ಸೋರುತಿರುವ ಬಸ್; ಮಳೆಯಲ್ಲಿ ಕೊಡೆ ಹಿಡಿದು ಸರ್ಕಾರಿ ಬಸ್ ಚಾಲನೆ: 'ಛತ್ರಿ ಭಾಗ್ಯ' ಎಂದ ಬಿಜೆಪಿ
ಕೆಎಸ್ಆರ್ಟಿಸಿ ಬಸ್ ಸೇವೆ ಇಡೀ ದೇಶದಲ್ಲೇ ಅತ್ಯುತ್ತಮ ಹೆಸರು ಗಳಿಸಿರುವ ಸಾರ್ವಜನಿಕ ಸಾರಿಗೆ ಸಂಸ್ಥೆ. ಇದು ಕರ್ನಾಟಕದ ಹೆಮ್ಮೆ ಕೂಡ. ಆದರೆ ಉತ್ತರ ಕರ್ನಾಟಕದ ವಿಚಾರದಲ್ಲಿ ಇದು ತದ್ವಿರುದ್ಧ.
ರಾಜ್ಯ ಸರ್ಕಾರಗಳಿಗೆ ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಮೊದಲಿನಿಂದಲೂ ನಿರ್ಲಕ್ಷ್ಯ, ಸಾರಿಗೆ ವಿಚಾರದಲ್ಲಿ ಕೂಡ ಇದು ಮುಂದುವರೆದಿದೆ. ಕೆಎಸ್ಆರ್ಟಿಸಿ ಮತ್ತು ವಾಯುವ್ಯ ಕರ್ನಾಟಕ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ಸುಗಳನ್ನು ನೋಡಿದಾಗ ಈ ವ್ಯತ್ಯಾಸ ಸ್ಪಷ್ಟವಾಗಿ ತಿಳಿಯುತ್ತದೆ.

ಉತ್ತರ, ಕಲ್ಯಾಣ ಕರ್ನಾಟಕ ಗ್ರಾಮೀಣ ಪ್ರದೇಶದ ಸಾರಿಗೆ ಬಸ್ಸುಗಳ ಸ್ಥಿತಿ ಕೂಡ ಕಳಪೆಯಾಗಿದೆ. ಇದೆಲ್ಲದರ ನಡುವೆ ಈಗ ವಿಡಿಯೋವೊಂದು ವೈರಲ್ ಆಗಿದ್ದು, ಚಾಲಕರು, ಪ್ರಯಾಣಿಕರ ಸುರಕ್ಷತೆ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಭಾರಿ ಮಳೆಯಿಂದ ವಾಯುವ್ಯ ಕರ್ನಾಟಕ ಬಸ್ ಸೋರುತ್ತಿದ್ದು, ಸುರಿಯುವ ಮಳೆಯಲ್ಲೂ ಚಾಲಕ ಛತ್ರಿ ಹಿಡಿದುಕೊಂಡು ಒಂದೇ ಕೈನಲ್ಲಿ ಬಸ್ ಚಾಲನೆ ಮಾಡುತ್ತಿರುವ ಆಘಾತಕಾರಿ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಸನ್ಮಾನ್ಯ @RLRBTM ಅವರೇ, ಇದು ನಮ್ಮ ಸರ್ಕಾರಿ ಬಸ್ಸುಗಳ ದುಃಸ್ಥಿತಿ. ಈ ರೀತಿ ಒಂದು ಕೈಯಲ್ಲಿ ಕೊಡೆ, ಒಂದು ಕಯ್ಯಲ್ಲಿ ಸ್ಟಿಯರಿಂಗ್ ವೀಲ್ ಬ್ಯಾಲೆನ್ಸ್ ಮಾಡುತ್ತ ಓಡಿಸುವುದರಿಂದ ಚಾಲಕರು ಹಾಗೂ ಪ್ರಯಾಣಿಕರ ಜೀವಕ್ಕೆ ಕುತ್ತು. ಇದೇನಾ ಚಾಲಕರಿಗೆ ಇರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ? (standard operating procedure). ಚಾಲಕರ,… pic.twitter.com/zcG43pdWvf
— Basanagouda R Patil (Yatnal) (ಮೋದಿಯವರ ಕುಟುಂಬ) (@BasanagoudaBJP) May 24, 2024
ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಎಕ್ಸ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು "ಸನ್ಮಾನ್ಯ ರಾಮಲಿಂಗಾರೆಡ್ಡಿ ಅವರೇ, ಇದು ನಮ್ಮ ಸರ್ಕಾರಿ ಬಸ್ಸುಗಳ ದುಃಸ್ಥಿತಿ. ಈ ರೀತಿ ಒಂದು ಕೈಯಲ್ಲಿ ಕೊಡೆ, ಒಂದು ಕೈಯಲ್ಲಿ ಸ್ಟಿಯರಿಂಗ್ ವೀಲ್ ಬ್ಯಾಲೆನ್ಸ್ ಮಾಡುತ್ತ ಓಡಿಸುವುದರಿಂದ ಚಾಲಕರು ಹಾಗೂ ಪ್ರಯಾಣಿಕರ ಜೀವಕ್ಕೆ ಕುತ್ತು. ಇದೇನಾ ಚಾಲಕರಿಗೆ ಇರುವ ಪ್ರಮಾಣಿತ ಕಾರ್ಯಾಚರಣೆ ವಿಧಾನ ? (standard operating procedure). ಚಾಲಕರ, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ಇರಲಿ." ಎಂದು ಹೇಳಿದ್ದಾರೆ.
ಕರ್ನಾಟಕ ಬಿಜೆಪಿ ವ್ಯಂಗ್ಯಚಿತ್ರವನ್ನು ಹಂಚಿಕೊಂಡಿದ್ದು ಕರ್ನಾಟಕದ ಸರ್ಕಾರದಿಂದ ಛತ್ರಿ ಭಾಗ್ಯಕ್ಕೆ ಚಾಲನೆ ಎಂದು ಸರ್ಕಾರವನ್ನು ಟೀಕಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications