B.S.Yediyurappa: ಬಿಎಸ್ವೈ ಹುಟ್ಟುಹಬ್ಬದಂದೇ ಬಣ ರಾಜಕೀಯಕ್ಕೆ ಬ್ರೇಕ್? ಇದರ ಹಿಂದಿದೆ ದೊಡ್ಡ ಪ್ಲ್ಯಾನ್
ಬಿಜೆಪಿಯಲ್ಲಿ ಸದ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬಣ ಇದೆ ಎಂಬ ಮಾತುಗಳು ಆಗಾಗ ಬಹಿರಂಗವಾಗುತ್ತಲೇ ಇವೆ. ಇತ್ತೀಚೆಗೆ ಬಣ ರಾಜಕೀಯದಿಂದಲೇ ಬಿಜೆಪಿಯಲ್ಲಿ ಒಗ್ಗಟ್ಟು ಇಲ್ಲವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ಬಣ ರಾಜಕೀಯಕ್ಕೆ ಬ್ರೇಕ್ ಹಾಕಲು ಒಂದು ದೊಡ್ಡ ವೇದಿಕೆಯೇ ಸಿದ್ಧವಾಗುತ್ತಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ಜೋರಾಗಿದೆ.
ಯತ್ನಾಳ್ ಅವರು ಒಂದು ಟೀಂ ಕಟ್ಟಿಕೊಂಡು ಬಹಿರಂಗವಾಗಿಯೇ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರ ಬಗ್ಗೆ ಅಸಮಾಧಾನ ಹೊರಹಾಕುತ್ತಲೇ ಇದ್ದಾರೆ. ಇನ್ನು ಇತ್ತೀಚೆಗೆ ನಡೆದ ಕೋರ್ ಕಮಿಟಿ ಸಭೆಗಳಲ್ಲಿಯೂ ಈ ಬಣ ರಾಜಕೀಯದ ಬಗ್ಗೆ ಜೋರಾದ ಚರ್ಚೆ ನಡೆದಿದೆ. ಇದನ್ನೆಲ್ಲ ಹೈಕಮಾಂಡ್ ನಾಯಕರು ಗಮನಿಸುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಯತ್ನಾಳ್ ಮನವೊಲಿಕೆಗೆ ಯತ್ನಿಸಿದ್ದರು.

ಇದನ್ನೆಲ್ಲ ಮರೆತು ಇಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡೋಣ ಎಂದು ಬಿಎಸ್ವೈ ಕರೆ ನೀಡಿದ್ದರು. ಆದರೂ ಯತ್ನಾಳ್ ಅವರು ಇದಕ್ಕೆಲ್ಲ ಜಗ್ಗಿಲ್ಲ ಎಂದೇ ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಹಾಗೂ ಇತ್ತೀಚಿನ ಬೈಎಲೆಕ್ಷನ್ಗಳಲ್ಲಿ ಬಿಜೆಪಿ ಈ ಆಂತರಿಕ ಕಲಹದಿಂದಲೇ ಸೋಲು ಕಂಡಿದೆ ಎನ್ನುವ ಆರೋಪವೂ ಇದೆ. ಹಾಗಾಗಿ ಎಲ್ಲರಿಗೂ ಒಗ್ಗಟ್ಟಿನ ಮಂತ್ರವನ್ನು ಯಡಿಯೂರಪ್ಪ ಅವರು ಪಠಿಸುತ್ತಲೇ ಇದ್ದಾರೆ.
ಇನ್ನು ವಕ್ಫ್ ವಿರೋಧಿಸಿ ವಿಜಯೇಂದ್ರ ಅವರ ಒಂದೆಡೆ ಹೋರಾಟಕ್ಕಿಳಿದರೆ, ಯತ್ನಾಳ್ ಅವರೂ ಬಣದ ಸದಸ್ಯರು ಕೂಡ ಪ್ರತ್ಯೇಕವಾಗಿ ಹೋರಾಟ ಶುರುಮಾಡಿದ್ದರು. ಅಲ್ಲಿಗೆ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎನ್ನುವುದು ಕಣ್ಣಿಗೆ ಸ್ಪಷ್ಟವಾಗಿ ಗೋಚರಿಸಿತ್ತು.

ಇದು ಮುಂದೆ ಕರ್ನಾಟಕದಲ್ಲಿ ಬಿಜೆಪಿ ಸಂಘಟನೆಗೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಎಂದು ಯಡಿಯೂರಪ್ಪ ಅವರು ಮೊದಲಿನಿಂದಲೂ ಲೆಕ್ಕಾಚಾರ ಹಾಕುತ್ತಲೆ ಬಂದಿದ್ದಾರೆ. ಹಾಗಾಗಿ ಯತ್ನಾಳ್ ಹಾಗೂ ವಿಜಯೇಂದ್ರ ಅವರ ಬಣಗಳನ್ನು ಒಗ್ಗೂಡಿಸುವುದೇ ಅವರಿಗೆ ದೊಡ್ಡ ತಲೆನೋವಾಗಿದೆ.
ಮುಂಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಎದುರಿಸಲು ಒಗ್ಗಟ್ಟಿನಿಂದಲೇ ಸಾಧ್ಯ ಎಂದು ಅರಿತುಕೊಂಡಿರುವ ಅವರು ಹೇಗಾದರೂ ಮಾಡಿ ಪಕ್ಷ ಸಂಘಟನೆ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ಇನ್ನು ಬಿಎಸ್.ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ 20 ಲಕ್ಷ ಜನ ಸೇರಿಸಿ ಬೃಹತ್ ಕಾರ್ಯಕ್ರಮ ಮಾಡ್ತೀವಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕೂಡ ಹೇಳಿದ್ದಾರೆ.

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇವೆ. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಮೂಲಕ ಪಕ್ಷ ಬಲಿಷ್ಠವಾಗಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂಬ ಸುಳಿವು ನೀಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಯತ್ನಾಳ್ ಅವರನ್ನು ಕರೆಯುತ್ತೀರಾ ಎಂಬ ಪ್ರಶ್ನೆಗೆ ಸದ್ಯಕ್ಕೆ ಇದಕ್ಕೆ ನಾನು ಉತ್ತರ ನೀಡಲ್ಲ, ನಾನು ಯಾರ ಹೆಸರನ್ನೂ ಹೇಳುವುದಿಲ್ಲ ಎಂದಿದ್ದಾರೆ. ಒಟ್ಟಾರೆ ಪಕ್ಷ ಸಂಘಟನೆಗೆ ಹೈಕಮಾಂಡ್ ಕೂಡ ಸೂಚನೆ ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟುಹಬ್ಬದ ಹೆಸರಿನಲ್ಲಿ ಬೃಹತ್ ಸಮಾವೇಶ ಆಯೋಜಿಸಿ, ಪಕ್ಷದಲ್ಲಿನ ಬಣ ರಾಜಕೀಯಕ್ಕೆ ಬ್ರೇಕ್ ಹಾಕುವ ಸಾಧ್ಯತೆ ಇದೆ ಎಂದು ಚರ್ಚೆಗಳು ನಡೆಯುತ್ತಿವೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications