Get Updates
Get notified of breaking news, exclusive insights, and must-see stories!

ಬಿಜೆಪಿ: ಚುನಾವಣಾ ಪ್ರಚಾರ, ನಿರ್ವಹಣಾ ಸಮಿತಿಯ ಸದಸ್ಯರ ಪಟ್ಟಿ ಬಿಡುಗಡೆ

ಬೆಂಗಳೂರು ಮಾರ್ಚ್ 10: ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಎಸ್ ಯಡಿಯೂರಪ್ಪ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯಲ್ಲಿ ಸದಸ್ಯರಾದರೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಇನ್ನೂ ಕರ್ನಾಟಕ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಪಟ್ಟಿಯಲ್ಲಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿವಿ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶೋಭಾ ಕರಂದ್ಲಾಜೆ, ಎ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ, ಸಚಿವ ಗೋವಿಂದ ಕಾರಜೋಳ, ಬಿ ಶ್ರೀರಾಮುಲು, ಸಚಿವ ಆರ್ ಅಶೋಕ್, ಸಚಿವೆ ಶಶಿಕಲಾ ಜೊಲ್ಲೆ, ಸಚಿವ ಸಿಸಿ ಪಾಟೀಲ್, ಕೆ ಸುಧಾಕರ್, ಸಿಟಿ ರವಿ ಮತ್ತಿತ್ತರ ಸಚಿವರು ಇದ್ದಾರೆ.

 Karnataka BJP released list of members of election campaign committee & election management committee

ಇನ್ನೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರಾಗಿದ್ದಾರೆ. ಕೇಂದ್ರ ಸಚಿವ ಭಗವಂತ ಖೂಬಾ ಅವರು ಮುಖ್ಯ ಸದಸ್ಯರಾಗಿದ್ದಾರೆ. ಈ ಪಟ್ಟಿಯಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಭಾಪತಿಗಳಾದ ರಘುನಾಥರಾವ್ ಮತ್ತಿತರ ರಾಜ್ಯ ಉಪಾಧ್ಯಕ್ಷರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಕಾರ್ಯದರ್ಶಿಗಳು ಇದ್ದಾರೆ.

ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಸಕಲ ತಯಾರಿ ನಡೆಸಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಣಾಳಿಕೆ ಕುರಿತು ಬಿಜೆಪಿ ಸಮಾಲೋಚನೆ ಆರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷದ ಭರವಸೆಗಳು ಸಾರ್ವಜನಿಕರ ಭಾವನೆಗಳಿಗೆ ಕನ್ನಡಿ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಪ್ರಣಾಳಿಕೆ ಸಮಿತಿಯು 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಲೋಚನೆ ಪ್ರಕ್ರಿಯೆ ಆರಂಭಿಸಿದೆ.

 Karnataka BJP released list of members of election campaign committee & election management committee

ಉಚಿತ ವಿದ್ಯುತ್, ಗೃಹಿಣಿಯರಿಗೆ ನಗದು ಪ್ರೋತ್ಸಾಹ ಮತ್ತು 10 ಕೆಜಿ ಉಚಿತ ಅಕ್ಕಿ ಭರವಸೆ ನೀಡಿದ ನಂತರ ಕಾಂಗ್ರೆಸ್ ಈಗಾಗಲೇ ಸಾಕಷ್ಟು ಬಲವನ್ನು ಪಡೆದುಕೊಂಡಿರುವುದರಿಂದ ಬಿಜೆಪಿ ಏನು ಮಾಡಲಿದೆ ಎಂಬ ಕುತೂಹಲ ಕೆರಳಿಸಿದೆ. ಯುವಜನರಿಂದ ಇನ್‌ಪುಟ್‌ಗೆ ಅನುಕೂಲವಾಗುವಂತೆ ಕೇಸರಿ ಪಕ್ಷವು ಮೀಸಲಾದ ವೆಬ್‌ಸೈಟ್, ವಾಟ್ಸಾಪ್ ಮೊಬೈಲ್ ಸಂಖ್ಯೆ ಮತ್ತು ಕ್ಯೂಆರ್ ಕೋಡ್ ಅನ್ನು ಪ್ರಾರಂಭಿಸಿದೆ.

ಇದು ಸಾರ್ವಜನಿಕ ಸ್ಥಳಗಳು ಮತ್ತು ಪಕ್ಷದ ರ್‍ಯಾಲಿಗಳಲ್ಲಿ 25 ಬಾಕ್ಸ್‌ಗಳನ್ನು ಇರಿಸುತ್ತದೆ. ಅಲ್ಲಿ ಜನರು ತಮ್ಮ ಸಲಹೆಗಳನ್ನು ಚೀಟಿಗಳಲ್ಲಿ ಬರೆದು ಹಾಕಬಹುದು. 'ಸಮೃದ್ಧ ಕರ್ನಾಟಕಕ್ಕೆ ಬಿಜೆಪಿಯೇ ಆಶಾಕಿರಣ' ಎಂಬ ಅಡಿಬರಹದೊಂದಿಗೆ ಪ್ರಣಾಳಿಕೆಯನ್ನು ಏಪ್ರಿಲ್ ಮಧ್ಯದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸಮಿತಿಯ ಸದಸ್ಯರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+