ಚುನಾವಣೆಯಲ್ಲಿ ಭಾರೀ ಮುಖಭಂಗ: ಕರ್ನಾಟಕದಲ್ಲಿ ಪ್ರಬಲ ಹಿಂದುತ್ವ ಅಜೆಂಡಾವನ್ನು ಮುನ್ನೆಲೆಗೆ ತರಲು ಬಿಜೆಪಿ ಚಿಂತನೆ
ಬೆಂಗಳೂರು, ಮೇ 18: ಮೇ 10ರ ಚುನಾವಣೆಯಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಕಳೆದ ಕೆಲವು ದಿನಗಳಿಂದ ಬಿಜೆಪಿಯಲ್ಲಿ ಚಿಂತನ ಮಂಥನ ನಡೆಯುತ್ತಿದೆ. ಮುಂದಿನ ವರ್ಷದ ಲೋಕಸಭೆ ಚುನಾವಣೆಗೆ ಪಕ್ಷದ ಚುನಾವಣಾ ಭವಿಷ್ಯವನ್ನು ಪುನರುಜ್ಜೀವನಗೊಳಿಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ತನ್ನ ರಾಜ್ಯ ನಾಯಕತ್ವವನ್ನು ಮರುಪರಿಶೀಲಿಸಿ ಪ್ರಬಲ ಹಿಂದುತ್ವದ ಅಜೆಂಡಾವನ್ನು ಅನುಸರಿಸುವ ನಿರೀಕ್ಷೆಯಿದೆ.
ಇತ್ತೀಚಿನ ಸಮೀಕ್ಷೆಗಳು, ರಾಜಕೀಯ ತಜ್ಞರು ಅಭಿಪ್ರಾಯಗಳು ತಿಳಿಸಿದಂತೆ, ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಸಿದ್ಧಾಂತ ಜನರ ಮೇಲೆ ಪರಿಣಾಮ ಬೀರಿಲ್ಲವೆಂದು ಹೇಳಲಾಗುತ್ತಿದೆ. ಮೃದುವಾದ ಹಿಂದುತ್ವ ಜನರ ಮೇಲೆ ಪ್ರಭಾವ ಬೀರಲು ವಿಫಲವಾಗಿದೆ ಎಂದು ತಜ್ಞರು ಭಾವಿಸಿದ್ದಾರೆ.

ರಾಜ್ಯದ ಎಲ್ಲಾ ಪ್ರಮುಖ ಸಮುದಾಯಗಳಿಗೆ ಸಮಾನ ಪ್ರಾಮುಖ್ಯತೆಯನ್ನು ನೀಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ. ಬಿಜೆಪಿಯು ತನ್ನ ಭವಿಷ್ಯವನ್ನು ಗಟ್ಟಿಮಾಡಿಕೊಳ್ಳಲು ಹಿಂದುತ್ವದ ಅಜೆಂಡಾವನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.
'ಟೈಮ್ಸ್ ಆಫ್ ಇಂಡಿಯಾ' ಜೊತೆ ಮಾತನಾಡಿರುವ ಹಿರಿಯ ಆರ್ಎಸ್ಎಸ್ ಮತ್ತು ಬಿಜೆಪಿ ಪದಾಧಿಕಾರಿಗಳು, 'ನಮ್ಮ ಪಕ್ಷದಿಂದ ಒಬ್ಬ ಸಾಮೂಹಿಕ ನಾಯಕ ಹೊರ ಹೊಮ್ಮುವವರೆಗೆ, ಅದು ಇನ್ನೂ ಐದರಿಂದ ಹತ್ತು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಕ್ಷವು ತನ್ನ ಹಿಂದುತ್ವದ ಮೂಲ ಸಿದ್ಧಾಂತದೊಂದಿಗೆ ಮುಂದುವರಿಯುವ ಸಾಧ್ಯತೆಯಿದೆ. ಒಂದೇ ಅಜೆಂಡಾವನ್ನು ಮುನ್ನೆಲೆಗೆ ತರಲು ನಮಗೆ ಕಷ್ಟಕರವಾದ ರಾಜ್ಯವಾಗಿದೆ' ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಇಂತಹ ಸಂಭವನೀಯ ನೀತಿಯನ್ನು ಮರುಪ್ರಾರಂಭಿಸುವ ನಿರೀಕ್ಷೆ ಇದೆ. ಆದ್ದರಿಂದ, ಬಿಜೆಪಿಯು ಬಲಪಂಥೀಯ ನಾಯಕರಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರತ್ತ ನೋಡುತ್ತಿದೆ. ಒಬಿಸಿಗಳನ್ನು ಪ್ರತಿನಿಧಿಸುವ ಈಡಿಗ ಮತ್ತು ಸಂಘಪರಿವಾರಕ್ಕೆ ಹತ್ತಿರವಾಗಿರುವ ಸುನೀಲ್ ಕುಮಾರ್ ಅವರ ಆದ್ಯತೆಯ ಆಯ್ಕೆಯಾಗಬಹುದು ಎಂಬ ಊಹಾಪೋಹಗಳು ದಟ್ಟವಾಗಿವೆ.

ಆದಾಗ್ಯೂ, ಊಹಾಪೋಹಗಳನ್ನು ತಳ್ಳಿಹಾಕಿರುವ ಸುನೀಲ್ ಕುಮಾರ್ ಅವರು ಪಕ್ಷದ ಅಧ್ಯಕ್ಷ ಸ್ಥಾನದ ರೇಸ್ನಲ್ಲಿ ಇಲ್ಲ ಎಂದು ಹೇಳಿದರು. ಜಾತಿ ಆಧಾರಿತ ರಾಜಕೀಯವು ಬಿಜೆಪಿಯ ನಿಜವಾದ ಸಿದ್ಧಾಂತವಲ್ಲ ಎಂದು ಅವರು ಪುನರುಚ್ಚರಿಸಿದರು.
'ನಾವು ಈಗಾಗಲೇ ರಾಜ್ಯ ಘಟಕದಲ್ಲಿ ನಾಯಕರ ಗಂಭೀರ ಕೊರತೆಯನ್ನು ಎದುರಿಸುತ್ತಿದ್ದೇವೆ. ನಾವು ನಮ್ಮ ಜಾತಿ ಆಧಾರಿತ ನಿಲುವನ್ನು ಬದಲಾಯಿಸಬೇಕಾಗಿದೆ. ನಮ್ಮ ಹಿಂದೂ ಮತ್ತು ಹಿಂದುತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕಾಗಿದೆ' ಎಂದು ಅವರು ಹೇಳಿದರು.
ಬಿಜೆಪಿಯನ್ನು ಲಿಂಗಾಯತರು ಮತ್ತು ಬ್ರಾಹ್ಮಣರ ಪಕ್ಷ ಎಂದು ಬಿಂಬಿಸಿಕೊಂಡಿದ್ದರೆ, ಜೆಡಿಎಸ್ ತನ್ನನ್ನು ಒಕ್ಕಲಿಗ ಸಂಘಟನೆ ಎಂದು ಬಿಂಬಿಸಿಕೊಂಡಿದೆ. ಇದಕ್ಕೆ ವ್ಯತಿರಿಕ್ತವಾಗಿ, ಎಲ್ಲಾ ಸಮುದಾಯಗಳನ್ನು ತನ್ನ ಮಡಿಲಿಗೆ ಇಟ್ಟುಕೊಂಡು ಜಾತಿ ರಾಜಕಾರಣದ ದೊಡ್ಡ ಫಲಾನುಭವಿಯಾಗಿ ಕಾಂಗ್ರೆಸ್ ಹೊರಹೊಮ್ಮಿದೆ.

ಇಂತಹ ರಾಜಕೀಯ ವಾಸ್ತವವನ್ನು ಗಮನಿಸಿದರೆ, ಕರ್ನಾಟಕದಲ್ಲಿ ತನ್ನ ಜಾತಿ ಆಧಾರಿತ ರಾಜಕೀಯದ ಬ್ರ್ಯಾಂಡ್ ಅನ್ನು ತೆಗೆಯದೇ ಹೊರತು ಬಹುಮತ ಅಂಚಿಗೆ ಹೋಗುವುದಿಲ್ಲ.
'ಚುನಾವಣೆ ಯಶಸ್ಸಿಗೆ ತಿರುಳಲ್ಲಿ ಜಾತಿ ಆಧಾರ ರಾಜಕೀಯ ಮುಂದುವರಿಯುತ್ತದೆ. ಅದನ್ನು ನಾವು ಕಡೆಗಣಿಸಲಾಗುವುದಿಲ್ಲ. ಉದಾಹರಣೆಗೆ, ಬಸವರಾಜ ಬೊಮ್ಮಾಯಿ ಅವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರೆ, ಒಕ್ಕಲಿಗ ಸಮುದಾಯದ ನಾಯಕರೊಬ್ಬರು ರಾಜ್ಯಾಧ್ಯಕ್ಷರ ಪಟ್ಟವನ್ನು ಅಲಂಕರಿಸುತ್ತಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ












Click it and Unblock the Notifications