Yatnal: ಯತ್ನಾಳ್ ರೆಬೆಲ್ ಟೀಂ ಸಭೆಯಲ್ಲಿ ಚರ್ಚೆಯಾಗಿದ್ದೇನು?
ರಾಜ್ಯ ಬಿಜೆಪಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಅವರ ರೆಬೆಲ್ ಬಣವು ನಿನ್ನೆ ಸಭೆ ಸೇರುವ ಮೂಲಕ ಮಹತ್ವದ ಚರ್ಚೆ ನಡೆಸಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ವಿಜಯೇಂದ್ರ ವಿರುದ್ಧ ರಣತಂತ್ರ, ರಾಜ್ಯಾಧ್ಯಕ್ಷ ಹುದ್ದೆಗೆ ಸ್ಪರ್ಧೆ ಮಾಡಲಿರುವ ಅಭ್ಯರ್ಥಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಭಾರಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ. ಪ್ರಮುಖವಾಗಿ ಈ ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎನ್ನುವ ಇನ್ಸೈಡ್ ಸ್ಟೋರಿ ಇಲ್ಲಿದೆ.
ಈ ಸಭೆಯಲ್ಲಿ ಮುಖ್ಯವಾಗಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಯಾರನ್ನು ಸ್ಪರ್ಧೆಗೆ ಇಳಿಸಬೇಕು ಎಂಬುದರ ಕುರಿತಾಗಿ ಎಲ್ಲ ಅಭಿಪ್ರಾಯ ವ್ಯಕ್ತವಾಗಿ ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಮಾಂಡ್ ಶೋಕಾಸ್ ನೀಡಿದ ವಿಚಾರದ ಬಗ್ಗೆಯೂ ಸಭೆಯಲ್ಲಿ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಶಿವರಾಜ್ ಸಿಂಗ್ ಚೌಹಣ್ ಅವರು ರಾಜ್ಯಕ್ಕೆ ಆಗಮಿಸಿ ಚುನಾವಣೆ ಪ್ರಕ್ರಿಯೆ ನಡೆಸುವುದಾದರೆ ಯತ್ನಾಳ್ ಬಣದಿಂದ ನಾಮಪತ್ರ ಸಲ್ಲಿಸಲು ಮುಂದಾಗಲಿದೆ. ಈಗಾಗಲೇ ವಕ್ಫ್ ವಿಚಾರವಾಗಿ ಯತ್ನಾಳ್ ಬಣವು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಹೋರಾಟದ ಮೂಲಕ ಗಮನ ಸೆಳೆದಿದ್ದು, ಇದೇ ರೀತಿ ಮತ್ತೊಂದು ಹೋರಾಟ ಸಂಘಟಿಸಲು ಕೂಡ ಈ ಟೀಂ ಪ್ಲ್ಯಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ಸದ್ಯ ರಾಜ್ಯ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂಬ ವಿಚಾರವಾಗಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಯತ್ನಾಳ್ ಬಣ ಸಜ್ಜಾಗಿದೆ ಎಂದು ಹೇಳಲಾಗಿದೆ. ಮುಖ್ಯವಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಏನೆಲ್ಲ ಮಾಡಬಹುದು ಎಂಬ ವಿಚಾರವಾಗಿ ಬಣದ ನಾಯಕರು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರಂತೆ. ಮುಂದೆ ಹೈಕಮಾಂಡ್ ಜೊತೆಗೆ ಯಾವ ಅಂಶಗಳನ್ನು ಪ್ರಸ್ತಾಪಿಸಿ, ವಿಜಯೇಂದ್ರ ಅವರ ಸ್ಥಾನ ಖಾಲಿ ಮಾಡಿಸಬೇಕು ಎಂದೂ ತಂತ್ರಗಾರಿಕೆ ರೂಪಿಸಲಾಗಿದೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸೇರಿದ್ದ ಸಭೆಯಲ್ಲಿ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ.ಹರೀಶ್, ಮಾಜಿ ಸಂಸದ ಪ್ರತಾಪ್ ಸಿಂಹ, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಸಭೆ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ನಾವೆಲ್ಲ ಸೇರಿ ಒಂದು ಕಪ್ ಕಾಫಿ ಕುಡಿದೆವು ಅಷ್ಟೇ. ಹಾಗೆಯೇ ಮುಂದಿನ ಹೋರಾಟ ಬಗ್ಗೆಯೂ ಚರ್ಚೆ ಮಾಡಿದೆವು. ಇಂದಿನ ಸಭೆಯಲ್ಲಿ ಆಗಿದ್ದು ಇಷ್ಟೇ ಬೇರೇನೂ ಇಲ್ಲ. ನಮ್ಮ ವಕ್ಫ್ ಹೋರಾಟ ಯಶಸ್ವಿಯಾಗಿದೆ ಎಂದು ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಾಗಿ ಒಂದು ಸಣ್ಣ ಸಭೆ ಸೇರಿದ್ದೇವೆ ಅಷ್ಟೇ ಎಂದಿದ್ದಾರೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳನ್ನ ಪಟ್ಟಿ ಮಾಡ್ಕೊಂಡು ಎಲ್ಲದಕ್ಕೂ ಉತ್ತರ ಕೊಡ್ತೀನಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಯತ್ನಾಳ್ ಅವರು ಮಾತನಾಡಿದ್ದಕ್ಕೆಲ್ಲಾ ಉತ್ತರ ಕೊಡಲು ಆಗಲ್ಲ. ಏಕೆಂದರೆ ನಾನು ರಾಜ್ಯಾಧ್ಯಕ್ಷ, ನನಗೆ ಮಾಡಲು ಸಾಕಷ್ಟು ಕೆಲಸಗಳಿವೆ. ನಾನೇ ಸಮಯ ಬಂದಾಗ ಅವರ ಪ್ರಶ್ನೆಗಳಿಗೆ ಉತ್ತರ ಕೊಡುವೆ ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications