ಫೆ.21ರಂದು ಬೆಂಗಳೂರಿಗೆ ಅಮಿತ್ ಶಾ, ಕಾರ್ಯಕ್ರಮಗಳು
ಬೆಂಗಳೂರು, ಫೆಬ್ರವರಿ 20 : ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ವಿವಿಧ ಸಭೆಗಳಲ್ಲಿ ಅವರು ಪಾಲ್ಗೊಳ್ಳಲಿದ್ದು, ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಫೆ.21ರ ಗುರುವಾರ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೂರಕ್ಕೂ ಅಧಿಕ ಸಭೆಗಳನ್ನು ಅವರು ನಡೆಸಲಿದ್ದಾರೆ. 'ಮೋದಿ ವಿಜಯ ಸಂಕಲ್ಪ ಯಾತ್ರೆ'ಗೆ ಅವರು ದೇವನಹಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ಗೆ ಮರಳಿದ ಮಾಜಿ ಶಾಸಕ ಜೆ.ಡಿ.ನಾಯ್ಕ್
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರ ಜೊತೆ ಅಮಿತ್ ಶಾ ಸಭೆಗಳನ್ನು ನಡೆಸಲಿದ್ದಾರೆ. ಜಿಲ್ಲಾ ಅಧ್ಯಕ್ಷರು, ರಾಜ್ಯ ಪದಾಧಿಕಾರಿಗಳ ಜೊತೆಯೂ ಸಭೆ ನಡೆಸಿ ಚುನಾವಣಾ ಸಿದ್ಧತೆಗಳ ಬಗ್ಗೆ ಸೂಚನೆಗಳನ್ನು ನೀಡಲಿದ್ದಾರೆ.
ಲೋಕಸಭಾ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿಯ ಹೆಸರುಗಳು
ಅಮಿತ್ ಶಾ ಕಾರ್ಯಕ್ರಮಗಳು
ಲೋಕಸಭಾ ಚುನಾವಣೆ : ಹಲವು ಕಾರ್ಯಕ್ರಮ ಘೋಷಿಸಿದ ಕರ್ನಾಟಕ ಬಿಜೆಪಿ
*
ಶಕ್ತಿ
ಕೇಂದ್ರ
ಪ್ರಮುಖರ
ಸಮಾವೇಶ.
ಅನಂತ
ವಿದ್ಯಾನಿಕೇತನ,
ದೇವನಹಳ್ಳಿ
(ಮಧ್ಯಾಹ್ನ
3.45)
*
ಶಾಸಕರು,
ಎಂಎಲ್ಸಿಗಳು,
ಸಂಸದರ
ಸಭೆ
(ರಾಯಲ್
ಆರ್ಕಿಡ್
ಹೋಟೆಲ್
(ಸಂಜೆ
5
ಗಂಟೆ)
*
ಜಿಲ್ಲಾಧ್ಯಕ್ಷರು,
ವಿಸ್ತಾರಕರು,
ಪಾಧಿಕಾರಿಗಳ
ಸಭೆ
(ಸಂಜೆ
7.15)