Get Updates
Get notified of breaking news, exclusive insights, and must-see stories!

ಡೀಸೆಲ್- ಪೆಟ್ರೋಲ್ ದರ ಏರಿಕೆ; ಇಂದು 224 ಕ್ಷೇತ್ರಗಳಲ್ಲಿ ರಸ್ತೆತಡೆ

ಬೆಂಗಳೂರು, ಜೂನ್‌ 20: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ಹೆಚ್ಚಳ ಮಾಡಿದ್ದು, ವಿಪಕ್ಷಗಳು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಡೀಸೆಲ್- ಪೆಟ್ರೋಲ್ ದರ ಏರಿಕೆ ವಿರೋಧಿಸಿ ಮತ್ತು ಈ ದರ ಏರಿಕೆಯನ್ನು ವಾಪಸ್ ಪಡೆಯಲು ಆಗ್ರಹಿಸಿ ಇಂದು ರಾಜ್ಯದ 224 ಕ್ಷೇತ್ರಗಳ ರಸ್ತೆತಡೆಗೆ ಬಿಜೆಪಿ ಮುಂದಾಗಿದೆ.

ಈ ಕುರಿತು ವಿಧಾನ ಪರಿಷತ್‌ ಸದಸ್ಯರಾದ ಎನ್‌ ರವಿ ಕುಮಾರ್‌ ಅವರು ಮಾತನಾಡಿ, ಬೆಲೆ ಏರಿಕೆ ಕುರಿತು ಎರಡನೇ ಹಂತದ ಹೋರಾಟ ನಡೆಸಲಾಗುವುದು. ಮೊನ್ನೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡಿದ್ದೇವೆ. ಇಂದು(ಗುರುವಾರ) ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ರಸ್ತೆತಡೆ ಆಂದೋಲನ ನಡೆಸಲಿದ್ದೇವೆ ಎಂದು ಹೇಳಿದರು.

BJP Road Block In 224 Constituencies On Today For Reducing Petrol Diesel Price Says N Ravikumar

ರಾಹುಲ್ ಗಾಂಧಿ, ಸುರ್ಜೇವಾಲಾ ಅವರು ಯಾವ್ಯಾವಾಗ ಬಂದು ಸಭೆ ನಡೆಸಿ ಹೋಗುತ್ತಾರೋ, ಅವಾಗ ಪೆಟ್ರೋಲಿಯಂ, ಡೀಸೆಲ್ ದರ ಏರಿದೆ. ಮದ್ಯ, ಹಾಲು ಮತ್ತಿತರ ದರ ಏರಿದೆ. ಯಾವಾಗ ಕೇಂದ್ರ ಕಾಂಗ್ರೆಸ್ ನಾಯಕರು ಬಂದು ಹೋಗಿದ್ದಾರೋ ಆಗೆಲ್ಲ ಕರ್ನಾಟಕದ ಜನತೆಗೆ ಬರೆ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನ ಅಖಿಲ ಭಾರತ ನಾಯಕರು ಕರ್ನಾಟಕಕ್ಕೆ ಬಂದು ಮಾಡಿದ್ದಾರೆ. ಆದ್ದರಿಂದ ಸರಕಾರವು ಕೂಡಲೇ ಡೀಸೆಲ್- ಪೆಟ್ರೋಲ್ ದರ ಏರಿಕೆಯನ್ನು ಇಳಿಸಬೇಕು ಎಂದು ಆಗ್ರಹಿಸಿದರು

ವಿಪರೀತ ತೆರಿಗೆ ಶುಲ್ಕ ಹೆಚ್ಚಳದ ಅಭಿಯಾನವನ್ನೇ ರಾಜ್ಯ ಸರಕಾರ ನಡೆಸುತ್ತಿದೆ; ಹಲವಾರು ಕ್ಷೇತ್ರಗಳ ತೆರಿಗೆಯನ್ನು ಈ ಸರಕಾರ ಹೆಚ್ಚಿಸಿದೆÉ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಸರಕಾರವು ಕರ್ನಾಟಕದ ಜನರ ಜೀವನವನ್ನೇ ಕಷ್ಟದಾಯಕವನ್ನಾಗಿ ಮಾಡಿದೆ. ಜನರ ಬದುಕನ್ನೇ ದುಸ್ತರವನ್ನಾಗಿ ಮಾಡಿದ ಜನವಿರೋಧಿ ಸರಕಾರ ಇದು. ರೈತವಿರೋಧಿ, ಎಸ್‍ಸಿ, ಎಸ್‍ಟಿ, ಒಬಿಸಿಗಳ ವಿರೋಧಿ ಸರಕಾರ ಇದಾಗಿದ್ದು, ಸಿದ್ದರಾಮಯ್ಯನವರ ನೇತೃತ್ವದ ಈ ಸರಕಾರ ಕೂಡಲೇ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.

