ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?
Recommended Video

ಬೆಂಗಳೂರು, ಅಕ್ಟೋಬರ್ 27 : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಬೇಕಿದ್ದ ಪ್ರತಿಭಟನೆಯನ್ನು ಕರ್ನಾಟಕ ಬಿಜೆಪಿ ಮುಂದೂಡಿದೆ?. ಶುಕ್ರವಾರ ಬಿಜೆಪಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯೆಲ್ ಸಲಹೆಯಂತೆ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ದಿನದ ಪ್ರತಿಭಟನೆ ನಡೆಸುವ ಬದಲು ತೀವ್ರ ಹೋರಾಟದ ರೂಪುರೇಷೆ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ.

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿದೆ. ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು.
ನವೆಂಬರ್ 14ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ದರಿಂದ, ಸಚಿವರ ವಿರುದ್ಧ ಹೋರಾಟ ಆರಂಭಿಸಿ ಅಧಿವೇಶನದಲ್ಲಿಯೂ ಈ ವಿಚಾರದ ಬಗ್ಗೆ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಆದ್ದರಿಂದ, ಒಂದು ದಿನದ ಸಾಂಕೇತಿಕ ಹೋರಾಟ ಮುಂದೂಡಲಾಗಿದೆ.
ಸಚಿವರ ಜೊತೆ ಸಭೆ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications