಷಿಗಳು
ತಮಿಳುನಾಡಿನ ತಂಜಾವೂರಿನಿಂದ ಇಬ್ಬರು ಜ್ಯೋತಿಷಿಗಳನ್ನು ರವಿಶಂಕರ್ ಗುರೂಜಿ ಆಶ್ರಮಕ್ಕೆ ಕರೆಸಿಕೊಳ್ಳಲಾಗಿತ್ತು. ಅತ್ಯಂತ ಗೌಪ್ಯವಾಗಿ ನಡೆದ ಮಾತುಕತೆಯ ವೇಳೆ, ಅಮಿತ್ ಶಾ ಅವರ ಭದ್ರತಾ ಅಧಿಕಾರಿಗಳು, ಬಿಜೆಪಿ ಮುಖಂಡರು, ರವಿಶಂಕರ್ ಅವರ ಅನುಯಾಯಿಗಳಿಗಾಗಲಿ ಯಾರಿಗೂ ಪ್ರವೇಶ ನೀಡಿರಲಿಲ್ಲ ಎಂದು ಟಿವಿ9 ವರದಿ ಮಾಡಿದೆ.

ಅಮಿತ್ ಶಾ ಮತ್ತು ರವಿಶಂಕರ್ ಗುರೂಜಿಗಳು ಮಾತ್ರ ಕೊಠಡಿಯಲ್ಲಿ
ಇಬ್ಬರು ಜ್ಯೋತಿಷಿಗಳು, ಅಮಿತ್ ಶಾ ಮತ್ತು ರವಿಶಂಕರ್ ಗುರೂಜಿಗಳು ಮಾತ್ರ ಕೊಠಡಿಯಲ್ಲಿ ಮಾತುಕತೆ ನಡೆಸಿದ್ದರು. ಎರಡು ರಾಜ್ಯಗಳಲ್ಲಿ ಪ್ರಮುಖವಾಗಿ ಕರ್ನಾಟಕದಲ್ಲಿ ರಾಜ್ಯ ಬಿಜೆಪಿ ಮುಖಂಡರನ್ನು ನಂಬಿಕೊಂಡು ಚುನಾವಣೆ ಎದುರಿಸುವುದು ಬೇಡ ಎನ್ನುವ ಸಲಹೆಯನ್ನು ಜ್ಯೋತಿಷಿಗಳು ನೀಡಿದ್ದಾರೆಂದು, ವಾಹಿನಿ ತಿಳಿಸಿದೆ.

ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ
ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕಾದರೆ ತೀವ್ರ ಶ್ರಮ ವಹಿಸಬೇಕಾಗುತ್ತದೆ, ಹಾಗಾಗಿ ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ. ಶಿಸ್ತುಬದ್ದವಾಗಿ ಯೋಜನೆ ರೂಪಿಸಿದರೆ, ಸ್ವಂತ ಬಲದಿಂದಲೇ ಅಧಿಕಾರಕ್ಕೆ ಬರಬಹುದು ಎಂದು ಜ್ಯೋತಿಷಿಗಳು, ಅಮಿತ್ ಶಾಗೆ ಹೇಳಿದ್ದಾರೆ.

ಕರ್ನಾಟಕದಲ್ಲಿ ಸುಲಭವಾಗಿ ಜಯ ಸಿಗುವುದಿಲ್ಲ
ಕರ್ನಾಟಕದಲ್ಲಿ ಸುಲಭವಾಗಿ ಜಯ ಸಿಗುವುದಿಲ್ಲ, ರಾಜ್ಯ ಮುಖಂಡರಿಗಿಂತ ಚುನಾವಣೆ ಮುಗಿಯುವ ತನಕ ನೀವೇ ನೇರ ಜವಾಬ್ದಾರಿ ತೆಗೆದುಕೊಳ್ಳಿ. ಉಸ್ತುವಾರಿ ನೀವೇ ವಹಿಸಿ ಕೊಂಡರೆ ಶಕ್ತಿ ಜಾಸ್ತಿ. ಈಗ ಗೆದ್ದ ಶಾಸಕರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿ ಎಂದು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆಂದು ವಾಹಿನಿ ತನ್ನ ಸೋಮವಾರ (ಆ 14) ರಾತ್ರಿಯ ಕಾರ್ಯಕ್ರಮದಲ್ಲಿ ವರದಿ ಮಾಡಿದೆ.

ಜ್ಯೋತಿಷಿಗಳ ಜೊತೆ ಕ್ಲೋಸ್ ಡೋರ್ ಮಾತುಕತೆ
ರವಿಶಂಕರ್ ಗುರೂಜಿ, ಅಮಿತ್ ಶಾ ಸುಮಾರು ಒಂದು ಗಂಟೆಗಳ ಕಾಲ ಜ್ಯೋತಿಷಿಗಳ ಜೊತೆ ಕ್ಲೋಸ್ ಡೋರ್ ಮಾತುಕತೆಯ ವೇಳೆ, ಗುಜರಾತಿನಲ್ಲೂ ಜಯ ಸುಲಭವಿಲ್ಲ. ಕಾರ್ಯಕರ್ತರು ಶ್ರಮವಹಿಸಬೇಕು, ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು ಮತ್ತು ಅಧಿಕಾರ ಉಳಿಸಿಕೊಳ್ಳಲು ಸಿಕ್ಕಾಪಟ್ಟೆ ಶ್ರಮ ಪಡಬೇಕಾಗುತ್ತದೆ ಎಂದು ಜ್ಯೋತಿಷಿಗಳು ಭವಿಷ್ಯ ಮತ್ತು ರಾಜಕೀಯ ತಂತ್ರಗಾರಿಕೆಯನ್ನು ಅಮಿತ್ ಶಾಗೆ ಹೇಳಿದ್ದಾರೆಂದು ವಾಹಿನಿ ವರದಿ ಮಾಡಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications