ಯೋಗಿ ಬಗ್ಗೆ ದಿನೇಶ್ ಹೇಳಿಕೆಗೆ ಬಿಜೆಪಿ ಖಂಡನೆ
ಬೆಂಗಳೂರು, ಏಪ್ರಿಲ್ 15: ಮಣಿ ಶಂಕರ್ ಅಯ್ಯರ್ ಅವರನ್ನು ನೆನಪಿಸುವಂಥ ಸನ್ನಿವೇಶ, ಬೆಂಗಳೂರಿನಲ್ಲಿ ಕಂಡು ಬಂದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಏಕವಚನ ಬಳಸಿ ಮಾತನಾಡಿದ್ದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತೀವ್ರವಾಗಿ ಖಂಡಿಸಿದ್ದಾರೆ.
ಅವರು ಯೋಗಿ ಅವರು ಢೋಂಗಿ, ಅವರನ್ನು ಸಿಎಂ ಸ್ಥಾನದಿಂದ ಪ್ರಧಾನಿ ಕೂಡಲೇ ಕಿತ್ತು ಹಾಕಬೇಕು, ಜಮ್ಮು ಹಾಗೂ ಉತ್ತರಪ್ರದೇಶದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಕೆಪಿಸಿಸಿ ತೀವ್ರವಾಗಿ ಖಂಡಿಸುತ್ತದೆ ಎಂದು ಮೇಣದಬತ್ತಿ ಹಿಡಿದು ಪ್ರತಿಭಟನೆ ಮಾಡುತ್ತಾ ದಿನೇಶ್ ಗುಂಡೂರಾವ್ ಹೇಳಿದರು.
'ಯೋಗಿ ಆದಿತ್ಯನಾಥ್ ಅವರು ಕರ್ನಾಟಕಕ್ಕೆ ಬಂದರೆ, ವಾಪಸ್ ಕಳಿಸಿ, ಚಪ್ಪಲಿಯನ್ನು ಹೊಡೆದು ಹೊರಕ್ಕೆ ಹಾಕಿ ಎಂದು ಆಕ್ರೋಶ'
Retweeted Pratap Simha (@mepratap):
— Vikram Savitrimane (@VikramSavitri) April 15, 2018
ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ. pic.twitter.com/wie8rApPSN
ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ದಿನೇಶ್ ಗುಂಡೂರಾವ್ ಅವರನ್ನು ವಜಾಗೊಳಿಸಿ, ಇಲ್ಲದಿದ್ದರೆ ರಾಜ್ಯವ್ಯಾಪ್ತಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ದಿನೇಶ್ ಅವರ ಮಾತು ನನಗೆ ತೀವ್ರ ಆಘಾತ ತಂದಿದೆ. ಮುಖ್ಯಮಂತ್ರಿ ಹಾಗೂ ನಾಥ ಪಂಥದ ಸಂತರಿಗೆ ನೀಡುವ ಮರ್ಯಾದೆ ಇದಲ್ಲ. ಇದರಿಂದ ಕರ್ನಾಟಕದಲ್ಲಿರುವ ಲಕ್ಷಾಂತರ ನಾಥ ಪಂಥ ಅನುಯಾಯಿಗಳಿಗೆ ತೀವ್ರ ಅವಮಾನವಾಗಿದೆ. ದಿನೇಶರ ಕಾಂಗ್ರೆಸ್ ನ ಸಂಸ್ಕೃತಿಯನ್ನು ಕಟುವಾಗಿ ಖಂಡಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.