karnataka Assembly Elections 2023:ಇಂದು, ನಾಳೆ ರಾಜ್ಯದ ಮೂರು ಜಿಲ್ಲೆಯಲ್ಲಿ ಜೆ ಪಿ ನಡ್ಡಾ ಸಮಾವೇಶ
ರಾಜ್ಯದಲ್ಲಿ ಎರಡ ದಿನಗಳ ಕಾಲ ಪಕ್ಷದ ಪರ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ನಡ್ಡಾ ಅವರು, ಉಡುಪಿ,ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಪ್ರವಾಸವನ್ನ ಮಾಡಲಿದ್ದಾರೆ.
ಬೆಂಗಳೂರು,ಫೆಬ್ರವರಿ20: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಹೆಚ್ಚಾಗಿ ಆಗಮಿಸಿತ್ತಿದ್ದು, ಈಗಾಗಲೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರು ಭಾನುವಾರ ರಾತ್ರಿಯೇ ರಾಜ್ಯಕ್ಕೆ ಆಗಮಿಸಿದ್ದಾರೆ.
ರಾಜ್ಯದಲ್ಲಿ ಎರಡ ದಿನಗಳ ಕಾಲ ಪಕ್ಷದ ಪರ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ನಡ್ಡಾ ಅವರು, ಉಡುಪಿ,ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಪ್ರವಾಸವನ್ನ ಮಾಡಲಿದ್ದಾರೆ.
ಇಂದು (ಸೋಮವಾರ) ಬೆಳಗ್ಗೆ ಉಡುಪಿ ಕೃಷ್ಣಮಠಕ್ಕೆ ತೆರಳಲಿದ್ದಾರೆ. ಅಲ್ಲಿ ಕೃಷ್ಣನ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಿಂದ ಆಶೀರ್ವಾದ ಪಡೆಯಲಿದ್ದಾರೆ. ನಂತರ ಬೈಂದೂರಿನ ಮುಳ್ಳಿಕಟ್ಟೆ ಗ್ರಾಮದಲ್ಲಿ ಬೂತ್ ಪ್ರಮುಖರ ಸಭೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಜೆ ಪಿ ನಡ್ಡಾ, ಬಳಿಕ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ, ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿರುವ ಚುನಾಯಿತ ಪ್ರತಿನಿಧಿಗಳ ಜೊತೆ ಮುಂಬರುವ ವಿಧಾನಸಭಾ ಚುನಾವಣೆ ಕುರಿತ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನೂ ಇಂದು ಸಂಜೆ ಶೃಂಗೇರಿ ಮಠಕ್ಕೆ ತೆರಳಿ ಗುರುಗಳ ದರ್ಶನ ಪಡೆದು, ರಾತ್ರಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಮಂಗಳವಾರ ಬೆಳಗ್ಗೆ 5.30ಕ್ಕೆ ಶಾರದಾಂಬಾ ದೇಗುಲದಲ್ಲಿ ನಡೆಯಲಿರುವ ಮೊದಲ ಪೂಜೆಯಲ್ಲಿ ಪಾಲ್ಗೊಂಡು, ಅಲ್ಲಿಂದ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ನಗರದ ಬಸವನಹಳ್ಳಿಯಲ್ಲಿರುವ ಶಾಸಕ ಸಿ.ಟಿ.ರವಿ ಅವರ ಮನೆಯಿಂದ ಮೆರವಣಿಗೆಯಲ್ಲಿ ಆಗಮಿಸಿ, ನಗರದ ಕುವೆಂಪು ತದನಂತರ, ಶೃಂಗೇರಿಗೆ ತೆರಳಿ, ಜಗದ್ಗುರುಗಳ ದರ್ಶನ ಪಡೆದು, ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಇನ್ನೂ ಮಂಗಳವಾರ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಂಡ ನಂತರ, ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.












Click it and Unblock the Notifications