ರಾಜ್ಯದ ರೈತರಿಗೆ ಕೂಡಲೇ ಪರಿಹಾರ ನೀಡಲಿ ಇಲ್ಲ ರಾಜೀನಾಮೆ ಕೊಡಲಿ: ರಾಜ್ಯಪಾಲರಿಗೆ ಬಿಜೆಪಿ ಆಗ್ರಹ
ಬೆಂಗಳೂರು, ಜನವರಿ 09: ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ಮಧ್ಯೆ ಬರಗಾಲದ ಪರಿಹಾರ ವಿತರಣೆ ವಿಳಂಬ ಕುರಿತು ವಾಗ್ವಾದಗಳು ಮುಂದುವರಿದಿದೆ. ಪರಿಹಾರ ನೀಡದಿದ್ದರೆ ರಾಜಿನಾಮೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.
ಈ ಸಂಬಂಧ ವಿಪಕ್ಷ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯಪಾಲ ಥಾವರ್ಚೆಂದ್ ಗೆಲ್ಲೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ರಾಜ್ಯದ ಬರಗಾಲ ಪರಿಸ್ಥಿತಿ ಕುರಿತು ತಿಳಿಸಿದ್ದಾರೆ. ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರ ಮುಖಂಡರು ಜೊತೆಗಿದ್ದರು.

ಬಿಜೆಪಿ ಸರ್ಕಾರ ವಿತರಿಸಿದಂತೆಯೇ ತ್ವರಿತವಾಗಿ ರಾಜ್ಯ ಸರ್ಕಾರಕ್ಕೆ ಪರಿಹಾರ ವಿತರಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗವು ಮನವಿ ಮಾಡಿದೆ.
ರಾಜಭವನದಿಂದ ಹೊರ ಬಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆರ್. ಅಶೋಕ್, ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಒಂದು, ಎರಡು ತಿಂಗಳಲ್ಲಿ ರೈತರಿಗೆ ಪ್ರವಾಹ ಹಾನಿ ಪರಿಹಾರ ವಿತರಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಕೂಡಲೇ ಪರಿಹಾರ ವಿತರಿಸಲಿ, ಇಲ್ಲವಾದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೆಸೆದರು.
ರೈತರ ಬಗ್ಗೆ ಕಾಳಜಿಯೇ ಇಲ್ಲ
ರಾಜ್ಯದಲ್ಲಿ ಸುಮಾರು 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಕಡೆಗೆ ಸರ್ಕಾರ ತಿರುಗಿಯೂ ನೋಡುತ್ತಿಲ್ಲ. ಅಧಿಕಾರಿಗಳು ಸಾಂತ್ವನ ಹೇಳಿಲ್ಲ, ಸಚಿವರು ಕೂಡ ರೈತರ ಬಳಿ ಹೋಗಿಲ್ಲ. ಉತ್ತರ ಕರ್ನಾಟಕದಲ್ಲಿ ವಲಸೆ ಆರಂಭವಾಗಿದೆ ಎಂದು ದೂರಿದರು.

ರಾಜ್ಯದಲ್ಲಿ ಬರಗಾಲ ಶುರುವಾಗಿ ಐದು ತಿಂಗಳಾದರೂ ಸರ್ಕಾರ ನಯಾ ಪೈಸೆ ಪರಿಹಾರ ನೀಡಿಲ್ಲ. ಎರಡು ಸಾವಿರ ರೂಪಾಯಿ ಪರಿಹಾರ ನೀಡುವ ಬಗ್ಗೆ ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇದುವರೆಗೆ ರೈತರಿಗೆ ಹಣ ತಲುಪಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರದ ಲಾಲಸೆಯಿಂದಾಗಿ ರೈತರನ್ನು ಅನಾಥರನ್ನಾಗಿಸಿದೆ. ಏನೇ ಕೇಳಿದರೂ ಕೇಂದ್ರ ಸರ್ಕಾರ ನೆರವಿಗೆ ಬರುತ್ತಿಲ್ಲ ಎನ್ನುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿಯಿಂದ ತ್ವರಿತ ಪರಿಹಾರ ವಿತರಣೆ
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಕೇಂದ್ರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಲಾಗಿತ್ತು. ಹಿಂದೆ ಕಾಂಗ್ರೆಸ್ ಇದ್ದಾಗ ಪರಿಹಾರ ನೀಡಲು ಏಳೆಂಟು ತಿಂಗಳು ತಡ ಮಾಡುತ್ತಿದ್ದರು. ಬಿಜೆಪಿ ಅವಧಿಯಲ್ಲಿ ಮೊದಲ ಬಾರಿಗೆ ಡಿಬಿಟಿ ಮುಖಾಂತರ ರೈತರಿಗೆ 3 ಸಾವಿರ ಕೋಟಿ ರೂ.ಗೂ ಅಧಿಕ ಪರಿಹಾರ ನೀಡಿತ್ತು.
ಆದರೆ ಈಗಿನ ಸರ್ಕಾರ ಕೇವಲ 100 ಕೋಟಿ ರೂ. ಪರಿಹಾರ ನೀಡಲಿದೆ. ಬಿಜೆಪಿ ಇದ್ದಾಗ ರಾಜ್ಯದಿಂದ ಪರಿಹಾರ ನೀಡಿದ ಬಳಿಕ ಕೇಂದ್ರದಿಂದ ಪರಿಹಾರ ಬಂದಿತ್ತು. ನಮ್ಮ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಉದಾಹರಣೆಗೆ, 18 ಸಾವಿರ ರೂ. ಇದ್ದರೆ 10 ಸಾವಿರ ರೂ. ಸೇರಿಸಿ 28 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದೆ, ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದೆ. ಬರಗಾಲ ಬರಲು ರೈತರು ಕಾಯುತ್ತಿದ್ದಾರೆ ಎಂದು ಸಚಿವರೇ ಹೇಳುತ್ತಾರೆ ಎಂದು ಪರಿಸ್ಥಿತಿಯನ್ನು ವಿವರಿಸಿದರು.
ಪರಿಹಾರ ನೀಡಲಿ ಇಲ್ಲ ರಾಜೀನಾಮೆ ಕೊಡಲಿ
ಈ ಮೇಲಿನ ಕಾರಣಗಳಿಂದಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರದ ಬೇಜವಾಬ್ದಾರಿತನದ ಬಗ್ಗೆ ವಿವರಿಸಿದ್ದೇವೆ. ಈ ಸರ್ಕಾರ ರೈತರಿಗೆ ಪರಿಹಾರ ನೀಡದೆ ಬೊಗಳೆ ಬಿಡುತ್ತಿದೆ. ಹಿಂದಿನ ನಮ್ಮ ಬಿಜೆಪಿ ಸರಕಾರ ಒಂದು, ಎರಡು ತಿಂಗಳಲ್ಲಿ ಪರಿಹಾರ ನೀಡಿರುವಾಗ ಈಗಿನ ಸರ್ಕಾರ ಕೂಡ ಅದೇ ರೀತಿ ಪರಿಹಾರ ಕೊಡಲಿ, ಇಲ್ಲವಾದರೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದೇವೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications