ಉನ್ನತ ಶಿಕ್ಷಣ ಇಲಾಖೆಗೆ ಪ್ರೊ.ಕೆ.ಎಸ್.ರಂಗಪ್ಪ ನೇಮಕಕ್ಕೆ ಬಿಜೆಪಿ ವಿರೋಧ
ಬೆಂಗಳೂರು, ಜೂನ್ 24 : ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಉನ್ನತ ಶಿಕ್ಷಣ ಇಲಾಖೆ ಸಲಹೆಗಾರರನ್ನಾಗಿ ನೇಮಿಸಬಾರದು ಎಂದು ಬಿಜೆಪಿ ನಿಯೋಗ ಮನವಿ ಮಾಡಿದೆ. 'ಇಂತಹ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ' ಎಂದು ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ನಾಯಕರ ನಿಯೋಗ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಮತ್ತು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರನ್ನು ಭೇಟಿ ಮಾಡಿ ಶನಿವಾರ ಮನವಿ ಸಲ್ಲಿಸಿದೆ. ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಅರುಣ್ ಶಹಾಪುರ ಮನವಿ ಮಾಡಿದ್ದಾರೆ.
'ಪ್ರೊ.ಕೆ.ಎಸ್.ರಂಗಪ್ಪ ಅವರನ್ನು ಸಲಹೆಗಾರರನ್ನಾಗಿ ನೇಮಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಅವರ ಮೇಲೆ ಆಧಾರರಹಿತ ಆರೋಪ ಮಾಡುವುದು ಸರಿಯಲ್ಲ. ತಪ್ಪು ಮಾಡಿದ್ದರೆ ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ಆಗುತ್ತದೆ' ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಬಿಜೆಪಿ ಆರೋಪವೇನು? : ಕರ್ನಾಟಕ ಮಕ್ತ ವಿಶ್ವವಿದ್ಯಾಲಯ 2013-14ನೇ ಸಾಲಿನಿಂದಲೇ ಮಾನ್ಯತೆ ಕಳೆದುಕೊಂಡಿದೆ. ಇದುವರೆಗೂ ವಿವಿಗೆ ಮಾನ್ಯತೆ ಸಿಕ್ಕಿಲ್ಲ. ಅಂದಿನಿಂದ ಶೈಕ್ಷಣಿಕ ಚಟುವಟಿಕೆ ನಡೆಯದೇ ವಿಶ್ವವಿದ್ಯಾಲಯ ಕೋಮಾ ಸ್ಥಿತಿ ತಲುಪಿದೆ ಎಂದು ಬಿಜೆಪಿ ನಿಯೋಗ ದೂರಿದೆ.
2009ರಲ್ಲಿ ರಂಗಪ್ಪ ಕುಲಪತಿಯಾಗಿದ್ದ ಅವಧಿಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ. ನಂತರ ಬಂದ ಪ್ರೊ.ಎಂ.ಜೆ.ಕೃಷ್ಣನ್ ಅವರೂ ಸಹ ರಂಗಪ್ಪ ಮಾತಿನಂತೆ ನಡೆದುಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ. ವಿವಿಯ ಇಂದಿನ ಸ್ಥಿತಿಗೆ ಅವರಿಬ್ಬರು ಕಾರಣ ಎಂದು ಬಿಜೆಪಿ ಆರೋಪಿಸಿದೆ.
-
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ












Click it and Unblock the Notifications