ಬಿಜೆಪಿ: ಚುನಾವಣಾ ಪ್ರಚಾರ, ನಿರ್ವಹಣಾ ಸಮಿತಿಯ ಸದಸ್ಯರ ಪಟ್ಟಿ ಬಿಡುಗಡೆ
ಬೆಂಗಳೂರು ಮಾರ್ಚ್ 10: ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಎಸ್ ಯಡಿಯೂರಪ್ಪ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಸದಸ್ಯರಾದರೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಇನ್ನೂ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಪಟ್ಟಿಯಲ್ಲಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ಸಚಿವ ಗೋವಿಂದ ಕಾರಜೋಳ, ಬಿ ಶ್ರೀರಾಮುಲು, ಸಚಿವ ಆರ್ ಅಶೋಕ್, ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಸಿಸಿ ಪಾಟೀಲ್, ಕೆ ಸುಧಾಕರ್, ಸಿಟಿ ರವಿ ಮತ್ತಿತ್ತರ ಸಚಿವರು ಇದ್ದಾರೆ.

ಇನ್ನೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾಗಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಅವರು ಮುಖ್ಯ ಸದಸ್ಯರಾಗಿದ್ದಾರೆ. ಈ ಪಟ್ಟಿಯಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಭಾಪತಿಗಳಾದ ರಘುನಾಥರಾವ್ ಮತ್ತಿತರ ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಇದ್ದಾರೆ.
ವಿಧಾನಸಭಾ ಚುನಾವಣೆ 2023 ರ ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. #BJPYeBharavase pic.twitter.com/owAoQiepxG
— BJP Karnataka (@BJP4Karnataka) March 10, 2023
ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ನಡೆಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಣಾಳಿಕೆ ಕುರಿತು ಬಿಜೆಪಿ ಸಮಾಲೋಚನೆ ಆರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಭರವಸೆಗಳು ಸಾರ್ವಜನಿಕರ ಭಾವನೆಗಳಿಗೆ ಕನ್ನಡಿ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿಯು 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಲೋಚನೆ ಪ್ರಕ್ರಿಯೆ ಆರಂಭಿಸಿದೆ.

ಉಚಿತ ವಿದ್ಯುತ್, ಗೃಹಿಣಿಯರಿಗೆ ನಗದು ಪ್ರೋತ್ಸಾಹ ಮತ್ತು 10 ಕೆಜಿ ಉಚಿತ ಅಕ್ಕಿ ಭರವಸೆ ನೀಡಿದ ನಂತರ ಕಾಂಗ್ರೆಸ್ ಈಗಾಗಲೇ ಸಾಕಷ್ಟು ಬಲವನ್ನು ಪಡೆದುಕೊಂಡಿರುವುದರಿಂದ ಬಿಜೆಪಿ ಏನು ಮಾಡಲಿದೆ ಎಂಬ ಕುತೂಹಲ ಕೆರಳಿಸಿದೆ. ಯುವಜನರಿಂದ ಇನ್ಪುಟ್ಗೆ ಅನುಕೂಲವಾಗುವಂತೆ ಕೇಸರಿ ಪಕ್ಷವು ಮೀಸಲಾದ ವೆಬ್ಸೈಟ್, ವಾಟ್ಸಾಪ್ ಮೊಬೈಲ್ ಸಂಖ್ಯೆ ಮತ್ತು ಕ್ಯೂಆರ್ ಕೋಡ್ ಅನ್ನು ಪ್ರಾರಂಭಿಸಿದೆ.
ಇದು ಸಾರ್ವಜನಿಕ ಸ್ಥಳಗಳು ಮತ್ತು ಪಕ್ಷದ ರ್ಯಾಲಿಗಳಲ್ಲಿ 25 ಬಾಕ್ಸ್ಗಳನ್ನು ಇರಿಸುತ್ತದೆ. ಅಲ್ಲಿ ಜನರು ತಮ್ಮ ಸಲಹೆಗಳನ್ನು ಚೀಟಿಗಳಲ್ಲಿ ಬರೆದು ಹಾಕಬಹುದು. 'ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯೇ ಆಶಾಕಿರಣ' ಎಂಬ ಅಡಿಬರಹದೊಂದಿಗೆ ಪ್ರಣಾಳಿಕೆಯನ್ನು ಏಪ್ರಿಲ್ ಮಧ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಿತಿಯ ಸದಸ್ಯರು ಹೇಳಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications