ಸರ್ಕಾರದ ಗುಂಡಿ ಭಾಗ್ಯ: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಿ ಬಿಜೆಪಿಯಿಂದ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿಗಳನ್ನು ಮುಚ್ಚುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದನ್ನು ವಿರೋಧಿಸಿ ಇಂದು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬನಶಂಕರಿಯ ಕಾಮಾಕ್ಯ ಲೇಔಟ್ ಬಳಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಸಂಚಾರ ತಡೆ ಚಳವಳಿ ನಡೆಯಿತು. ಶಾಸಕ ಎಲ್.ವಿ. ರವಿಸುಬ್ರಮಣ್ಯ ಮತ್ತು ಕಾರ್ಯಕರ್ತರು ರಸ್ತೆ ಸಂಚಾರ ತಡೆ ಚಳವಳಿಯಲ್ಲಿ ಭಾಗವಹಿಸಿದ್ದರು. ರಸ್ತೆ ಗುಂಡಿಗಳನ್ನು ಮುಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ತ್ವರಿತವಾಗಿ ರಸ್ತೆ ಗುಂಡಿ ದುರಸ್ತಿಯ ಬಗ್ಗೆ ಕ್ರಮ ವಹಿಸುವಂತೆ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಮತ್ತು ರಸ್ತೆ ಗುಂಡಿಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಇಂದು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಅವರು ತಿಳಿಸಿದ್ದಾರೆ.

ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂಬರ್ 01 ರಲ್ಲಿ ಇಂದು ಬೆಳಿಗ್ಗೆ ರಸ್ತೆ ತಡೆ ನಡೆಸಲಾಯಿತು. ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಿಸಬೇಕೆಂದು ನೇತೃತ್ವ ವಹಿಸಿದ್ದ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಆಗ್ರಹಿಸಿದರು. ರಾಜ್ಯ ಸರ್ಕಾರ ಗುಂಡಿ ಭಾಗ್ಯವನ್ನ ನೀಡಿದೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ ಎಂದು ಅವರು ಆಕ್ಷೇಪಿಸಿದರು.
ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಹೋರಾಟ ನಡೆಸಲಾಯಿತು. ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಚಳವಳಿ ಹಮ್ಮಿಕೊಳ್ಳಲಾಗಿತ್ತು. ಹೋರಾಟದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
'ಇಡೀ ಬೆಂಗಳೂರನ್ನು ಗುಂಡಿ ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ', ವಾಹನ ಸವಾರರಿಗೆ ತೊಂದರೆ ಕೊಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, 'ಬ್ರಾಂಡ್ ಬೆಂಗಳೂರು ಎಂದು ಹೇಳಿ ಬ್ಯಾಡ್ ಬೆಂಗಳೂರು ಮಾಡಿದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರದ ಘೋಷಣೆ ಕೂಗಿದರು. ಮುಚ್ಚಿಸಿ ಮುಚ್ಚಿಸಿ ಗುಂಡಿ ಮುಚ್ಚಿಸಿ ಘೋಷಣೆ ಕೂಗಿದರು.
ಇಂದು ಬೆಳಿಗ್ಗೆ ಯಲಹಂಕ ಹಳೆ ನಗರ, ಕೆಂಪೇಗೌಡ ವಾರ್ಡ್ ನಂ.01 ರಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾಟಾಚಾರಕ್ಕೆ, ಅವೈಜ್ಞಾನಿಕವಾಗಿ ಹಾಗೂ ಕಳಪೆ ಡಾಂಬರೀಕರಣ ಕೆಲಸ ಮಾಡಿದ್ದು, ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಈಗಾಗಲೇ ಗುಂಡಿಗಳು ಬಿದ್ದಿದೆ, ಇದರಿಂದ ಸಾಕಷ್ಟು ರಸ್ತೆ ಅಪಘಾತಗಳು ಹಾಗೂ ಸಾವುಗಳು ಸಂಭವಿಸಿವೆ, ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ರಸ್ತೆ ತಡೆದು ಗುಂಡಿ ಮುಚ್ಚುವ ಅಭಿಯಾನ ವನ್ನು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಆರ್.ವಿಶ್ವನಾಥ್ ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು..
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಸ್ತೆ ತಡೆ: ಅಶ್ವತ್ಥನಾರಾಯಣ್
ಅಭಿವೃದ್ಧಿ ಶೂನ್ಯತೆ ಹಾಗೂ ರಸ್ತೆ ಗುಂಡಿಯ ವಿಷಯವನ್ನು ಸರಕಾರಕ್ಕೆ ಮನವರಿಕೆ ಮಾಡುವ ದೃಷ್ಟಿಯಿಂದ ರಾಜ್ಯದಲ್ಲಿ ಎಲ್ಲ ಕಡೆ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಾಂಕೇತಿಕವಾಗಿ ಹೋರಾಟ ಮಾಡುತ್ತೇವೆ. ಕಾಂಗ್ರೆಸ್ ಸರಕಾರವು ಜನವಿರೋಧಿಯಾಗಿದ್ದು, ಆಡಳಿತದಲ್ಲಿ ವಿಫಲವಾಗಿದೆ. ಜನರನ್ನು ಬೆದರಿಸುವ ಸರಕಾರ ಇದೆಂದು ಟೀಕಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ವರ್ತನೆಯನ್ನು ಖಂಡಿಸಿ ಮತ್ತು ತಕ್ಷಣ ರಸ್ತೆಗಳ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications