ಹೆಬ್ಬಾಳದ ಅಕ್ರಮ ಗುರುತಿನ ಚೀಟಿ ಸೃಷ್ಟಿ: ಸಮಗ್ರ ತನಿಖೆಗೆ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಿಜೆಪಿ!
ಬೆಂಗಳೂರು, ಅಕ್ಟೋಬರ್ 26: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಮಗ್ರ ತನಿಖೆಗೆ ಶಿಫಾರಸು ಮಾಡುವಂತೆ ಬಿಜೆಪಿ ನಿಯೋಗವು ಚುನಾವಣಾ ಆಯೋಗವನ್ನು ಕೋರಿದೆ. ಈ ಸಂಬಂಧ ಬಿಜೆಪಿ ನಿಯೋಗವು ಗುರುವಾರ ರಾಜ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಎಂಎಸ್ಎಲ್ ಟೆಕ್ನೊ ಸೊಲ್ಯೂಶನ್ಸ್ನಲ್ಲಿ ಮತದಾರರ ನಕಲಿ ಗುರುತುಚೀಟಿ ಸಿದ್ಧಪಡಿಸಿ ನೀಡಲಾಗುತ್ತಿತ್ತು. ಇದು ರಾಷ್ಟ್ರೀಯ ಭದ್ರತೆ ಸಂಬಂಧಿಸಿ ಆತಂಕಕಾರಿ ವಿಚಾರ ಎಂದು ಮನವಿ ತಿಳಿಸಿದೆ.
ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಶಿಫಾರಸು ಮಾಡುವಂತೆ ಮನವಿ ಮಾಡಲಾಯಿತು.

ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್ಸ್ಪೆಕ್ಟರ್ ಅವರು ಇದೇ 19ರಂದು ಆರ್ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್ನ ಎಂಎಸ್ಎಲ್ ಟೆಕ್ನೊ ಸೊಲ್ಯೂಶನ್ಸ್ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ತಿಳಿಸಿದ್ದಾರೆ. ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು.
ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು. ಎಂಎಸ್ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಮನವಿ ವಿವರಿಸಿದೆ.
ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಕೂಡ ರಾಷ್ಟ್ರೀಯ ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯ ಇದಾಗಿದೆ ಎಂದು ಗಮನ ಸೆಳೆಯಲಾಯಿತು. ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮತ್ತು ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಘಟ್ಟ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮುಖಂಡರಾದ ಕಟ್ಟಾ ಜಗದೀಶ್ ಅವರ ನಿಯೋಗವು ಈ ಮನವಿ ಸಲ್ಲಿಸಿತು.
-
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Vijay Sethupathi: ರಿಷಬ್ ಶೆಟ್ಟಿ ಜೊತೆ ನಟಿಸುವ ದೊಡ್ಡ ಆಸೆ ನನಗಿದೆ: ಆಸೆ ಬಿಚ್ಚಿಟ್ಟ ನಟ ವಿಜಯ್ ಸೇತುಪತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications