B. Sriramulu: ಬಿ. ಶ್ರೀರಾಮುಲುಗೆ ಬಂತು ಕರೆ, ಕುತೂಹಲ ಮೂಡಿಸಿದ ನಡೆ
ಬೆಂಗಳೂರು, ಜನವರಿ 23: ಕರ್ನಾಟಕ ಬಿಜೆಪಿ ಘಟಕ ಹಲವು ಕಾರಣಕ್ಕೆ ಸುದ್ದಿಯಲ್ಲಿದೆ. ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೊಂದು ಕಡೆ ಮಾಜಿ ಸಚಿವ ಬಿ. ಶ್ರೀರಾಮುಲು ಸುದ್ದಿಯಲ್ಲಿದ್ದಾರೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ನಡುವಿನ ಜಟಾಪಟಿ ರಾಜ್ಯ ರಾಜಕೀಯದ ಗಮನ ಸೆಳೆದಿದೆ. ಬಿಜೆಪಿ ಬಿಡುವ ಕುರಿತು ಶ್ರೀರಾಮುಲು ಮಾತನ್ನಾಡಿದ್ದಾರೆ ಎಂಬುದು ಸದ್ಯದ ಸುದ್ದಿ.
ಗುರುವಾರ ಜನಾರ್ದನ ರೆಡ್ಡಿ, ಬಿ. ಶ್ರೀರಾಮುಲು ಪತ್ರಿಕಾಗೋಷ್ಠಿ ನಡೆಸುವ ಮೂಲಕ ರಾಜ್ಯ ರಾಜಕೀಯದ ಗಮನ ಸೆಳೆದರು. ಬಳ್ಳಾರಿಯ ಕುಚಿಕು ಗೆಳೆಯರ ವಾಕ್ಸಮರ ಈಗ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಳಿಕ ಬಳ್ಳಾರಿಯಲ್ಲಿ ಏನಾಗುತ್ತಿದೆ? ಎಂಬ ಸುದ್ದಿ ಹಬ್ಬಿದೆ.

ಬಿ. ಶ್ರೀರಾಮುಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಜೊತೆ ಕೋರ್ ಕಮಿಟಿ ಸಭೆಯಲ್ಲಿಯೇ ಅಸಮಾಧಾನ ಹೊರಹಾಕಿದ್ದಾರೆ ಎಂಬುದು ಚರ್ಚೆಯ ವಿಷಯವಾಗಿದೆ.
ಜೆ. ಪಿ. ನಡ್ಡಾ ಕರೆ: ಮಾಜಿ ಸಚಿವ ಬಿ. ಶ್ರೀರಾಮುಲು ಬಿಜೆಪಿ ಬಿಡುವ ಮಾತನಾಡಿದ್ದಾರೆ. ಜನಾರ್ದನ ರೆಡ್ಡಿ ಪತ್ರಿಕಾಗೋಷ್ಠಿಗೆ ಕೌಂಟರ್ ನೀಡಲು ಅವರು ಬಳ್ಳಾರಿಯಲ್ಲಿ ಗುರುವಾರ ಶ್ರೀರಾಮುಲು ಮಾಧ್ಯಮಗಳ ಜೊತೆ ಮಾತನಾಡಿದರು. ಬಳಿಕ ಸ್ಥಳೀಯ ನಾಯಕರ ಜೊತೆ ಸಭೆಯನ್ನು ನಡೆಸಿದರು.
ಬಿ. ಶ್ರೀರಾಮುಲು ಬಿಜೆಪಿ ಬಿಡುವ ಬಗ್ಗೆ ಆಡಿದ ಮಾತು ಹೈಕಮಾಂಡ್ ನಾಯಕರ ಕಿವಿಗೆ ಬಿದ್ದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಬಿ. ಶ್ರೀರಾಮುಲುಗೆ ಕರೆ ಮಾಡಿ ಮಾತನಾಡಿದ್ದಾರೆ. ದೆಹಲಿಗೆ ಬರುವಂತೆ ಸೂಚನೆಯನ್ನು ನೀಡಿದ್ದಾರೆ.
ಜೆ. ಪಿ. ನಡ್ಡಾ ಕರೆ ಮಾಡಿದಾಗ ಬಿ. ಶ್ರೀರಾಮುಲು ರಾಧಾಮೋಹನ್ ದಾಸ್ ಅಗರ್ವಾಲ್ ಜೊತೆ ಕೋರ್ ಕಮಿಟಿ ಸಭೆಯಲ್ಲಿಯೇ ಆದ ಅವಮಾನದ ಕುರಿತು ವಿವರಣೆ ನೀಡಿದ್ದಾರೆ. ಆಗ ನಡ್ಡಾ ಅವರು ದೆಹಲಿಯಲ್ಲಿ ಕುಳಿತು ಮಾತನಾಡೋಣ ಬನ್ನಿ ಎಂದು ಆಹ್ವಾನಿಸಿದ್ದಾರೆ. ಇದಕ್ಕೆ ಬಿ. ಶ್ರೀರಾಮುಲು ಸಹ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಇದೆ.
ಆದ್ದರಿಂದ ಮಾಜಿ ಸಚಿವ ಬಿ. ಶ್ರೀರಾಮುಲು ವಿಚಾರ ಈಗ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ದೂರವಾಣಿ ಕರೆಯಲ್ಲಿ ಬಿ. ಶ್ರೀರಾಮುಲು ವಿವರಣೆ ಕೇಳಿದ ಜೆ. ಪಿ. ನಡ್ಡಾ ಅವರು ದೆಹಲಿಗೆ ಬರುವಂತೆ ಹೇಳಿದ್ದಾರೆ. ಶ್ರೀರಾಮುಲು ಯಾವಾಗ ದೆಹಲಿಗೆ ಭೇಟಿ ನೀಡಲಿದ್ದಾರೆ? ಎಂಬುದು ಇನ್ನೂ ಅಂತಿಮವಾಗಿಲ್ಲ.
ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಬಿ. ಶ್ರೀರಾಮುಲು ಸಿಡಿದೆದ್ದಿದ್ದಾರೆ. ಬಳ್ಳಾರಿ ರಾಜಕೀಯವನ್ನು ಹತೋಟಿಗೆ ಪಡೆಯುವ ವಿಚಾರದಲ್ಲಿ ಬಿ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ವಿರುದ್ಧ ಜಟಾಪಟಿ ನಡೆಯುತ್ತಿದೆ ಎಂಬ ಮಾಹಿತಿಯೂ ಇದೆ. ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಬಳ್ಳಾರಿಗೆ ಭೇಟಿ ನೀಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಬಳಿಕ ಸಂಡೂರು ಉಪ ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತ್ತು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications