ಕುಮಾರಸ್ವಾಮಿ ವಿರುದ್ಧ ದೇಶದ್ರೋಹ ಆರೋಪ ದೂರು ದಾಖಲು

Recommended Video

      Pulwama : ಸೈನ್ಯದ ಬಗ್ಗೆ ಮಾತನಾಡಿದ್ದಕ್ಕೆ ಎಚ್‍ಡಿಕೆ ಮೇಲೆ ಎಲ್ಲರೂ ಗರಂ | Oneindia Kannada

      ಬೆಂಗಳೂರು, ಏಪ್ರಿಲ್ 27: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯ ಬಗ್ಗೆ ಎರಡು ವರ್ಷ ಮುಂಚೆಯೇ ತಿಳಿದಿದ್ದರೂ ಅದನ್ನು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದೇಶದ್ರೋಹದ ಕಾಯ್ದೆಯಡಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿ ಪರಿಶಿಷ್ಟ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು ಅವರು ಶುಕ್ರವಾರ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

      ಲೋಕಸಭಾ ಚುನಾವಣೆ ವಿಶೇಷ ಪುಟ

      ಮುಖ್ಯಮಂತ್ರಿ ವಿರುದ್ಧ ದೇಶದ್ರೋಹ, ದೇಶದ ಸಾರ್ವಭೌಮತೆಗೆ ಧಕ್ಕೆ, ಅಪರಾಧ ಸಂಚನ್ನು ಮುಚ್ಚಿಟ್ಟಿರುವುದು, ಪ್ರಮಾಣ ವಚನದ ಉಲ್ಲಂಘನೆ ಅಪರಾಧಗಳಿಗಾಗಿ ಐಪಿಸಿ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಹಾಗೂ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅವರು ಮನವಿ ಮಾಡಿದ್ದಾರೆ.

      ಫೆಬ್ರವರಿ 14ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ 45 ಯೋಧರು ಬಲಿಯಾಗಿದ್ದರು. ಈ ದಾಳಿ ನಡೆಯುತ್ತದೆ ಎಂದು ತಮಗೆ ಎರಡು ವರ್ಷ ಮೊದಲೇ ತಿಳಿದಿತ್ತು. ಈ ವಿಚಾರವನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ತಮಗೆ ಆಗಲೇ ಮಾಹಿತಿ ನೀಡಿದ್ದರು ಎಂದು ಏಪ್ರಿಲ್ 5ರಂದು ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ದಾಳಿಯ ಕುರಿತು ಗೊತ್ತಿದ್ದರೂ ಸುಮ್ಮನೆ ಇರುವ ಮೂಲಕ 45 ಸೈನಿಕರ ಸಾವಿಗೆ ಪರೋಕ್ಷವಾಗಿ ಕಾರಣಕರ್ತರಾಗಿದ್ದಾರೆ ಎಂದು ರಾಮು ಅವರು ದೂರಿನಲ್ಲಿ ಹೇಳಿದ್ದಾರೆ.

      ಕುಮಾರಸ್ವಾಮಿ ಅವರು ಕೊಪ್ಪದಲ್ಲಿ ಮಾಡಿದ್ದ ಭಾಷಣದ ಧ್ವನಿಮುದ್ರಣದ ಸಿಡಿಯನ್ನು ಕೂಡ ಸಲ್ಲಿಸಿದ್ದಾರೆ.

      ಗೊತ್ತಿದ್ದರೂ ಏಕೆ ತಿಳಿಸಲಿಲ್ಲ?

      ಗೊತ್ತಿದ್ದರೂ ಏಕೆ ತಿಳಿಸಲಿಲ್ಲ?

      ಕುಮಾರಸ್ವಾಮಿ ಅವರ ಹೇಳಿಕೆ ತೀವ್ರ ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಮಟ್ಟದಲ್ಲಿ ಈ ಹೇಳಿಕೆ ಕುರಿತು ಚರ್ಚೆಗಳು ನಡೆದಿದ್ದವು. ಕುಮಾರಸ್ವಾಮಿ ಅವರಿಗೆ ಈ ದಾಳಿ ಬಗ್ಗೆ ಮೊದಲೇ ತಿಳಿದಿದ್ದರೆ ಅದನ್ನು ಉನ್ನತ ಅಧಿಕಾರಿಗಳಿಗೆ, ರಾಷ್ಟ್ರಪತಿ ಅವರಿಗೆ ತಿಳಿಸಬೇಕಿತ್ತು. ದಾಳಿ ನಡೆಯುತ್ತದೆ ಎಂದು ಗೊತ್ತಿದ್ದರೂ ಸುಮ್ಮನಿದ್ದದ್ದು ಅಪರಾಧ ಎಂದು ಅವರ ವಿರುದ್ಧ ವಾಗ್ದಾಳಿ ನಡೆಸಲಾಗಿತ್ತು.

      ಹೇಳಿದ್ದು ಬೇರೆ ಅರ್ಥದಲ್ಲಿ

      ಹೇಳಿದ್ದು ಬೇರೆ ಅರ್ಥದಲ್ಲಿ

      ಪುಲ್ವಾಮಾ ಘಟನೆ ಕುರಿತು ನನ್ನ ಹೇಳಿಕೆಯನ್ನಿಟ್ಟುಕೊಂಡು ಮೇಲೆ ಆರೋಪ ಮಾಡುತ್ತಿದ್ದಾರೆ. ಒಬ್ಬ ನಿವೃತ್ತ ಸೈನಿಕರು ಹೇಳಿದ್ದಷ್ಟನ್ನೇ ನಾನು ಹೇಳಿದ್ದೇನೆ. ಚುನಾವಣೆ ವೇಳೆ ಮೋದಿ ಸರ್ಕಾರ ಪಾಕಿಸ್ತಾನದ ಜತೆ ಘರ್ಷಣೆ ಮಾಡುತ್ತದೆ ಎಂದು ನಿವೃತ್ತ ಸೈನಿಕರೊಬ್ಬರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೆ. ಪುಲ್ವಾಮಾ ದಾಳಿ ಬಗ್ಗೆ ನನಗೇನು ಗೊತ್ತು? ಎಂದು ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದ್ದರು.

      ಎರಡು ವರ್ಷದ ಹಿಂದೆಯೇ ಗೊತ್ತಿತ್ತು

      ಎರಡು ವರ್ಷದ ಹಿಂದೆಯೇ ಗೊತ್ತಿತ್ತು

      ಮುಂದಿನ ಲೋಕಸಭಾ ಚುನಾವಣೆಗೆ ಮುನ್ನ ಭಾರತ-ಪಾಕ್ ನಡುವೆ ಸಂಘರ್ಷ ನಡೆಯುತ್ತೆ, ಏನಾದರೂ ಕಥೆ ಸೃಷ್ಟಿ ಮಾಡಿ ಮೋದಿ ಮತ ಕೇಳುತ್ತಾರೆ ಎಂದು ಎರಡು ವರ್ಷದ ಹಿಂದೆಯೇ ಎಂದು ನಿವೃತ್ತ ಸೇನಾಧಿಕಾರಿ ನನ್ನ ಬಳಿ ಹೇಳಿದ್ದರು. ಈಗ ಅದೇ ರೀತಿಯಲ್ಲಿ ಆಗಿದೆ. ಪುಲ್ವಾಮಾದಲ್ಲಿ ದಾಳಿ ನಡೆಯುವ ಬಗ್ಗೆ ಎರಡು ವರ್ಷದ ಹಿಂದೆಯೇ ಗೊತ್ತಿತ್ತು ಎಂದು ಕುಮಾರಸ್ವಾಮಿ ಚಿಕ್ಕಮಗಳೂರಿನ ಕೊಪ್ಪದಲ್ಲಿ ಹೇಳಿದ್ದರು ಎನ್ನಲಾಗಿದೆ.

      ತಪ್ಪಾಗಿ ಅರ್ಥೈಸಲಾಗಿದೆಯೇ?

      ತಪ್ಪಾಗಿ ಅರ್ಥೈಸಲಾಗಿದೆಯೇ?

      ಪ್ರಧಾನಿ ಮೋದಿ ಅವರು ಮತಕ್ಕಾಗಿ ಏನಾದರೂ ತಂತ್ರ ರೂಪಿಸುತ್ತಾರೆ. ಚುನಾವಣೆಯ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷದಂತಹ ಸಂದರ್ಭವನ್ನು ಸೃಷ್ಟಿಸುತ್ತಾರೆ. ಚುನಾವಣೆ ಹತ್ತಿರ ಬಂದಾಗ ಈ ರೀತಿಯ ಘಟನೆ ನಡೆಯಬಹುದು ಎಂದು ಎರಡು ವರ್ಷದ ಹಿಂದೆಯೇ ನಿವೃತ್ತ ಸೇನಾಧಿಕಾರಿಯೊಬ್ಬರು ತಮಗೆ ತಿಳಿಸಿದ್ದರು ಎಂಬುದಾಗಿ ಹೇಳಿದ್ದೆ. ಅದನ್ನು ತಪ್ಪಾಗಿ ಅರ್ಥೈಸಿ, ಪುಲ್ವಾಮಾ ದಾಳಿಯ ಕುರಿತು ಮೊದಲೇ ಮಾಹಿತಿ ಇತ್ತು ಎಂಬಂತೆ ಬಿಂಬಿಸಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+