ಆಸ್ತಿ ತೆರಿಗೆಯನ್ನು ಶೇ 20ರಿಂದ ಶೇ 120 ವರೆಗೆ ಹೆಚ್ಚಿಸಿದ್ದಾರೆ. ಮೋಟಾರು ವಾಹನ ತೆರಿಗೆಯನ್ನು ಶೇ 40ರಿಂದ ಶೇ 80ರಷ್ಟು ಹೆಚ್ಚಿಸಿದ್ದಾರೆ. ಅಬಕಾರಿ ತೆರಿಗೆ (ಮದ್ಯ) ಶೇ 20ರಿಂದ ಶೇ 400ವರೆಗೆ ಹೆಚ್ಚಳವಾಗಿದೆ. ಹೆಣ್ಮಕ್ಕಳಿಗೆ ಬಸ್ ಪ್ರಯಾಣದರ ಉಚಿತ ಎನ್ನುತ್ತಿದ್ದರು. ಗಂಡಸರ ಬಸ್ ಪ್ರಯಾಣದರ ಏರಿಸಿದ್ದಾರೆ ಎಂದು ರವಿಕುಮಾರ್ ಅವರು ಹೇಳಿದರು.

ವಿದ್ಯುತ್ ದರವನ್ನೂ ಹೆಚ್ಚಿಸಿದ್ದಾರೆ. ಇದರಿಂದ ಕೈಗಾರಿಕಾ ಉತ್ಪನ್ನಗಳ ದರ ಏರಿದೆ. ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿದ್ದಾರೆ. ಪ್ರತಿ ಲೀಟರ್ ಹಾಲಿನ ದರ ಏರಿಸಿದ್ದಾರೆ. ಇದರಿಂದ ಹಾಲು, ಮೊಸರು, ತುಪ್ಪ ಮತ್ತಿತರ ಉತ್ಪನ್ನಗಳ ದರ ಏರಿದೆ ಎಂದು ತಿಳಿಸಿದರು.

ಕಾರ್ಮಿಕರ ಮಕ್ಕಳು, ದಲಿತ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ಸ್ಕಾಲರ್‍ಶಿಪ್ ಅನ್ನು ಈ ಸರಕಾರ ರದ್ದು ಮಾಡಿದೆ. ಕಾರ್ಮಿಕರ 4 ಲಕ್ಷ ಮಕ್ಕಳಿಗೆ ಸ್ಕಾಲರ್‍ಶಿಪ್ಪನ್ನು ಈ ಸರಕಾರ ರದ್ದು ಮಾಡಿದೆ. ರಾಜ್ಯದಲ್ಲಿ 900 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರಗಳ ಬೆಲೆಯನ್ನೂ ಹೆಚ್ಚಿಸಿದ್ದಾರೆ. ದಿನನಿತ್ಯ ಕರ್ನಾಟಕದಲ್ಲಿ ಕೊಲೆಗಳ ಸರಣಿ ನಡೆದಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಈ ಸರಕಾರ ದರ ಏರಿಕೆಗೆ ಯಾವ ಕ್ಷೇತ್ರವನ್ನೂ ಉಳಿಸಿಲ್ಲ ಎಂದು ಟೀಕಿಸಿದರು.

ಈ ಸರಕಾರ ಗ್ಯಾರಂಟಿ ಹೆಸರಿನಲ್ಲಿ ಲೂಟಿ ಮಾಡುತ್ತಿದೆ. ಇಂಥ ತೆರಿಗೆ ಹಣವನ್ನು ತೆಲಂಗಾಣದ ಖಾತೆಗಳಿಗೆ ಕಳುಹಿಸುತ್ತಿದೆ. ತಮ್ಮ ಪಾರ್ಟಿ ನಾಯಕರ ಖಾತೆಗೂ ಇರಬಹುದೇನೋ ಎಂದು ಸಂದೇಹ ವ್ಯಕ್ತಪಡಿಸಿದರು. ಎಐಸಿಸಿಗೆ ಹಣ ಕಳುಹಿಸುತ್ತಿದೆ. ರಾಹುಲ್ ಗಾಂಧಿ, ಸುರ್ಜೇವಾಲಾ ಅವರು ಬಂದು ಸಭೆ ನಡೆಸಿ ಹೋಗುತ್ತಾರೆ ಎಂದು ಆರೋಪಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+