ಕೆಜೆ ಜಾರ್ಜ್ ವಿರುದ್ಧ ಬಿಜೆಪಿ ಪ್ರತಿಭಟನೆ ಮುಂದೂಡಿಕೆ?
Recommended Video

ಬೆಂಗಳೂರು, ಅಕ್ಟೋಬರ್ 27 : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ನಡೆಸಬೇಕಿದ್ದ ಪ್ರತಿಭಟನೆಯನ್ನು ಕರ್ನಾಟಕ ಬಿಜೆಪಿ ಮುಂದೂಡಿದೆ?. ಶುಕ್ರವಾರ ಬಿಜೆಪಿ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿ ಒಂದು ದಿನದ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪಿಯೂಷ್ ಗೋಯೆಲ್ ಸಲಹೆಯಂತೆ ಪ್ರತಿಭಟನೆಯನ್ನು ಮುಂದೂಡಲಾಗಿದೆ. ಒಂದು ದಿನದ ಪ್ರತಿಭಟನೆ ನಡೆಸುವ ಬದಲು ತೀವ್ರ ಹೋರಾಟದ ರೂಪುರೇಷೆ ರೂಪಿಸುವಂತೆ ಅವರು ಸಲಹೆ ನೀಡಿದ್ದಾರೆ. ಆದ್ದರಿಂದ ಪ್ರತಿಭಟನೆ ಮುಂದೂಡಲಾಗಿದೆ.

ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರ ಮಾಡಲಾಗಿದೆ. ಸಿಬಿಐ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್ಐಆರ್ ದಾಖಲು ಮಾಡಿದೆ. ಆದ್ದರಿಂದ, ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಒಂದು ದಿನದ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿತ್ತು.
ನವೆಂಬರ್ 14ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದ್ದರಿಂದ, ಸಚಿವರ ವಿರುದ್ಧ ಹೋರಾಟ ಆರಂಭಿಸಿ ಅಧಿವೇಶನದಲ್ಲಿಯೂ ಈ ವಿಚಾರದ ಬಗ್ಗೆ ಹೋರಾಟ ನಡೆಸಲು ಬಿಜೆಪಿ ಯೋಜನೆ ರೂಪಿಸುತ್ತಿದೆ. ಆದ್ದರಿಂದ, ಒಂದು ದಿನದ ಸಾಂಕೇತಿಕ ಹೋರಾಟ ಮುಂದೂಡಲಾಗಿದೆ.
ಸಚಿವರ ಜೊತೆ ಸಭೆ : ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಚಿವರ ಜೊತೆ ಸಭೆ ನಡೆಸಲಿದ್ದಾರೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications