ಶೆಟ್ಟರ್, ಸವದಿ ಸೋಲಿಸಲು ಬಿಜೆಪಿ ಮಹಾತಂತ್ರ: ಇಬ್ಬರನ್ನು ಸೋಲಿಸುವ ಮೂಲಕ ನೇರ ಸಂದೇಶ ರವಾನೆ- ಏನಿದು ಇನ್ಸೈಡ್ ಸ್ಟೋರಿ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆಗಳು ನಡೆಯುತ್ತಿವೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಪಣತೊಟ್ಟು ನಿಂತಿದೆ. ಈ ಇಬ್ಬರು ನಾಯಕರನ್ನು ಸೋಲಿಸುವ ಮೂಲಕ ನೇರ ಸಂದೇಶವೊಂದನ್ನು ರವಾನಿಸಲು ಕೇಸರಿ ಪಕ್ಷ ಯೋಜನೆ ರೂಪಿಸಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಅಡಿ ಸ್ಪರ್ಧಿಸುತ್ತಿರುವ ನಾಯಕರನ್ನು ಸೋಲಿಸುವುದು ಕೇಸರಿ ಪಕ್ಷಕ್ಕೆ ಪ್ರತಿಷ್ಠಿಯಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಹಲವಾರ ಸಿದ್ದತೆಗಳನ್ನು ಮಾಡಿಕೊಂಡಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಿದ್ದು, ಅವರ ವಿರುದ್ಧ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಕಣಕ್ಕಿಳಿದಿದ್ದಾರೆ. ಸಂಘ ಪರಿವಾರ ಶಕ್ತಿಶಾಲಿಯಾಗಿರುವ ಈ ಪ್ರದೇಶದಲ್ಲಿ ಟೆಂಗಿನಕಾಯಿ ಅವರನ್ನು ಗೆಲ್ಲಿಸಲು ಬಿಜೆಪಿ ಪಣತೊಟ್ಟಿದೆ.
ಬೆಳಗಾವಿ ಅಥಣಿ ಕ್ಷೇತ್ರವು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಲಕ್ಷ್ಮಣ ಸವದಿ ಅವರು ಕೆಲ ದಿನಗಳ ಹಿಂದೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಅವರ ವಿರುದ್ಧ ಬಿಜೆಪಿಯಿಂದ ಮಹೇಶ್ ಕುಮಠಳ್ಳಿ ಅವರು ಸ್ಪರ್ಧಿಸುತ್ತಿದ್ದಾರೆ.
ಶೆಟ್ಟರ್ ಹಾಗೂ ಸವದಿಯನ್ನು ಸೋಲಿಸಲು ಬಿಜೆಪಿ ಗುಪ್ತ ಯೋಜನೆಗಳನ್ನು ರೂಪಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಧಾರವಾಡ, ಬೆಳಗಾವಿ ಮತ್ತು ಉತ್ತರ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಕಾರ್ಯಕರ್ತರ ಜೊತೆಗೆ ಸಂವಾದ ನಡೆಸಿದ್ದಾರೆ. ಈ
ಈ ಜಿಲ್ಲೆಗಳಿಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿರುವ ಕಾರ್ಯಕರ್ತರನ್ನು ಹೊರತುಪಡಿಸಿ, ಪ್ರಧಾನಿ ನರೇಂದ್ರ ಮೋದಿ ಅವರ ಹೆಚ್ಚಿನ ರ್ಯಾಲಿ ಹಾಗೂ ರೋಡ್ಶೋಗಳನ್ನು ಈ ಭಾಗದಲ್ಲಿ ಆಯೋಜಿಸಲು ಪಕ್ಷ ನಿರ್ಧರಿಸಿದೆ.

ಧಾರವಾಡ ಲೋಕಸಭಾ ಸದಸ್ಯ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಧಾರವಾಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಜವಾಬ್ದಾರಿಯನ್ನು ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಈ ಕ್ಷೇತ್ರಗಳಲ್ಲಿ ಬೀಡಾರ ಹೂಡಿ ಪ್ರಚಾರ ನಡೆಸಲಿದ್ದಾರೆ.
ವಿಶೇಷವಾಗಿ, ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ನಲ್ಲಿ ಶೆಟ್ಟರ್ ಅವರನ್ನು ಸೋಲಿಸಲು ಸುಫಾರಿ ಪಡೆದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಆರ್ಎಸ್ಎಸ್ ತನ್ನದೇ ಆದ ಗುಪ್ತ ಪ್ರಚಾರಗಳನ್ನು ಮಾಡುತ್ತಿದೆ ಎಂದು ತಿಳಿದುಬಂದಿದೆ. ನಾಗಪುರದಿಂದಲೇ ನೇರವಾಗಿ ಆರ್ಎಸ್ಎಸ್ ಕಾರ್ಯಕರ್ತರು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ ಎಂದು ವರದಿಗಳಾಗಿವೆ.
ಇನ್ನು ಲಕ್ಷ್ಮಣ ಸವದಿ ಪ್ರತಿನಿಧಿಸುತ್ತಿರುವ ಅಥಣಿಯಲ್ಲಿ ಬಿಜೆಪಿ ಭಾರೀ ಪ್ರಚಾರ ಕೈಗೊಂಡಿದೆ. ಲಕ್ಷ್ಮಣ ಸವದಿ ಅವರನ್ನು ಸೋಲಿಸಲು ಮಾಜಿ ಸಚಿವ, ಗೋಕಾಕದ ಶಾಸಕ ರಮೇಶ್ ಜಾರಕಿಹೊಳಿ ಅವರು ಪಣತೊಟ್ಟಿದ್ದಾರೆ. ಅಥಣಿಯಲ್ಲಿ ಪಂಚಮಸಾಲಿ ಮತಗಳು ಹೆಚ್ಚಿದ್ದು, ಅಲ್ಲಿ ಪಂಚಮಸಾಲಿ ಮುಖಂಡರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೂ ಬಳಸಿಕೊಳ್ಳಲಾಗುತ್ತಿದೆ.
-
ನೇಪಾಳ ಚುಣಾವಣೆ ಫಲಿತಾಂಶ ಅಂತಿಮ, ಬಲೇಂದ್ರ ಶಾ ಪಕ್ಷಕ್ಕೆ ಒಟ್ಟು 119 ಸ್ಥಾನ | Nepal Election 2026 -
ನೇಪಾಳ ಫಲಿತಾಂಶದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್, ನಂಬರ್ ಗೇಮ್ ಶುರು | Nepal Election 2026 -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications